ಯುಗಾದಿ ಸಮಯದಲ್ಲಿ ಮತ್ತೆ ಚಿಗುರಿದ ಪ್ರೀತಿ: ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದವರು ಕಟೆಕಟೆಯಲ್ಲಿ ಒಂದಾದರು: ಒಂದಾದ ದಂಪತಿಗೆ ಪ್ರೀತಿಯ ಪಾಠ ಹೇಳಿದ ನ್ಯಾಯಾಧೀಶರು

ಸಣ್ಣಪುಟ್ಟ ಜಗಳಗಳಿಂದ ಕೋರ್ಟಿನ ಮೆಟ್ಟಿಲೇರಿ ದೂರಾವಾಗಲು ನಿರ್ಧರಿಸಿದ್ದ ನಾಲ್ವರು ದಂಪತಿಗಳನ್ನು ಶನಿವಾರ ನಡೆದ ಲೋಕಾಅದಾಲತ್ ನಲ್ಲಿ ನ್ಯಾಯಾಧೀಶರುಗಳು ಹೇಳಿದ ಬುದ್ಧಿಮಾತಿನಿಂದ ಮತ್ತೆ ಒಂದಾಗಿ ಪರಸ್ಪರ ಪ್ರೀತಿ ಹಂಚಿಕೊಂಡಿರುವ ಸಂಭ್ರಮದ ಘಟನೆ ದೊಡ್ಡಬಳ್ಳಾಪುರದ ಸಿವಿಲ್ ಕೋರ್ಟ್ ಆವರಣದಲ್ಲಿ ನಡೆದಿದೆ.

ತಾಲ್ಲೂಕಿನ ವಿವಿಧ 4 ದಂಪತಿಗಳು ಸಾಂಸಾರಿಕ ಕಲಹದಿಂದ ವಿಚ್ಚೇದನಕ್ಕೆ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು. ನಂತರ ಆ ಜೋಡಿಗಳಿಗೆ ಮನವೊಲಿಸುವ ಮೂಲಕ ಎರಡು ಜೋಡಿಗಳು ಪ್ರಧಾನ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರಾದ ದಾಸರಿ ಕ್ರಾಂತಿಕಿರಣ್, ಮೊದಲನೇ ಅಡಿಷನಲ್ ನ್ಯಾಯಾಲಯದ ನ್ಯಾಯಾಧೀಶರಾದ ಪ್ರೀತಿ, 2ನೇ ಅಡಿಷನಲ್ ನ್ಯಾಯಾಲಯದ ನ್ಯಾಯಾಧೀಶರಾದ ರವಿ ಬೇಟೆಗಾರ, ಪ್ರಧಾನ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಪ್ರವೀಣ್ ಹಾಗೂ ಪ್ರಧಾನ ಹಿರಿಯ ನ್ಯಾಯಾಲಯದ ನ್ಯಾಯಾಧೀಶರಾದ ಶಿಲ್ಪಾ ಅವರ ಸಮ್ಮುಖದಲ್ಲಿ ಎರಡು ಜೋಡಿಗಳು ಪರಸ್ಪರ ಹಾರ ಬದಲಿಸಿ ಸಿಹಿ ತಿನ್ನಿಸುವ ಮೂಲಕ ಒಂದಾದರು. ಉಳಿದ ಎರಡು ಜೋಡಿಗಳು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ವಕೀಲರು ಹಾಗೂ ನ್ಯಾಯಾಧೀಶರ ಸಮ್ಮುಖದಲ್ಲಿ ನಗುನಗುತ್ತಾ ಸಾಂಸಾರಿಕ ಜೀವನಕ್ಕೆ ಹಿಂದಿರುಗಿದರು.

ಈ ವೇಳೆ ವಕೀಲರ ಸಂಘದ ಅಧ್ಯಕ್ಷ ರೇಣುಕಾಮೂರ್ತಿ, ನಿರ್ದೇಶಕರಾದ ಕನಕರಾಜು, ಜಗನಾಥ್, ಖಜಾಂಚಿ ಗೀತಾ, ವಕೀಲರುಗಳಾದ ಅಶೋಕ್, ಮಂಜುನಾಥ್ ಹಿರಿಯ ವಕೀಲರಾದ ನಿಸಮ್ ಉಲ್ಲಾ ಖಾನ್, ನರಸಿಂಹಮೂರ್ತಿ ಮಂಜುನಾಥ್, ಮಂಜುಳಾ ಹಾಗೂ ಅನುಪಮ, ಯಮುನಾ ಸೇರಿದಂತೆ ಹಲವರು ಇದ್ದರು.

Ramesh Babu

Journalist

Recent Posts

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

2 hours ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

4 hours ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

10 hours ago

ಹೃದಯ ವೈಶಾಲ್ಯತೆ ಮತ್ತು ಶುದ್ಧತೆ…

" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…

11 hours ago

ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ: ಪಿಡಿಒ ಗೌರಮ್ಮ

ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…

23 hours ago

ಅರ್ಹ ರೈತರು ಸೌಲಭ್ಯಗಳನ್ನು ಪಡೆದುಕೊಳ್ಳಿ : ಪಿಡಿಒ ರಂಜಿತ

ಚಿಕ್ಕನಾಯಕನಹಳ್ಳಿ ಸೆ.08: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…

23 hours ago