ಕುಖ್ಯಾತ ರೌಡಿ ಶೀಟರ್ ನೇಪಾಳಿ ಮಂಜನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಆನೇಕಲ್ ತಾಲ್ಲೂಕಿನ ಹೆಬ್ಬಗೋಡಿಯ ಗೊಲ್ಲಹಳ್ಳಿ ಮುಖ್ಯ ರಸ್ತೆಯಲ್ಲಿ ನಡೆದಿದೆ.ಸ್ನೇಹಿತರೊಂದಿಗೆ ಎಣ್ಣೆ ಪಾರ್ಟಿ ಮಾಡುವಾಗ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿ ಎಸ್ಕೇಪ್ ಆಗಿದ್ದಾರೆ.
ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಹೆಂಡ್ತಿ, ಮಕ್ಕಳಿದ್ದಾರೆ ಒಳ್ಳೆಯವರಾಗಿ ಬದುಕಿ ಎಂದು ಪೊಲೀಸರು ಕರೆದು ಬುದ್ಧಿ ಹೇಳಿದ್ದರು. ಸ್ನೇಹಿತರು, ಆಪ್ತರು ಕರೆದರೂ ಅಂತಾ ಹೋದರೆ ಪ್ರಾಣಕ್ಕೆ ಕುತ್ತು ತಂದುಕೊಳ್ಳುತ್ತೀರಾ ಅನ್ನೋ ಎಚ್ಚರಿಕೆ ಕೂಡ ಕೊಟ್ಟಿದ್ದರು. ಪೊಲೀಸರು ಎಷ್ಟೇ ಬುದ್ಧಿವಾದ ಹೇಳಿದರೂ ಬುದ್ಧಿ ಕಲಿಯದ ರೌಡಿಶೀಟರ್ ಇದೀಗ ಹಾದಿಬೀದಿಯಲ್ಲಿ ಹೆಣವಾಗಿ ಹೋಗಿದ್ದಾನೆ.
ರೌಡಿಶೀಟರ್ ಮಂಜ ಅಲಿಯಾಸ್ ನೇಪಾಳಿ ಮಂಜ, ಎರಡು ಕೊಲೆ, ಕೊಲೆ ಯತ್ನ ಸೇರಿದಂತೆ 12ಕ್ಕೂ ಹೆಚ್ಚು ಪ್ರಕರಣದಲ್ಲಿ ಭಾಗಿಯಾಗಿದ್ದ. ಈತನ ವಿರುದ್ಧ ಪೊಲೀಸರು ಗೂಂಡಾ ಕೇಸ್ ಓಪನ್ ಮಾಡಲಾಗಿತ್ತು. ಈ ನೇಪಾಳಿ ಮಂಜ ಇತ್ತೀಚೆಗಷ್ಟೇ ಕುಟುಂಬ ಸಮೇತ ಕುಣಿಗಲ್ಗೆ ಶಿಫ್ಟ್ ಆಗಿದ್ದ. ನಿನ್ನೆ ಯುಗಾದಿ ಹಬ್ಬ ಹಿನ್ನೆಲೆ ಸ್ನೇಹಿತರು ಕರೆದರೂ ಎಂದು ಕುಣಿಗಲ್ನಿಂದ ಬೆಂಗಳೂರಿಗೆ ರೌಡಿಶೀಟರ್ ಮಂಜ ಬಂದಿದ್ದಾನೆ. ಇಬ್ಬರು ಸ್ನೇಹಿತರ ಜೊತೆ ಆನೇಕಲ್ ತಾಲೂಕಿನ ಗೊಲ್ಲಹಳ್ಳಿ ಬಳಿ ನಿರ್ಜನ ಪ್ರದೇಶದಲ್ಲಿ ರಾತ್ರಿ ಎಣ್ಣೆ ಪಾರ್ಟಿ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಈ ವೇಳೆ 2 ಬೈಕ್ನಲ್ಲಿ ಬಂದ ಐವರ ಗ್ಯಾಂಗ್ ಲಾಂಗು, ಮಚ್ಚು, ಚಾಕುವಿನಿಂದ ದಾಳಿ ಮಾಡಿ ಮಂಜನನ್ನೂ ಕೊಚ್ಚಿ ಕೊಲೆ ಮಾಡಿದ್ದಾರೆ.
In der heutigen akademischen Welt steht die Qualität der schriftlichen Arbeiten im Mittelpunkt des Interesses.…
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…
ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…