Categories: ತುಮಕೂರು

ಯುಗಾದಿ ಹಬ್ಬದ ಅಂಗವಾಗಿ ಗ್ರಾಮದಲ್ಲಿ ಇಸ್ಪೀಟ್ ಆಟ:‌ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸ್ ದಾಳಿ: ಠಾಣೆಗೆ ಕರೆತಂದಿದ್ದವರ ಪೈಕಿ ಕಾಂತರಾಜು ಅನುಮಾನಾಸ್ಪದ ಸಾವು: ಠಾಣೆಯಲ್ಲಿ ತೀವ್ರ ಉದ್ವಿಗ್ನ ಪರಿಸ್ಥಿತಿ ನಿರ್ಮಾಣ

ಇಸ್ಪೀಟ್ ಆಡುತ್ತಿದ್ದಾರೆಂದು ವಶಕ್ಕೆ ಪಡೆದಿದ್ದ ವ್ಯಕ್ತಿಯೊಬ್ಬರು ಪೊಲೀಸ್ ವಶದಲ್ಲಿದ್ದಾಗಲೇ ಸಾವನ್ನಪ್ಪಿದ ಹಿನ್ನೆಲೆ ಗ್ರಾಮಸ್ಥರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಹುಳಿಯಾರು ಪೊಲೀಸ್ ಠಾಣೆಯಲ್ಲಿ ನಡೆದಿದೆ. ಠಾಣೆಯಲ್ಲಿ ತೀವ್ರ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.

ಯಳನಾಡು ಗ್ರಾಮದಲ್ಲಿ ಇಸ್ಪೀಟ್ ಆಟ ಆಡುತ್ತಿದ್ದಾರೆಂಬ ಖಚಿತ ಮಾಹಿತಿಯ ಮೇರೆಗೆ ಹುಳಿಯಾರು ಪೊಲೀಸರು ದಾಳಿ ನಡೆಸಿದ್ದರು.

ದಾಳಿ ವೇಳೆ ಕಾಂತರಾಜು (50) ಸೇರಿದಂತೆ ಆರು ಜನರನ್ನು ವಶಕ್ಕೆ ಪಡೆದ ಪೊಲೀಸರು ಠಾಣೆಗೆ ಕರೆತಂದಿದ್ದರು. ಆದರೆ, ಠಾಣೆಗೆ ಬಂದ ಕೆಲವೇ ಸಮಯದಲ್ಲಿ ಕಾಂತರಾಜು ಸಾವನ್ನಪ್ಪಿದ್ದಾರೆ. ಇದು ಗ್ರಾಮಸ್ಥರ ಮತ್ತು ಕುಟುಂಬಸ್ಥರ ಆಕ್ರೋಶಕ್ಕೆ ಕಾರಣವಾಯಿತು.

ಕಾಂತರಾಜು ಅವರ ಸಾವು ಪೊಲೀಸ್ ದೌರ್ಜನ್ಯದಿಂದಲೇ ನಡೆದಿದೆ ಎಂದು ಆರೋಪಿಸಿದ ನೂರಾರು ಗ್ರಾಮಸ್ಥರು, ಹುಳಿಯಾರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಬೀಗ ಜಡಿದರು. ಮೃತದೇಹವನ್ನು ಠಾಣೆಯ ಒಳಗೇ ಇಟ್ಟುಕೊಂಡು, ತಪ್ಪಿತಸ್ಥ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪಟ್ಟು ಹಿಡಿದರು. ಠಾಣೆಯ ಆವರಣದಲ್ಲಿ ಪರಿಸ್ಥಿತಿ ಕೈಮೀರುತ್ತಿದ್ದಂತೆ ಹೆಚ್ಚಿನ ಪೊಲೀಸ್ ಭದ್ರತೆ ನಿಯೋಜಿಸಲಾಯಿತು.

ಪ್ರಾಥಮಿಕ ಮಾಹಿತಿಯ ಪ್ರಕಾರ, ಠಾಣೆಗೆ ಕರೆತಂದ ಬಳಿಕ ಕಾಂತರಾಜು ಅವರಿಗೆ ಪೊಲೀಸರ ಭಯದಿಂದಾಗಿ ತೀವ್ರ ಹೃದಯಾಘಾತ ಸಂಭವಿಸಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಆದರೆ, ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರವಷ್ಟೇ ಸಾವಿಗೆ ನಿಖರ ಕಾರಣ ತಿಳಿಯಲಿದೆ.

ವಿಷಯ ತಿಳಿಯುತ್ತಿದ್ದಂತೆಯೇ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ ಹುಳಿಯಾರು ಠಾಣೆಗೆ ಭೇಟಿ ನೀಡಿದರು. ಆಕ್ರೋಶಗೊಂಡಿದ್ದ ಗ್ರಾಮಸ್ಥರು ಮತ್ತು ಮೃತನ ಕುಟುಂಬಸ್ಥರೊಂದಿಗೆ ಮಾತುಕತೆ ನಡೆಸಿದ ಎಸ್ಪಿ, ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಲಾಗುವುದು. ಒಂದು ವೇಳೆ ಪೊಲೀಸರ ತಪ್ಪು ಕಂಡುಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಎಸ್ಪಿ ಅವರ ಭರವಸೆಯ ನಂತರ ಗ್ರಾಮಸ್ಥರು ಪ್ರತಿಭಟನೆಯನ್ನು ಕೈಬಿಟ್ಟರು. ಬಳಿಕ ಮೃತದೇಹವನ್ನು ಠಾಣೆಯಿಂದ ಹೊರತೆಗೆದು ತುಮಕೂರು ಜಿಲ್ಲಾಸ್ಪತ್ರೆಯ ಶವಗಾರಕ್ಕೆ ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ. ಪರೀಕ್ಷೆಯ ನಂತರ ಮೃತದೇಹವನ್ನು ವಾರಸುದಾರರಿಗೆ ಹಸ್ತಾಂತರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

7 hours ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

2 days ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

3 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

3 days ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

4 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

4 days ago