ಯುಗಾದಿ ಹಬ್ಬದ ಆಚರಣೆ ಸಮಯದಲ್ಲಿ ಜಿಲ್ಲೆಯ ಯಾವುದೇ ಹೋಟೆಲ್, ವಸತಿ ಗೃಹ, ತೋಟದ ಮನೆ , ರಸ್ತೆ ಬದಿಗಳಲ್ಲಿ ಟೆಂಟ್ ನಿರ್ಮಿಸಿ ಜೂಜು, ಮಟ್ಕಾ, ಇಸ್ಪೀಟ್, ಬೆಟ್ಟಿಂಗ್ ಇತ್ಯಾದಿ ಚಟುವಟಿಕೆಗಳಲ್ಲಿ ತೊಡಗುವವರ ವಿರುದ್ಧ ಕ್ರಮ ವಹಿಸಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ ಬಾಬಾ ಖಡಕ್ ಎಚ್ಚರಿಕೆ ಕೊಟ್ಟರು.
ರಂಜಾನ್ ಹಬ್ಬ, ಯುಗಾದಿ ಹಬ್ಬ ಮತ್ತು ಶ್ರೀರಾಮ ಶೋಭಾ ಯಾತ್ರೆ ಪ್ರಯುಕ್ತ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೋಸ್ ವತಿಯಿಂದ ಜಿಲ್ಲಾ ಮಟ್ಟದ ನಗರದ ಬಾಬು ಜಗಜೀವನ್ ರಾಮ್ ಭವನದಲ್ಲಿ ಶಾಂತಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಧಾರ್ಮಿಕ ವಿಚಾರವಾಗಿ ಪ್ರಚೋದನಾಕಾರಿ ಪೋಸ್ಟ್ ಅಥವಾ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಬಾರದು, ಯಾವುದೇ ಕಾನೂನುಬಾಹಿರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳದಂತೆ ಸೂಚನೆ ನೀಡಿದರು.
ಯುಗಾದಿ, ರಂಜಾನ್, ಶ್ರೀರಾಮ ನಮವಿ ಹಬ್ಬಗಳನ್ನು ಶಾಂತಿ, ಸೌಹಾರ್ದತೆ ಹಾಗೂ ಸಂಭ್ರಮದಿಂದ ಆಚರಿಸಬೇಕು. ಆ ಮೂಲಕ ಎಲ್ಲರೂ ಸಾಮರಸ್ಯ ಮೆರೆಯಬೇಕು. ಯಾರಾದರೂ ಶಾಂತಿ- ಕಾನೂನು ಸುವ್ಯವಸ್ಥೆ ಕದಡುವ ಕೆಲಸ ಮಾಡಿದರೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದರು.
ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ಕಂಡುಬಂದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಯಾವುದೇ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದರು.
ಸಭೆಯಲ್ಲಿ ಎಎಸ್ಪಿ ನಾಗೇಶ್ ಕುಮಾರ್, ಡಿವೈಎಸ್ಪಿ ರವಿ.ಪಿ, ನಗರಸಭೆ ಪೌರಾಯುಕ್ತ ಕಾರ್ತೀಕೇಶ್ವರ್, ತಹಶೀಲ್ದಾರ್ ವಿಭಾ ವಿದ್ಯಾ ರಾಠೋಡ್, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ವಡ್ಡರಹಳ್ಳಿ ರವಿ ಸೇರಿದಂತೆ ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮರೇಶ್ ಗೌಡ, ಗ್ರಾಮಾಂತರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಸಾದಿಕ್ ಪಾಷಾ, ದೊಡ್ಡಬೆಳವಂಗಲ ಠಾಣೆ ಪೊಲೀಸ್ ಇನ್ಸ್ ಪೆಕ್ಟರ್ ಕಲ್ಲಪ್ಪ ಶಂಕರಪ್ಪ ಖರಾತ್ , ಹೊಸಹಳ್ಳಿ ಠಾಣೆ ಇನ್ಸ್ ಪೆಕ್ಟರ್ ರಾವ್ ಗಣೇಶ್, ಮಹಿಳಾ ಠಾಣೆ ಇನ್ಸ್ ಪೆಕ್ಟರ್ ಡಾ.ನವೀನ್ ಕುಮಾರ್ ಎಂ.ಬಿ ಸೇರಿದಂತೆ ಡಿವೈಎಸ್ ಪಿ ವಿಭಾಗದ ಎಲ್ಲಾ ಠಾಣೆಗಳ ಇನ್ಸ್ ಪೆಕ್ಟರ್ ಗಳು ಉಪಸ್ಥಿತರಿದ್ದರು.
ಹೊಂಗೆ ಮರದಲ್ಲಿ ನೇತಾಡುತ್ತಿರುವ ಸ್ಥಿತಿಯಲ್ಲಿ ತಲೆ ಬುರುಡೆ ಪತ್ತೆಯಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಬ್ಯಾಂಕ್ ಸರ್ಕಲ್…
ಸಿದ್ದಾಪುರ: ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯ ಜೋಗಿನ್ ಮಠ ಕ್ರಾಸ್ ಬಳಿ ಜಲ್ಲಿ ತುಂಬಿದ ಲಾರಿಯೊಂದು ರಸ್ತೆಗೆ ಉರುಳಿದ ಪರಿಣಾಮ,…
ದೇವರಹಿಪ್ಪರಗಿ: ಪತ್ನಿಯನ್ನು ತಾನೇ ಕೊಂ*ದು ಶವವನ್ನು ಮನೆಯ ಆವರಣದಲ್ಲೇ ಹೂತುಹಾಕಿ ಆಕೆ ನಾಪತ್ತೆಯಾಗಿದ್ದಾಳೆ ಎಂದು ಕಥೆ ಕಟ್ಟಿದ್ದ ಆರೋಪಿಯನ್ನು ಬಂಧಿಸುವಲ್ಲಿ…
ಬೈಕ್ ನಲ್ಲಿ ಪತ್ನಿಯೊಂದಿಗೆ ಸಂಬಂಧಿಕರ ಮನೆಯ ಸಾವಿಗೆ ತೆರಳುತ್ತಿದ್ದ ಬೈಕ್ ಸವಾರನೊಬ್ಬ ಹೆದ್ದಾರಿಯಲ್ಲಿ ವಾಹನ ತಪಾಸಣೆ ಮಾಡುತ್ತಿದ್ದ ಪೋಲೀಸರನ್ನು ಕಂಡು…
ಸ್ವಾಮಿಯೇ........ ಶರಣಂ ಅಯ್ಯಪ್ಪ......... ಮಹಿಳೆಯರಿಗೆ ಕೇರಳದ ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಪ್ರವೇಶ ನೀಡಬೇಕೆ ? ಬೇಡವೇ ? ಎಂಬ ಬಗ್ಗೆ…
ಕರ್ತವ್ಯದ ವೇಳೆ ಮಡಿದ ಬೆಸ್ಕಾಂನ ಮೂವರು ಸಿಬ್ಬಂದಿಯ ಕುಟುಂಬಸ್ಥರಿಗೆ ಇಂಧನ ಸಚಿವ ಕೆ.ಜೆ ಜಾರ್ಜ್ ತಲಾ ಒಂದು ಕೋಟಿ ರೂ.…