ಯುಗಾದಿ ಹಬ್ಬ: ನಾಳಿನ ಹಬ್ಬಕ್ಕೆ ಇಂದೇ ಮಾರುಕಟ್ಟೆಯಲ್ಲಿ ಖರೀದಿ ಭರಾಟೆ ಜೋರು….

ಬಿಸಿಲಿನ ತಾಪಮಾನದ ಜೊತೆಗೆ ಯುಗಾದಿ, ರಂಜಾನ್, ಶ್ರೀರಾಮ ನವಮಿ ಹೀಗೆ ಸಾಲು ಸಾಲು ಹಬ್ಬಗಳು. ಹಬ್ಬವೆಂದ ಕೂಡಲೇ ಸಂಭ್ರಮ, ಸಡಗರ. ಯಾವುದೇ ಹಬ್ಬ ಬಂತೆಂದರೆ ಸಂಭ್ರಮ, ಸಡಗರದ ಜೊತೆಗೆ ಮನೆ ಯಜಮಾನನ ಜೇಬಿನಲ್ಲಿರುವ ಹಣ ಕೂಡ ಖರ್ಚಾಗುತ್ತದೆ.

ಅದರಲ್ಲೂ ಯುಗಾದಿ ಹಬ್ಬದಂದು ಪ್ರಕೃತಿಯೇ ಹೊಸ ಹುಟ್ಟು ಪಡೆಯುವ, ಮುಖ್ಯವಾಗಿ ಸಸ್ಯ ಲೋಕ ಚಿಗುರಿದಾಗ ಕಾಣುವ ಸಂಭ್ರಮ ನಮ್ಮ ಅರಿವಿಗೆ ಬರುತ್ತದೆ……..

ಯುಗಾದಿ ಬಂತೆಂದರೆ ಮಾರುಕಟ್ಟೆ, ಬಟ್ಟೆ ಅಂಗಡಿ, ದಿನಸಿ ಅಂಗಡಿ ಹೀಗೆ ಎಲ್ಲೆಡೆ ವ್ಯಾಪಾರ ಜೋರಾಗಿರುತ್ತದೆ. ಬಿಸಿಲ ತೀವ್ರತೆ ಹಾಗೂ ಮಾಸಾಂತಕ್ಕೆ ಹಬ್ಬ ಬಂದಿರುವುದರಿಂದ ಜನರಲ್ಲಿ ಹಬ್ಬದ ಉತ್ಸಾಹಕ್ಕೇನು ಕಡಿಮೆ ಇಲ್ಲ.

ದೊಡ್ಡಬಳ್ಳಾಪು ನಗರದ ಮಾರುಕಟ್ಟೆಯಲ್ಲಿ ನಾಳಿನ ಯುಗಾದಿ ಹಬ್ಬಕ್ಕೆ‌ ಇಂದೇ (ಶನಿವಾರ) ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿ ಜೋರಾಗಿತ್ತು.

ಮಾವಿನ ತಳಿರು, ಬೇವಿನ ಹೂವು, ಪುಟಾಣಿ ಮಿಶ್ರಿತ ಎಳ್ಳುಬೆಲ್ಲ, ಹೂವು, ಹಣ್ಣುಗಳನ್ನು ಜನರು ಖರೀದಿಸುತ್ತಿದ್ದಾರೆ.

ಬಟ್ಟೆ ಅಂಗಡಿಗಳು, ಹೂವಿನ ಮಾರುಕಟ್ಟೆ, ಸಿಹಿ ತಿನಿಸುಗಳ ಮಾರಾಟ ಅಂಗಡಿ ಮತ್ತು ತರಕಾರಿ ಅಂಗಡಿಗಳಲ್ಲಿ ಜನದಟ್ಟಣೆ ಕಂಡುಬಂದಿತು. ಗ್ರಾಮೀಣ ಭಾಗದ ಜನರು ಹಬ್ಬದ ಪದಾರ್ಥಗಳ ಖರೀದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು.

ಮಾರುಕಟೆಯಲ್ಲಿ ಕೆಲವೊಂದು ಸಾಮಾಗ್ರಿಗಳ ದರ ಇಳಿಕೆ, ಏರಿಕೆ ಇದ್ದರೂ ಖರೀದಿ ಪ್ರಕ್ರಿಯೆಯಲ್ಲಿ ಗ್ರಾಹಕರು, ಮಾರಾಟ ಮಾಡುವಲ್ಲಿ ಮಾರಾಟಗಾರರು ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.

ಹೂ ಬೆಲೆ ತುಸು ಏರಿಕೆ:

ಒಂದು ಕೆ.ಜಿ ಬಿಳಿ ಸೇವಂತಿಗೆ ಬೆಲೆ 300-350ರೂ.

ಹಳದಿ ಸೇವಂತಿಗೆ ಒಂದು ಕೆಜಿಗೆ 280-300ರೂ.

ಕನಕಾಂಬರ ಕೆಜಿ 1 ಸಾವಿರ,‌ ಮೊಳ 50-80ರೂ.

ಮಲ್ಲಿಗೆ ಹೂ ಕೆಜಿ 2 ಸಾವಿರ, ಮೊಳ 100‌ ರೂ.

ಬಟನ್ಸ್ ಕೆ.ಜಿ 200 ರೂ.

ಚೆಂಡು ಹೂ ಕೆಜಿ 80-100 ರೂ.

ದಿನಸಿ ಖರೀದಿ

ಯುಗಾದಿ ಹಬ್ಬವನ್ನು ಹೊಸ ವರ್ಷ ಎಂದು ಆಚರಿಸುವುದರಿಂದ ಹಬ್ಬದ ಅಡುಗೆಯಲ್ಲಿ ಹೋಳಿಗೆ ವಿಶೇಷ. ಹಾಗಾಗಿ ಜನರು ಅಡುಗೆಗೆ ಅಗತ್ಯವಾದ ತೊಗರಿಬೇಳೆ, ಬೆಲ್ಲ, ಸಕ್ಕರೆ, ಎಣ್ಣೆ ಸೇರಿ ಇತರೆ ದಿನಸಿ ಖರೀದಿಯಲ್ಲಿ ನಿರತರಾಗಿದ್ದರು. ಇದಲ್ಲದೆ ಹಬ್ಬದ ನಂತರ ಮಂಗಳವಾರ ವರ್ಷತೊಡಕು ಇರುವುದರಿಂದ ಗ್ರಾಹಕರು ಈರುಳ್ಳಿ, ಬೆಳ್ಳುಳ್ಳಿ, ಶುಂಠಿ, ನಿಂಬೆಹಣ್ಣು, ಕೊತ್ತಂಬರಿ ಸೊಪುಪ, ಪುದೀನಾ, ಸೌತೆಕಾಯಿ, ತೆಂಗಿನಕಾಯಿ ಖರೀದಿ ಮಾಡುತ್ತಿದ್ದಾರೆ.

Ramesh Babu

Journalist

Recent Posts

ಚಿತ್ರದುರ್ಗ ಅಪಘಾತದಲ್ಲಿ ಮೂವರು ರಿಸರ್ವ್ ಸಬ್ ಇನ್ಸ್‌ಪೆಕ್ಟರ್‌ಗಳ ಸಾವು ಪ್ರಕರಣ: ಮೃತರ ಕುಟುಂಬಕ್ಕೆ ತಲಾ ರೂ.5 ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ ರೂ.2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಹೆಗ್ಗೆರೆ ಗೇಟ್ ಬಳಿ ಭಾನುವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಸಾವಿಗೀಡಾದ ಮೂವರು ರಿಸರ್ವ್ ಸಬ್…

42 minutes ago

ಗರಿಗೆದರಿದ “TEAM MSS” ಚಟುವಟಿಕೆ: ಯಾರದ್ದು, ಏನಿದು ‘ಟೀಂ ಎಂಎಸ್ ಎಸ್’….? ಸಂಪೂರ್ಣ ಮಾಹಿತಿಗಾಗಿ ಈ ಸುದ್ದಿಯನ್ನು ಓದಿ….

ಒಂದು ಉಪಚುನಾವಣೆ ಒಳಗೊಂಡಂತೆ ನಾಲ್ಕು ವಿಧಾನಸಭೆ ಚುನಾವಣೆಗಳನ್ನು ಎದುರಿಸಿದ ಬಿ.ಮುನೇಗೌಡ ತಾಲೂಕಿಗೆ ನೀರು, ಕಲ್ಲು ಮುನೇಗೌಡ ಎಂದೇ ಚಿರಪರಿಚಿತರಾಗಿದ್ದಾರೆ...ಇತ್ತೀಚೆಗೆ ನಡೆದ…

3 hours ago

ಇಂದಿನಿಂದ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01 ಆರಂಭ: ಪರೀಕ್ಷೆಗೆ ಬಂದ ವಿದ್ಯಾರ್ಥಿಗಳಿಗೆ ಗುಲಾಬಿ ನೀಡಿ ಸ್ವಾಗತಿಸಿದ ಬಿಇಒ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು  ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

6 hours ago

ಯುಗಾದಿ…..

ವಿಶ್ವ ಮಹಾಯುದ್ಧದ ಕಾರ್ಮೋಡಗಳ ನಡುವೆ, ಅತ್ಯಂತ ಅಗತ್ಯದ ಗ್ಯಾಸ್ ಸಿಲಿಂಡರ್ಗಳ ಅಭಾವದ ನಡುವೆ, ಪ್ರಕ್ಷ್ಯುಬ್ಧ ಮನಸ್ಥಿತಿಯ ನಡುವೆ, ಸಂಭ್ರಮದ ಹೊಸ…

9 hours ago

ಯುವ ಆಪದ್ ಮಿತ್ರ ಯೋಜನೆ: ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಶಿಬಿರ

ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…

19 hours ago

ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅಮಾನತು

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…

19 hours ago