ಬಿಸಿಲಿನ ತಾಪಮಾನದ ಜೊತೆಗೆ ಯುಗಾದಿ, ರಂಜಾನ್, ಶ್ರೀರಾಮ ನವಮಿ ಹೀಗೆ ಸಾಲು ಸಾಲು ಹಬ್ಬಗಳು. ಹಬ್ಬವೆಂದ ಕೂಡಲೇ ಸಂಭ್ರಮ, ಸಡಗರ. ಯಾವುದೇ ಹಬ್ಬ ಬಂತೆಂದರೆ ಸಂಭ್ರಮ, ಸಡಗರದ ಜೊತೆಗೆ ಮನೆ ಯಜಮಾನನ ಜೇಬಿನಲ್ಲಿರುವ ಹಣ ಕೂಡ ಖರ್ಚಾಗುತ್ತದೆ.
ಅದರಲ್ಲೂ ಯುಗಾದಿ ಹಬ್ಬದಂದು ಪ್ರಕೃತಿಯೇ ಹೊಸ ಹುಟ್ಟು ಪಡೆಯುವ, ಮುಖ್ಯವಾಗಿ ಸಸ್ಯ ಲೋಕ ಚಿಗುರಿದಾಗ ಕಾಣುವ ಸಂಭ್ರಮ ನಮ್ಮ ಅರಿವಿಗೆ ಬರುತ್ತದೆ……..
ದೊಡ್ಡಬಳ್ಳಾಪು ನಗರದ ಮಾರುಕಟ್ಟೆಯಲ್ಲಿ ನಾಳಿನ ಯುಗಾದಿ ಹಬ್ಬಕ್ಕೆ ಇಂದೇ (ಶನಿವಾರ) ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿ ಜೋರಾಗಿತ್ತು.
ಬಟ್ಟೆ ಅಂಗಡಿಗಳು, ಹೂವಿನ ಮಾರುಕಟ್ಟೆ, ಸಿಹಿ ತಿನಿಸುಗಳ ಮಾರಾಟ ಅಂಗಡಿ ಮತ್ತು ತರಕಾರಿ ಅಂಗಡಿಗಳಲ್ಲಿ ಜನದಟ್ಟಣೆ ಕಂಡುಬಂದಿತು. ಗ್ರಾಮೀಣ ಭಾಗದ ಜನರು ಹಬ್ಬದ ಪದಾರ್ಥಗಳ ಖರೀದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು.
ಒಂದು ಕೆ.ಜಿ ಬಿಳಿ ಸೇವಂತಿಗೆ ಬೆಲೆ 300-350ರೂ.
ಹಳದಿ ಸೇವಂತಿಗೆ ಒಂದು ಕೆಜಿಗೆ 280-300ರೂ.
ಕನಕಾಂಬರ ಕೆಜಿ 1 ಸಾವಿರ, ಮೊಳ 50-80ರೂ.
ಮಲ್ಲಿಗೆ ಹೂ ಕೆಜಿ 2 ಸಾವಿರ, ಮೊಳ 100 ರೂ.
ಬಟನ್ಸ್ ಕೆ.ಜಿ 200 ರೂ.
ಚೆಂಡು ಹೂ ಕೆಜಿ 80-100 ರೂ.
ಯುಗಾದಿ ಹಬ್ಬವನ್ನು ಹೊಸ ವರ್ಷ ಎಂದು ಆಚರಿಸುವುದರಿಂದ ಹಬ್ಬದ ಅಡುಗೆಯಲ್ಲಿ ಹೋಳಿಗೆ ವಿಶೇಷ. ಹಾಗಾಗಿ ಜನರು ಅಡುಗೆಗೆ ಅಗತ್ಯವಾದ ತೊಗರಿಬೇಳೆ, ಬೆಲ್ಲ, ಸಕ್ಕರೆ, ಎಣ್ಣೆ ಸೇರಿ ಇತರೆ ದಿನಸಿ ಖರೀದಿಯಲ್ಲಿ ನಿರತರಾಗಿದ್ದರು. ಇದಲ್ಲದೆ ಹಬ್ಬದ ನಂತರ ಮಂಗಳವಾರ ವರ್ಷತೊಡಕು ಇರುವುದರಿಂದ ಗ್ರಾಹಕರು ಈರುಳ್ಳಿ, ಬೆಳ್ಳುಳ್ಳಿ, ಶುಂಠಿ, ನಿಂಬೆಹಣ್ಣು, ಕೊತ್ತಂಬರಿ ಸೊಪುಪ, ಪುದೀನಾ, ಸೌತೆಕಾಯಿ, ತೆಂಗಿನಕಾಯಿ ಖರೀದಿ ಮಾಡುತ್ತಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯಲ್ಲಿ ಬೋರ್ ವೆಲ್ ಗಳ ವಿದ್ಯುತ್ ಕೇಬಲ್ ಕಳ್ಳರ ಹಾವಳಿ ಮಿತಿಮೀರಿದೆ. ಕಳೆದ ರಾತ್ರಿ ಹತ್ತಾರು…
ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್ಪೋರ್ಟ್ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ವಿದೇಶಗಳಿಂದ…
ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…
ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…
ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…
ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್…