ಬಿಸಿಲಿನ ತಾಪಮಾನದ ಜೊತೆಗೆ ಯುಗಾದಿ, ರಂಜಾನ್, ಶ್ರೀರಾಮ ನವಮಿ ಹೀಗೆ ಸಾಲು ಸಾಲು ಹಬ್ಬಗಳು. ಹಬ್ಬವೆಂದ ಕೂಡಲೇ ಸಂಭ್ರಮ, ಸಡಗರ. ಯಾವುದೇ ಹಬ್ಬ ಬಂತೆಂದರೆ ಸಂಭ್ರಮ, ಸಡಗರದ ಜೊತೆಗೆ ಮನೆ ಯಜಮಾನನ ಜೇಬಿನಲ್ಲಿರುವ ಹಣ ಕೂಡ ಖರ್ಚಾಗುತ್ತದೆ.
ಅದರಲ್ಲೂ ಯುಗಾದಿ ಹಬ್ಬದಂದು ಪ್ರಕೃತಿಯೇ ಹೊಸ ಹುಟ್ಟು ಪಡೆಯುವ, ಮುಖ್ಯವಾಗಿ ಸಸ್ಯ ಲೋಕ ಚಿಗುರಿದಾಗ ಕಾಣುವ ಸಂಭ್ರಮ ನಮ್ಮ ಅರಿವಿಗೆ ಬರುತ್ತದೆ……..
ದೊಡ್ಡಬಳ್ಳಾಪು ನಗರದ ಮಾರುಕಟ್ಟೆಯಲ್ಲಿ ನಾಳಿನ ಯುಗಾದಿ ಹಬ್ಬಕ್ಕೆ ಇಂದೇ (ಶನಿವಾರ) ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿ ಜೋರಾಗಿತ್ತು.
ಬಟ್ಟೆ ಅಂಗಡಿಗಳು, ಹೂವಿನ ಮಾರುಕಟ್ಟೆ, ಸಿಹಿ ತಿನಿಸುಗಳ ಮಾರಾಟ ಅಂಗಡಿ ಮತ್ತು ತರಕಾರಿ ಅಂಗಡಿಗಳಲ್ಲಿ ಜನದಟ್ಟಣೆ ಕಂಡುಬಂದಿತು. ಗ್ರಾಮೀಣ ಭಾಗದ ಜನರು ಹಬ್ಬದ ಪದಾರ್ಥಗಳ ಖರೀದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು.
ಒಂದು ಕೆ.ಜಿ ಬಿಳಿ ಸೇವಂತಿಗೆ ಬೆಲೆ 300-350ರೂ.
ಹಳದಿ ಸೇವಂತಿಗೆ ಒಂದು ಕೆಜಿಗೆ 280-300ರೂ.
ಕನಕಾಂಬರ ಕೆಜಿ 1 ಸಾವಿರ, ಮೊಳ 50-80ರೂ.
ಮಲ್ಲಿಗೆ ಹೂ ಕೆಜಿ 2 ಸಾವಿರ, ಮೊಳ 100 ರೂ.
ಬಟನ್ಸ್ ಕೆ.ಜಿ 200 ರೂ.
ಚೆಂಡು ಹೂ ಕೆಜಿ 80-100 ರೂ.
ಯುಗಾದಿ ಹಬ್ಬವನ್ನು ಹೊಸ ವರ್ಷ ಎಂದು ಆಚರಿಸುವುದರಿಂದ ಹಬ್ಬದ ಅಡುಗೆಯಲ್ಲಿ ಹೋಳಿಗೆ ವಿಶೇಷ. ಹಾಗಾಗಿ ಜನರು ಅಡುಗೆಗೆ ಅಗತ್ಯವಾದ ತೊಗರಿಬೇಳೆ, ಬೆಲ್ಲ, ಸಕ್ಕರೆ, ಎಣ್ಣೆ ಸೇರಿ ಇತರೆ ದಿನಸಿ ಖರೀದಿಯಲ್ಲಿ ನಿರತರಾಗಿದ್ದರು. ಇದಲ್ಲದೆ ಹಬ್ಬದ ನಂತರ ಮಂಗಳವಾರ ವರ್ಷತೊಡಕು ಇರುವುದರಿಂದ ಗ್ರಾಹಕರು ಈರುಳ್ಳಿ, ಬೆಳ್ಳುಳ್ಳಿ, ಶುಂಠಿ, ನಿಂಬೆಹಣ್ಣು, ಕೊತ್ತಂಬರಿ ಸೊಪುಪ, ಪುದೀನಾ, ಸೌತೆಕಾಯಿ, ತೆಂಗಿನಕಾಯಿ ಖರೀದಿ ಮಾಡುತ್ತಿದ್ದಾರೆ.
ನಾಳೆ (ಜು.29) ರಂದು ದೊಡ್ಡಬಳ್ಳಾಪುರ ತಾಲೂಕಿನ ಪವಿತ್ರ ಹಾಗೂ ಪುಣ್ಯ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬವನ್ನು…
ಭಾರತೀಯರು ಹಬ್ಬ-ಹರಿದಿನಗಳ ಪ್ರಿಯರು ಒಂದೋದು ಹಬ್ಬಕ್ಕೆ ತನ್ನದೇಯಾದ ವೈಶಿಷ್ಟತೆಯನ್ನು ನೀಡುತ್ತಾ, ಭಕ್ತಿ-ಭಾವದಿಂದ ನೂರಾರು ತಲೆಮಾರುಗಳಿಂದ ಆಚರಿಸಿಕೊಂಡು ಬರುತ್ತಿದ್ದಾರೆ. ಅದರಲ್ಲಿ ಉತ್ತರ…
ಕೋಲಾರ: ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಸಿಐಟಿಯು ನೇತೃತ್ವದ ಗ್ರಾಮ…
ಜೂನ್ 4 ರಂದು ಐಪಿಎಲ್ ಟ್ರೋಫಿ ಗೆದ್ದ ಆರ್ಸಿಬಿ ತಂಡವನ್ನು ಅಭಿನಂದಿಸಲು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದ ವೇಳೆ ಕಾಲ್ತುಳಿತ…
ಭಟ್ಕಳದ ಹೆಬಳೆ ತೆಂಗಿನಗುಂಡಿಯಲ್ಲಿರುವ ಶ್ರೀ ಬ್ರಹ್ಮಲಿಂಗೇಶ್ವರ ನಾಗದೇವತಾ ಪ್ರಸನ್ನ ದೇವಸ್ಥಾನದಲ್ಲಿ ಭಾನುವಾರ ಹಾಡುಹಗಲೇ ನಡೆದ ಕಳ್ಳತನ ಪ್ರಕರಣದ ಆರೋಪಿಯನ್ನು ಭಟ್ಕಳ…
ಸುಪ್ರಭಾತ.......... ಭಾರತೀಯ ಸಮಾಜ ಎಂಬುದು ಮಧ್ಯಮ ವರ್ಗದ ಸಂತೆ ಇದ್ದಂತೆ. ಇಲ್ಲಿ ಬಹುತೇಕ ಮಧ್ಯಮ ವರ್ಗದವರೇ ಅತಿ ಹೆಚ್ಚು ಮಧ್ಯಮ…