ಯುಗಾದಿ ಹಬ್ಬ: ನಾಳಿನ ಹಬ್ಬಕ್ಕೆ ಇಂದೇ ಮಾರುಕಟ್ಟೆಯಲ್ಲಿ ಖರೀದಿ ಭರಾಟೆ ಜೋರು….

ಬಿಸಿಲಿನ ತಾಪಮಾನದ ಜೊತೆಗೆ ಯುಗಾದಿ, ರಂಜಾನ್, ಶ್ರೀರಾಮ ನವಮಿ ಹೀಗೆ ಸಾಲು ಸಾಲು ಹಬ್ಬಗಳು. ಹಬ್ಬವೆಂದ ಕೂಡಲೇ ಸಂಭ್ರಮ, ಸಡಗರ. ಯಾವುದೇ ಹಬ್ಬ ಬಂತೆಂದರೆ ಸಂಭ್ರಮ, ಸಡಗರದ ಜೊತೆಗೆ ಮನೆ ಯಜಮಾನನ ಜೇಬಿನಲ್ಲಿರುವ ಹಣ ಕೂಡ ಖರ್ಚಾಗುತ್ತದೆ.

ಅದರಲ್ಲೂ ಯುಗಾದಿ ಹಬ್ಬದಂದು ಪ್ರಕೃತಿಯೇ ಹೊಸ ಹುಟ್ಟು ಪಡೆಯುವ, ಮುಖ್ಯವಾಗಿ ಸಸ್ಯ ಲೋಕ ಚಿಗುರಿದಾಗ ಕಾಣುವ ಸಂಭ್ರಮ ನಮ್ಮ ಅರಿವಿಗೆ ಬರುತ್ತದೆ……..

ಯುಗಾದಿ ಬಂತೆಂದರೆ ಮಾರುಕಟ್ಟೆ, ಬಟ್ಟೆ ಅಂಗಡಿ, ದಿನಸಿ ಅಂಗಡಿ ಹೀಗೆ ಎಲ್ಲೆಡೆ ವ್ಯಾಪಾರ ಜೋರಾಗಿರುತ್ತದೆ. ಬಿಸಿಲ ತೀವ್ರತೆ ಹಾಗೂ ಮಾಸಾಂತಕ್ಕೆ ಹಬ್ಬ ಬಂದಿರುವುದರಿಂದ ಜನರಲ್ಲಿ ಹಬ್ಬದ ಉತ್ಸಾಹಕ್ಕೇನು ಕಡಿಮೆ ಇಲ್ಲ.

ದೊಡ್ಡಬಳ್ಳಾಪು ನಗರದ ಮಾರುಕಟ್ಟೆಯಲ್ಲಿ ನಾಳಿನ ಯುಗಾದಿ ಹಬ್ಬಕ್ಕೆ‌ ಇಂದೇ (ಶನಿವಾರ) ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿ ಜೋರಾಗಿತ್ತು.

ಮಾವಿನ ತಳಿರು, ಬೇವಿನ ಹೂವು, ಪುಟಾಣಿ ಮಿಶ್ರಿತ ಎಳ್ಳುಬೆಲ್ಲ, ಹೂವು, ಹಣ್ಣುಗಳನ್ನು ಜನರು ಖರೀದಿಸುತ್ತಿದ್ದಾರೆ.

ಬಟ್ಟೆ ಅಂಗಡಿಗಳು, ಹೂವಿನ ಮಾರುಕಟ್ಟೆ, ಸಿಹಿ ತಿನಿಸುಗಳ ಮಾರಾಟ ಅಂಗಡಿ ಮತ್ತು ತರಕಾರಿ ಅಂಗಡಿಗಳಲ್ಲಿ ಜನದಟ್ಟಣೆ ಕಂಡುಬಂದಿತು. ಗ್ರಾಮೀಣ ಭಾಗದ ಜನರು ಹಬ್ಬದ ಪದಾರ್ಥಗಳ ಖರೀದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು.

ಮಾರುಕಟೆಯಲ್ಲಿ ಕೆಲವೊಂದು ಸಾಮಾಗ್ರಿಗಳ ದರ ಇಳಿಕೆ, ಏರಿಕೆ ಇದ್ದರೂ ಖರೀದಿ ಪ್ರಕ್ರಿಯೆಯಲ್ಲಿ ಗ್ರಾಹಕರು, ಮಾರಾಟ ಮಾಡುವಲ್ಲಿ ಮಾರಾಟಗಾರರು ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.

ಹೂ ಬೆಲೆ ತುಸು ಏರಿಕೆ:

ಒಂದು ಕೆ.ಜಿ ಬಿಳಿ ಸೇವಂತಿಗೆ ಬೆಲೆ 300-350ರೂ.

ಹಳದಿ ಸೇವಂತಿಗೆ ಒಂದು ಕೆಜಿಗೆ 280-300ರೂ.

ಕನಕಾಂಬರ ಕೆಜಿ 1 ಸಾವಿರ,‌ ಮೊಳ 50-80ರೂ.

ಮಲ್ಲಿಗೆ ಹೂ ಕೆಜಿ 2 ಸಾವಿರ, ಮೊಳ 100‌ ರೂ.

ಬಟನ್ಸ್ ಕೆ.ಜಿ 200 ರೂ.

ಚೆಂಡು ಹೂ ಕೆಜಿ 80-100 ರೂ.

ದಿನಸಿ ಖರೀದಿ

ಯುಗಾದಿ ಹಬ್ಬವನ್ನು ಹೊಸ ವರ್ಷ ಎಂದು ಆಚರಿಸುವುದರಿಂದ ಹಬ್ಬದ ಅಡುಗೆಯಲ್ಲಿ ಹೋಳಿಗೆ ವಿಶೇಷ. ಹಾಗಾಗಿ ಜನರು ಅಡುಗೆಗೆ ಅಗತ್ಯವಾದ ತೊಗರಿಬೇಳೆ, ಬೆಲ್ಲ, ಸಕ್ಕರೆ, ಎಣ್ಣೆ ಸೇರಿ ಇತರೆ ದಿನಸಿ ಖರೀದಿಯಲ್ಲಿ ನಿರತರಾಗಿದ್ದರು. ಇದಲ್ಲದೆ ಹಬ್ಬದ ನಂತರ ಮಂಗಳವಾರ ವರ್ಷತೊಡಕು ಇರುವುದರಿಂದ ಗ್ರಾಹಕರು ಈರುಳ್ಳಿ, ಬೆಳ್ಳುಳ್ಳಿ, ಶುಂಠಿ, ನಿಂಬೆಹಣ್ಣು, ಕೊತ್ತಂಬರಿ ಸೊಪುಪ, ಪುದೀನಾ, ಸೌತೆಕಾಯಿ, ತೆಂಗಿನಕಾಯಿ ಖರೀದಿ ಮಾಡುತ್ತಿದ್ದಾರೆ.

Ramesh Babu

Journalist

Recent Posts

ಚಿನ್ನಸ್ವಾಮಿ ಕ್ರೀಡಾಂಗಣದ ಕ್ಯಾಂಟೀನ್ ನೌಕರನ ಬಳಿ 100 ಐಪಿಎಲ್ ಟಿಕೆಟ್ ಪತ್ತೆ

ಚಿನ್ನಸ್ವಾಮಿ ಕ್ರೀಡಾಂಗಣದ ಕ್ಯಾಂಟೀನ್ ನೌಕರನ ಬಳಿ 100 ಐಪಿಎಲ್ ಟಿಕೆಟ್ ಪತ್ತೆಯಾಗಿದೆ. ಕ್ಯಾಂಟೀನ್ ನೌಕರ 100ಕ್ಕೂ ಹೆಚ್ಚು ಐಪಿಎಲ್ ಟಿಕೆಟ್‌ಗಳನ್ನು…

24 minutes ago

ಲವ್ ಜಿಹಾದ್ ಮತ್ತೊಮ್ಮೆ ಇಡೀ ದೇಶಾದ್ಯಂತ ಮಾಧ್ಯಮಗಳಲ್ಲಿ ಚರ್ಚೆ

ಲವ್ ಜಿಹಾದ್....... ಪ್ರೀತಿ - ಪ್ರೇಮದ ಧರ್ಮ ಯುದ್ಧ..... ಒಂದು ಆತ್ಮಾವಲೋಕನ,..... ನಿಜ ಪ್ರೀತಿಯನ್ನು ಅನುಮಾನದಿಂದ ನೋಡುವ ಅತ್ಯಂತ ಕೆಟ್ಟ,…

8 hours ago

ಪ್ರಸ್ತುತ 114 ತಾಲೂಕುಗಳ 598 ಗ್ರಾಮ ಪಂಚಾಯತಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಿದೆ- ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಕುಡಿಯುವ ನೀರು ಪೂರೈಕೆ, ಜಾನುವಾರುಗಳ…

19 hours ago

LKG, UKG ತರಗತಿಗಳಿಗೆ ಉಚಿತ ಪ್ರವೇಶ ಪಡೆಯಲು ಅರ್ಜಿ ಆಹ್ವಾನ

2026-27ನೇ ಶೈಕ್ಷಣಿಕ ಸಾಲಿಗೆ ಅಲ್ಪಸಂಖ್ಯಾತರ ನಿದೇಶನಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕು (ವಿಜಯಪುರ) ದಲ್ಲಿ ಕಾರ್ಯನಿರ್ವಹಿಸುತ್ತಿರುವ…

21 hours ago

ಏ.19ಕ್ಕೆ ಸಾಸಲು ಚಿನ್ನಮ್ಮ ಉತ್ಸವ-2026

ಸಾಸಲು ಚಿನ್ನಮ್ಮ ಉತ್ಸವ ಸಮಿತಿ ವತಿಯಿಂದ ಸಾಸಲು ಚಿನ್ನಮ್ಮ ಉತ್ಸವ-2026 ಕಾರ್ಯಕ್ರಮವನ್ನು ಏ.19ರ ಭಾನುವಾರದಂದು ತಾಲೂಕಿನ ಸಾಸಲು ಗ್ರಾಮದ ಡಾ.ಬಿ.ಆರ್…

1 day ago

ಇಸ್ರೇಲ್ ಮತ್ತು ಬೆಂಜಮಿನ್ ನೆತನ್ಯಾಹು……

ಶೌರ್ಯ, ಕ್ರೌರ್ಯ, ಆದರ್ಶ ಮತ್ತು ಎಚ್ಚರಿಕೆ....... ಇಸ್ರೇಲ್ ದೇಶದ ದ್ವೇಷದ ಬೆಂಕಿ ತನ್ನ ತಾನು ಸುಡುವುದಲ್ಲದೆ ಇತರರನ್ನೂ ಸುಡುತ್ತಿದೆ..... ಇಸ್ರೇಲ್…

1 day ago