ಬಿಸಿಲಿನ ತಾಪಮಾನದ ಜೊತೆಗೆ ಯುಗಾದಿ, ರಂಜಾನ್, ಶ್ರೀರಾಮ ನವಮಿ ಹೀಗೆ ಸಾಲು ಸಾಲು ಹಬ್ಬಗಳು. ಹಬ್ಬವೆಂದ ಕೂಡಲೇ ಸಂಭ್ರಮ, ಸಡಗರ. ಯಾವುದೇ ಹಬ್ಬ ಬಂತೆಂದರೆ ಸಂಭ್ರಮ, ಸಡಗರದ ಜೊತೆಗೆ ಮನೆ ಯಜಮಾನನ ಜೇಬಿನಲ್ಲಿರುವ ಹಣ ಕೂಡ ಖರ್ಚಾಗುತ್ತದೆ.
ಅದರಲ್ಲೂ ಯುಗಾದಿ ಹಬ್ಬದಂದು ಪ್ರಕೃತಿಯೇ ಹೊಸ ಹುಟ್ಟು ಪಡೆಯುವ, ಮುಖ್ಯವಾಗಿ ಸಸ್ಯ ಲೋಕ ಚಿಗುರಿದಾಗ ಕಾಣುವ ಸಂಭ್ರಮ ನಮ್ಮ ಅರಿವಿಗೆ ಬರುತ್ತದೆ……..
ದೊಡ್ಡಬಳ್ಳಾಪು ನಗರದ ಮಾರುಕಟ್ಟೆಯಲ್ಲಿ ನಾಳಿನ ಯುಗಾದಿ ಹಬ್ಬಕ್ಕೆ ಇಂದೇ (ಶನಿವಾರ) ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿ ಜೋರಾಗಿತ್ತು.
ಬಟ್ಟೆ ಅಂಗಡಿಗಳು, ಹೂವಿನ ಮಾರುಕಟ್ಟೆ, ಸಿಹಿ ತಿನಿಸುಗಳ ಮಾರಾಟ ಅಂಗಡಿ ಮತ್ತು ತರಕಾರಿ ಅಂಗಡಿಗಳಲ್ಲಿ ಜನದಟ್ಟಣೆ ಕಂಡುಬಂದಿತು. ಗ್ರಾಮೀಣ ಭಾಗದ ಜನರು ಹಬ್ಬದ ಪದಾರ್ಥಗಳ ಖರೀದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು.
ಒಂದು ಕೆ.ಜಿ ಬಿಳಿ ಸೇವಂತಿಗೆ ಬೆಲೆ 300-350ರೂ.
ಹಳದಿ ಸೇವಂತಿಗೆ ಒಂದು ಕೆಜಿಗೆ 280-300ರೂ.
ಕನಕಾಂಬರ ಕೆಜಿ 1 ಸಾವಿರ, ಮೊಳ 50-80ರೂ.
ಮಲ್ಲಿಗೆ ಹೂ ಕೆಜಿ 2 ಸಾವಿರ, ಮೊಳ 100 ರೂ.
ಬಟನ್ಸ್ ಕೆ.ಜಿ 200 ರೂ.
ಚೆಂಡು ಹೂ ಕೆಜಿ 80-100 ರೂ.
ಯುಗಾದಿ ಹಬ್ಬವನ್ನು ಹೊಸ ವರ್ಷ ಎಂದು ಆಚರಿಸುವುದರಿಂದ ಹಬ್ಬದ ಅಡುಗೆಯಲ್ಲಿ ಹೋಳಿಗೆ ವಿಶೇಷ. ಹಾಗಾಗಿ ಜನರು ಅಡುಗೆಗೆ ಅಗತ್ಯವಾದ ತೊಗರಿಬೇಳೆ, ಬೆಲ್ಲ, ಸಕ್ಕರೆ, ಎಣ್ಣೆ ಸೇರಿ ಇತರೆ ದಿನಸಿ ಖರೀದಿಯಲ್ಲಿ ನಿರತರಾಗಿದ್ದರು. ಇದಲ್ಲದೆ ಹಬ್ಬದ ನಂತರ ಮಂಗಳವಾರ ವರ್ಷತೊಡಕು ಇರುವುದರಿಂದ ಗ್ರಾಹಕರು ಈರುಳ್ಳಿ, ಬೆಳ್ಳುಳ್ಳಿ, ಶುಂಠಿ, ನಿಂಬೆಹಣ್ಣು, ಕೊತ್ತಂಬರಿ ಸೊಪುಪ, ಪುದೀನಾ, ಸೌತೆಕಾಯಿ, ತೆಂಗಿನಕಾಯಿ ಖರೀದಿ ಮಾಡುತ್ತಿದ್ದಾರೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…
ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್ಐಆರ್ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…
ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…
ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…
ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…