ಬಿಸಿಲಿನ ತಾಪಮಾನದ ಜೊತೆಗೆ ಯುಗಾದಿ, ರಂಜಾನ್, ಶ್ರೀರಾಮ ನವಮಿ ಹೀಗೆ ಸಾಲು ಸಾಲು ಹಬ್ಬಗಳು. ಹಬ್ಬವೆಂದ ಕೂಡಲೇ ಸಂಭ್ರಮ, ಸಡಗರ. ಯಾವುದೇ ಹಬ್ಬ ಬಂತೆಂದರೆ ಸಂಭ್ರಮ, ಸಡಗರದ ಜೊತೆಗೆ ಮನೆ ಯಜಮಾನನ ಜೇಬಿನಲ್ಲಿರುವ ಹಣ ಕೂಡ ಖರ್ಚಾಗುತ್ತದೆ.
ಅದರಲ್ಲೂ ಯುಗಾದಿ ಹಬ್ಬದಂದು ಪ್ರಕೃತಿಯೇ ಹೊಸ ಹುಟ್ಟು ಪಡೆಯುವ, ಮುಖ್ಯವಾಗಿ ಸಸ್ಯ ಲೋಕ ಚಿಗುರಿದಾಗ ಕಾಣುವ ಸಂಭ್ರಮ ನಮ್ಮ ಅರಿವಿಗೆ ಬರುತ್ತದೆ……..
ದೊಡ್ಡಬಳ್ಳಾಪು ನಗರದ ಮಾರುಕಟ್ಟೆಯಲ್ಲಿ ನಾಳಿನ ಯುಗಾದಿ ಹಬ್ಬಕ್ಕೆ ಇಂದೇ (ಶನಿವಾರ) ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿ ಜೋರಾಗಿತ್ತು.
ಬಟ್ಟೆ ಅಂಗಡಿಗಳು, ಹೂವಿನ ಮಾರುಕಟ್ಟೆ, ಸಿಹಿ ತಿನಿಸುಗಳ ಮಾರಾಟ ಅಂಗಡಿ ಮತ್ತು ತರಕಾರಿ ಅಂಗಡಿಗಳಲ್ಲಿ ಜನದಟ್ಟಣೆ ಕಂಡುಬಂದಿತು. ಗ್ರಾಮೀಣ ಭಾಗದ ಜನರು ಹಬ್ಬದ ಪದಾರ್ಥಗಳ ಖರೀದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು.
ಒಂದು ಕೆ.ಜಿ ಬಿಳಿ ಸೇವಂತಿಗೆ ಬೆಲೆ 300-350ರೂ.
ಹಳದಿ ಸೇವಂತಿಗೆ ಒಂದು ಕೆಜಿಗೆ 280-300ರೂ.
ಕನಕಾಂಬರ ಕೆಜಿ 1 ಸಾವಿರ, ಮೊಳ 50-80ರೂ.
ಮಲ್ಲಿಗೆ ಹೂ ಕೆಜಿ 2 ಸಾವಿರ, ಮೊಳ 100 ರೂ.
ಬಟನ್ಸ್ ಕೆ.ಜಿ 200 ರೂ.
ಚೆಂಡು ಹೂ ಕೆಜಿ 80-100 ರೂ.
ಯುಗಾದಿ ಹಬ್ಬವನ್ನು ಹೊಸ ವರ್ಷ ಎಂದು ಆಚರಿಸುವುದರಿಂದ ಹಬ್ಬದ ಅಡುಗೆಯಲ್ಲಿ ಹೋಳಿಗೆ ವಿಶೇಷ. ಹಾಗಾಗಿ ಜನರು ಅಡುಗೆಗೆ ಅಗತ್ಯವಾದ ತೊಗರಿಬೇಳೆ, ಬೆಲ್ಲ, ಸಕ್ಕರೆ, ಎಣ್ಣೆ ಸೇರಿ ಇತರೆ ದಿನಸಿ ಖರೀದಿಯಲ್ಲಿ ನಿರತರಾಗಿದ್ದರು. ಇದಲ್ಲದೆ ಹಬ್ಬದ ನಂತರ ಮಂಗಳವಾರ ವರ್ಷತೊಡಕು ಇರುವುದರಿಂದ ಗ್ರಾಹಕರು ಈರುಳ್ಳಿ, ಬೆಳ್ಳುಳ್ಳಿ, ಶುಂಠಿ, ನಿಂಬೆಹಣ್ಣು, ಕೊತ್ತಂಬರಿ ಸೊಪುಪ, ಪುದೀನಾ, ಸೌತೆಕಾಯಿ, ತೆಂಗಿನಕಾಯಿ ಖರೀದಿ ಮಾಡುತ್ತಿದ್ದಾರೆ.
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…