ಬಿಸಿಲಿನ ತಾಪಮಾನದ ಜೊತೆಗೆ ಯುಗಾದಿ, ರಂಜಾನ್, ಶ್ರೀರಾಮ ನವಮಿ ಹೀಗೆ ಸಾಲು ಸಾಲು ಹಬ್ಬಗಳು. ಹಬ್ಬವೆಂದ ಕೂಡಲೇ ಸಂಭ್ರಮ, ಸಡಗರ. ಯಾವುದೇ ಹಬ್ಬ ಬಂತೆಂದರೆ ಸಂಭ್ರಮ, ಸಡಗರದ ಜೊತೆಗೆ ಮನೆ ಯಜಮಾನನ ಜೇಬಿನಲ್ಲಿರುವ ಹಣ ಕೂಡ ಖರ್ಚಾಗುತ್ತದೆ.
ಅದರಲ್ಲೂ ಯುಗಾದಿ ಹಬ್ಬದಂದು ಪ್ರಕೃತಿಯೇ ಹೊಸ ಹುಟ್ಟು ಪಡೆಯುವ, ಮುಖ್ಯವಾಗಿ ಸಸ್ಯ ಲೋಕ ಚಿಗುರಿದಾಗ ಕಾಣುವ ಸಂಭ್ರಮ ನಮ್ಮ ಅರಿವಿಗೆ ಬರುತ್ತದೆ……..
ದೊಡ್ಡಬಳ್ಳಾಪು ನಗರದ ಮಾರುಕಟ್ಟೆಯಲ್ಲಿ ನಾಳಿನ ಯುಗಾದಿ ಹಬ್ಬಕ್ಕೆ ಇಂದೇ (ಶನಿವಾರ) ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿ ಜೋರಾಗಿತ್ತು.
ಬಟ್ಟೆ ಅಂಗಡಿಗಳು, ಹೂವಿನ ಮಾರುಕಟ್ಟೆ, ಸಿಹಿ ತಿನಿಸುಗಳ ಮಾರಾಟ ಅಂಗಡಿ ಮತ್ತು ತರಕಾರಿ ಅಂಗಡಿಗಳಲ್ಲಿ ಜನದಟ್ಟಣೆ ಕಂಡುಬಂದಿತು. ಗ್ರಾಮೀಣ ಭಾಗದ ಜನರು ಹಬ್ಬದ ಪದಾರ್ಥಗಳ ಖರೀದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು.
ಒಂದು ಕೆ.ಜಿ ಬಿಳಿ ಸೇವಂತಿಗೆ ಬೆಲೆ 300-350ರೂ.
ಹಳದಿ ಸೇವಂತಿಗೆ ಒಂದು ಕೆಜಿಗೆ 280-300ರೂ.
ಕನಕಾಂಬರ ಕೆಜಿ 1 ಸಾವಿರ, ಮೊಳ 50-80ರೂ.
ಮಲ್ಲಿಗೆ ಹೂ ಕೆಜಿ 2 ಸಾವಿರ, ಮೊಳ 100 ರೂ.
ಬಟನ್ಸ್ ಕೆ.ಜಿ 200 ರೂ.
ಚೆಂಡು ಹೂ ಕೆಜಿ 80-100 ರೂ.
ಯುಗಾದಿ ಹಬ್ಬವನ್ನು ಹೊಸ ವರ್ಷ ಎಂದು ಆಚರಿಸುವುದರಿಂದ ಹಬ್ಬದ ಅಡುಗೆಯಲ್ಲಿ ಹೋಳಿಗೆ ವಿಶೇಷ. ಹಾಗಾಗಿ ಜನರು ಅಡುಗೆಗೆ ಅಗತ್ಯವಾದ ತೊಗರಿಬೇಳೆ, ಬೆಲ್ಲ, ಸಕ್ಕರೆ, ಎಣ್ಣೆ ಸೇರಿ ಇತರೆ ದಿನಸಿ ಖರೀದಿಯಲ್ಲಿ ನಿರತರಾಗಿದ್ದರು. ಇದಲ್ಲದೆ ಹಬ್ಬದ ನಂತರ ಮಂಗಳವಾರ ವರ್ಷತೊಡಕು ಇರುವುದರಿಂದ ಗ್ರಾಹಕರು ಈರುಳ್ಳಿ, ಬೆಳ್ಳುಳ್ಳಿ, ಶುಂಠಿ, ನಿಂಬೆಹಣ್ಣು, ಕೊತ್ತಂಬರಿ ಸೊಪುಪ, ಪುದೀನಾ, ಸೌತೆಕಾಯಿ, ತೆಂಗಿನಕಾಯಿ ಖರೀದಿ ಮಾಡುತ್ತಿದ್ದಾರೆ.
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…
ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…