ಯುಗಾದಿ ಹಬ್ಬ: ನಾಳಿನ ಹಬ್ಬಕ್ಕೆ ಇಂದೇ ಮಾರುಕಟ್ಟೆಯಲ್ಲಿ ಖರೀದಿ ಭರಾಟೆ ಜೋರು….

ಬಿಸಿಲಿನ ತಾಪಮಾನದ ಜೊತೆಗೆ ಯುಗಾದಿ, ರಂಜಾನ್, ಶ್ರೀರಾಮ ನವಮಿ ಹೀಗೆ ಸಾಲು ಸಾಲು ಹಬ್ಬಗಳು. ಹಬ್ಬವೆಂದ ಕೂಡಲೇ ಸಂಭ್ರಮ, ಸಡಗರ. ಯಾವುದೇ ಹಬ್ಬ ಬಂತೆಂದರೆ ಸಂಭ್ರಮ, ಸಡಗರದ ಜೊತೆಗೆ ಮನೆ ಯಜಮಾನನ ಜೇಬಿನಲ್ಲಿರುವ ಹಣ ಕೂಡ ಖರ್ಚಾಗುತ್ತದೆ.

ಅದರಲ್ಲೂ ಯುಗಾದಿ ಹಬ್ಬದಂದು ಪ್ರಕೃತಿಯೇ ಹೊಸ ಹುಟ್ಟು ಪಡೆಯುವ, ಮುಖ್ಯವಾಗಿ ಸಸ್ಯ ಲೋಕ ಚಿಗುರಿದಾಗ ಕಾಣುವ ಸಂಭ್ರಮ ನಮ್ಮ ಅರಿವಿಗೆ ಬರುತ್ತದೆ……..

ಯುಗಾದಿ ಬಂತೆಂದರೆ ಮಾರುಕಟ್ಟೆ, ಬಟ್ಟೆ ಅಂಗಡಿ, ದಿನಸಿ ಅಂಗಡಿ ಹೀಗೆ ಎಲ್ಲೆಡೆ ವ್ಯಾಪಾರ ಜೋರಾಗಿರುತ್ತದೆ. ಬಿಸಿಲ ತೀವ್ರತೆ ಹಾಗೂ ಮಾಸಾಂತಕ್ಕೆ ಹಬ್ಬ ಬಂದಿರುವುದರಿಂದ ಜನರಲ್ಲಿ ಹಬ್ಬದ ಉತ್ಸಾಹಕ್ಕೇನು ಕಡಿಮೆ ಇಲ್ಲ.

ದೊಡ್ಡಬಳ್ಳಾಪು ನಗರದ ಮಾರುಕಟ್ಟೆಯಲ್ಲಿ ನಾಳಿನ ಯುಗಾದಿ ಹಬ್ಬಕ್ಕೆ‌ ಇಂದೇ (ಶನಿವಾರ) ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿ ಜೋರಾಗಿತ್ತು.

ಮಾವಿನ ತಳಿರು, ಬೇವಿನ ಹೂವು, ಪುಟಾಣಿ ಮಿಶ್ರಿತ ಎಳ್ಳುಬೆಲ್ಲ, ಹೂವು, ಹಣ್ಣುಗಳನ್ನು ಜನರು ಖರೀದಿಸುತ್ತಿದ್ದಾರೆ.

ಬಟ್ಟೆ ಅಂಗಡಿಗಳು, ಹೂವಿನ ಮಾರುಕಟ್ಟೆ, ಸಿಹಿ ತಿನಿಸುಗಳ ಮಾರಾಟ ಅಂಗಡಿ ಮತ್ತು ತರಕಾರಿ ಅಂಗಡಿಗಳಲ್ಲಿ ಜನದಟ್ಟಣೆ ಕಂಡುಬಂದಿತು. ಗ್ರಾಮೀಣ ಭಾಗದ ಜನರು ಹಬ್ಬದ ಪದಾರ್ಥಗಳ ಖರೀದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು.

ಮಾರುಕಟೆಯಲ್ಲಿ ಕೆಲವೊಂದು ಸಾಮಾಗ್ರಿಗಳ ದರ ಇಳಿಕೆ, ಏರಿಕೆ ಇದ್ದರೂ ಖರೀದಿ ಪ್ರಕ್ರಿಯೆಯಲ್ಲಿ ಗ್ರಾಹಕರು, ಮಾರಾಟ ಮಾಡುವಲ್ಲಿ ಮಾರಾಟಗಾರರು ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.

ಹೂ ಬೆಲೆ ತುಸು ಏರಿಕೆ:

ಒಂದು ಕೆ.ಜಿ ಬಿಳಿ ಸೇವಂತಿಗೆ ಬೆಲೆ 300-350ರೂ.

ಹಳದಿ ಸೇವಂತಿಗೆ ಒಂದು ಕೆಜಿಗೆ 280-300ರೂ.

ಕನಕಾಂಬರ ಕೆಜಿ 1 ಸಾವಿರ,‌ ಮೊಳ 50-80ರೂ.

ಮಲ್ಲಿಗೆ ಹೂ ಕೆಜಿ 2 ಸಾವಿರ, ಮೊಳ 100‌ ರೂ.

ಬಟನ್ಸ್ ಕೆ.ಜಿ 200 ರೂ.

ಚೆಂಡು ಹೂ ಕೆಜಿ 80-100 ರೂ.

ದಿನಸಿ ಖರೀದಿ

ಯುಗಾದಿ ಹಬ್ಬವನ್ನು ಹೊಸ ವರ್ಷ ಎಂದು ಆಚರಿಸುವುದರಿಂದ ಹಬ್ಬದ ಅಡುಗೆಯಲ್ಲಿ ಹೋಳಿಗೆ ವಿಶೇಷ. ಹಾಗಾಗಿ ಜನರು ಅಡುಗೆಗೆ ಅಗತ್ಯವಾದ ತೊಗರಿಬೇಳೆ, ಬೆಲ್ಲ, ಸಕ್ಕರೆ, ಎಣ್ಣೆ ಸೇರಿ ಇತರೆ ದಿನಸಿ ಖರೀದಿಯಲ್ಲಿ ನಿರತರಾಗಿದ್ದರು. ಇದಲ್ಲದೆ ಹಬ್ಬದ ನಂತರ ಮಂಗಳವಾರ ವರ್ಷತೊಡಕು ಇರುವುದರಿಂದ ಗ್ರಾಹಕರು ಈರುಳ್ಳಿ, ಬೆಳ್ಳುಳ್ಳಿ, ಶುಂಠಿ, ನಿಂಬೆಹಣ್ಣು, ಕೊತ್ತಂಬರಿ ಸೊಪುಪ, ಪುದೀನಾ, ಸೌತೆಕಾಯಿ, ತೆಂಗಿನಕಾಯಿ ಖರೀದಿ ಮಾಡುತ್ತಿದ್ದಾರೆ.

Ramesh Babu

Journalist

Recent Posts

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

8 minutes ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

9 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

2 days ago