ಯುಗಾದಿ ಹಬ್ಬ: ನಾಳಿನ ಹಬ್ಬಕ್ಕೆ ಇಂದೇ ಮಾರುಕಟ್ಟೆಯಲ್ಲಿ ಖರೀದಿ ಭರಾಟೆ ಜೋರು….

ಬಿಸಿಲಿನ ತಾಪಮಾನದ ಜೊತೆಗೆ ಯುಗಾದಿ, ರಂಜಾನ್, ಶ್ರೀರಾಮ ನವಮಿ ಹೀಗೆ ಸಾಲು ಸಾಲು ಹಬ್ಬಗಳು. ಹಬ್ಬವೆಂದ ಕೂಡಲೇ ಸಂಭ್ರಮ, ಸಡಗರ. ಯಾವುದೇ ಹಬ್ಬ ಬಂತೆಂದರೆ ಸಂಭ್ರಮ, ಸಡಗರದ ಜೊತೆಗೆ ಮನೆ ಯಜಮಾನನ ಜೇಬಿನಲ್ಲಿರುವ ಹಣ ಕೂಡ ಖರ್ಚಾಗುತ್ತದೆ.

ಅದರಲ್ಲೂ ಯುಗಾದಿ ಹಬ್ಬದಂದು ಪ್ರಕೃತಿಯೇ ಹೊಸ ಹುಟ್ಟು ಪಡೆಯುವ, ಮುಖ್ಯವಾಗಿ ಸಸ್ಯ ಲೋಕ ಚಿಗುರಿದಾಗ ಕಾಣುವ ಸಂಭ್ರಮ ನಮ್ಮ ಅರಿವಿಗೆ ಬರುತ್ತದೆ……..

ಯುಗಾದಿ ಬಂತೆಂದರೆ ಮಾರುಕಟ್ಟೆ, ಬಟ್ಟೆ ಅಂಗಡಿ, ದಿನಸಿ ಅಂಗಡಿ ಹೀಗೆ ಎಲ್ಲೆಡೆ ವ್ಯಾಪಾರ ಜೋರಾಗಿರುತ್ತದೆ. ಬಿಸಿಲ ತೀವ್ರತೆ ಹಾಗೂ ಮಾಸಾಂತಕ್ಕೆ ಹಬ್ಬ ಬಂದಿರುವುದರಿಂದ ಜನರಲ್ಲಿ ಹಬ್ಬದ ಉತ್ಸಾಹಕ್ಕೇನು ಕಡಿಮೆ ಇಲ್ಲ.

ದೊಡ್ಡಬಳ್ಳಾಪು ನಗರದ ಮಾರುಕಟ್ಟೆಯಲ್ಲಿ ನಾಳಿನ ಯುಗಾದಿ ಹಬ್ಬಕ್ಕೆ‌ ಇಂದೇ (ಶನಿವಾರ) ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿ ಜೋರಾಗಿತ್ತು.

ಮಾವಿನ ತಳಿರು, ಬೇವಿನ ಹೂವು, ಪುಟಾಣಿ ಮಿಶ್ರಿತ ಎಳ್ಳುಬೆಲ್ಲ, ಹೂವು, ಹಣ್ಣುಗಳನ್ನು ಜನರು ಖರೀದಿಸುತ್ತಿದ್ದಾರೆ.

ಬಟ್ಟೆ ಅಂಗಡಿಗಳು, ಹೂವಿನ ಮಾರುಕಟ್ಟೆ, ಸಿಹಿ ತಿನಿಸುಗಳ ಮಾರಾಟ ಅಂಗಡಿ ಮತ್ತು ತರಕಾರಿ ಅಂಗಡಿಗಳಲ್ಲಿ ಜನದಟ್ಟಣೆ ಕಂಡುಬಂದಿತು. ಗ್ರಾಮೀಣ ಭಾಗದ ಜನರು ಹಬ್ಬದ ಪದಾರ್ಥಗಳ ಖರೀದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು.

ಮಾರುಕಟೆಯಲ್ಲಿ ಕೆಲವೊಂದು ಸಾಮಾಗ್ರಿಗಳ ದರ ಇಳಿಕೆ, ಏರಿಕೆ ಇದ್ದರೂ ಖರೀದಿ ಪ್ರಕ್ರಿಯೆಯಲ್ಲಿ ಗ್ರಾಹಕರು, ಮಾರಾಟ ಮಾಡುವಲ್ಲಿ ಮಾರಾಟಗಾರರು ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.

ಹೂ ಬೆಲೆ ತುಸು ಏರಿಕೆ:

ಒಂದು ಕೆ.ಜಿ ಬಿಳಿ ಸೇವಂತಿಗೆ ಬೆಲೆ 300-350ರೂ.

ಹಳದಿ ಸೇವಂತಿಗೆ ಒಂದು ಕೆಜಿಗೆ 280-300ರೂ.

ಕನಕಾಂಬರ ಕೆಜಿ 1 ಸಾವಿರ,‌ ಮೊಳ 50-80ರೂ.

ಮಲ್ಲಿಗೆ ಹೂ ಕೆಜಿ 2 ಸಾವಿರ, ಮೊಳ 100‌ ರೂ.

ಬಟನ್ಸ್ ಕೆ.ಜಿ 200 ರೂ.

ಚೆಂಡು ಹೂ ಕೆಜಿ 80-100 ರೂ.

ದಿನಸಿ ಖರೀದಿ

ಯುಗಾದಿ ಹಬ್ಬವನ್ನು ಹೊಸ ವರ್ಷ ಎಂದು ಆಚರಿಸುವುದರಿಂದ ಹಬ್ಬದ ಅಡುಗೆಯಲ್ಲಿ ಹೋಳಿಗೆ ವಿಶೇಷ. ಹಾಗಾಗಿ ಜನರು ಅಡುಗೆಗೆ ಅಗತ್ಯವಾದ ತೊಗರಿಬೇಳೆ, ಬೆಲ್ಲ, ಸಕ್ಕರೆ, ಎಣ್ಣೆ ಸೇರಿ ಇತರೆ ದಿನಸಿ ಖರೀದಿಯಲ್ಲಿ ನಿರತರಾಗಿದ್ದರು. ಇದಲ್ಲದೆ ಹಬ್ಬದ ನಂತರ ಮಂಗಳವಾರ ವರ್ಷತೊಡಕು ಇರುವುದರಿಂದ ಗ್ರಾಹಕರು ಈರುಳ್ಳಿ, ಬೆಳ್ಳುಳ್ಳಿ, ಶುಂಠಿ, ನಿಂಬೆಹಣ್ಣು, ಕೊತ್ತಂಬರಿ ಸೊಪುಪ, ಪುದೀನಾ, ಸೌತೆಕಾಯಿ, ತೆಂಗಿನಕಾಯಿ ಖರೀದಿ ಮಾಡುತ್ತಿದ್ದಾರೆ.

Ramesh Babu

Journalist

Recent Posts

ಸೋನಂ ವಾಂಗ್ ಚುಕ್……

ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…

1 day ago

ರೈತರ ಜಮೀನು ಬಲವಂತವಾಗಿ ವಶಪಡಿಸಿಕೊಳ್ಳುವುದಿಲ್ಲ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…

1 day ago

ಶಾಲೆ, ಅಂಗನವಾಡಿ ಮುಂಭಾಗವೇ ಕಸದ ರಾಶಿ; ದುರ್ವಾಸನೆಯ ನಡುವೆ ಪಾಠ ಕೇಳುವ ಮಕ್ಕಳು ಪಾಲನಜೋಗಿಹಳ್ಳಿ ಪ್ರವೇಶ ದ್ವಾರದಲ್ಲೇ ತ್ಯಾಜ್ಯ ರಾಶಿ – ಸ್ವಚ್ಛತೆಗೆ ಗ್ರಾಮಸ್ಥರ ಆಗ್ರಹ

ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…

2 days ago

ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ವಾಹನ ಡಿಕ್ಕಿ: ಚಾಲಕ ಸಾವು

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್‌ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…

2 days ago

ಸೆಲೆಬ್ರಿಟಿ…………….

ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…

2 days ago

ಎಲ್-ನಿನೋ ಪರಿಣಾಮ, ಮಳೆಯ ಕೊರತೆ, ತಾಪಮಾನದ ಏರಿಕೆ, ಒಣ ಹವಾಮಾನ ಹೆಚ್ಚಳ ಸಾಧ್ಯತೆ: ತೋಟಗಾರಿಕಾ ಬೆಳೆಗಳ ರಕ್ಷಣೆಗೆ ಇರಲಿ ಆದ್ಯತೆ

ಎಲ್-ನಿನೋ ಪರಿಣಾಮದಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಕೊರತೆ, ತಾಪಮಾನದ ಏರಿಕೆ ಹಾಗೂ ಒಣ ಹವಾಮಾನ ಹೆಚ್ಚಾಗುವ ಸಾಧ್ಯತೆ ಇರುವ…

2 days ago