ಯುಗಾದಿ ಹಬ್ಬ: ನಾಳಿನ ಹಬ್ಬಕ್ಕೆ ಇಂದೇ ಮಾರುಕಟ್ಟೆಯಲ್ಲಿ ಖರೀದಿ ಭರಾಟೆ ಜೋರು….

ಬಿಸಿಲಿನ ತಾಪಮಾನದ ಜೊತೆಗೆ ಯುಗಾದಿ, ರಂಜಾನ್, ಶ್ರೀರಾಮ ನವಮಿ ಹೀಗೆ ಸಾಲು ಸಾಲು ಹಬ್ಬಗಳು. ಹಬ್ಬವೆಂದ ಕೂಡಲೇ ಸಂಭ್ರಮ, ಸಡಗರ. ಯಾವುದೇ ಹಬ್ಬ ಬಂತೆಂದರೆ ಸಂಭ್ರಮ, ಸಡಗರದ ಜೊತೆಗೆ ಮನೆ ಯಜಮಾನನ ಜೇಬಿನಲ್ಲಿರುವ ಹಣ ಕೂಡ ಖರ್ಚಾಗುತ್ತದೆ.

ಅದರಲ್ಲೂ ಯುಗಾದಿ ಹಬ್ಬದಂದು ಪ್ರಕೃತಿಯೇ ಹೊಸ ಹುಟ್ಟು ಪಡೆಯುವ, ಮುಖ್ಯವಾಗಿ ಸಸ್ಯ ಲೋಕ ಚಿಗುರಿದಾಗ ಕಾಣುವ ಸಂಭ್ರಮ ನಮ್ಮ ಅರಿವಿಗೆ ಬರುತ್ತದೆ……..

ಯುಗಾದಿ ಬಂತೆಂದರೆ ಮಾರುಕಟ್ಟೆ, ಬಟ್ಟೆ ಅಂಗಡಿ, ದಿನಸಿ ಅಂಗಡಿ ಹೀಗೆ ಎಲ್ಲೆಡೆ ವ್ಯಾಪಾರ ಜೋರಾಗಿರುತ್ತದೆ. ಬಿಸಿಲ ತೀವ್ರತೆ ಹಾಗೂ ಮಾಸಾಂತಕ್ಕೆ ಹಬ್ಬ ಬಂದಿರುವುದರಿಂದ ಜನರಲ್ಲಿ ಹಬ್ಬದ ಉತ್ಸಾಹಕ್ಕೇನು ಕಡಿಮೆ ಇಲ್ಲ.

ದೊಡ್ಡಬಳ್ಳಾಪು ನಗರದ ಮಾರುಕಟ್ಟೆಯಲ್ಲಿ ನಾಳಿನ ಯುಗಾದಿ ಹಬ್ಬಕ್ಕೆ‌ ಇಂದೇ (ಶನಿವಾರ) ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿ ಜೋರಾಗಿತ್ತು.

ಮಾವಿನ ತಳಿರು, ಬೇವಿನ ಹೂವು, ಪುಟಾಣಿ ಮಿಶ್ರಿತ ಎಳ್ಳುಬೆಲ್ಲ, ಹೂವು, ಹಣ್ಣುಗಳನ್ನು ಜನರು ಖರೀದಿಸುತ್ತಿದ್ದಾರೆ.

ಬಟ್ಟೆ ಅಂಗಡಿಗಳು, ಹೂವಿನ ಮಾರುಕಟ್ಟೆ, ಸಿಹಿ ತಿನಿಸುಗಳ ಮಾರಾಟ ಅಂಗಡಿ ಮತ್ತು ತರಕಾರಿ ಅಂಗಡಿಗಳಲ್ಲಿ ಜನದಟ್ಟಣೆ ಕಂಡುಬಂದಿತು. ಗ್ರಾಮೀಣ ಭಾಗದ ಜನರು ಹಬ್ಬದ ಪದಾರ್ಥಗಳ ಖರೀದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು.

ಮಾರುಕಟೆಯಲ್ಲಿ ಕೆಲವೊಂದು ಸಾಮಾಗ್ರಿಗಳ ದರ ಇಳಿಕೆ, ಏರಿಕೆ ಇದ್ದರೂ ಖರೀದಿ ಪ್ರಕ್ರಿಯೆಯಲ್ಲಿ ಗ್ರಾಹಕರು, ಮಾರಾಟ ಮಾಡುವಲ್ಲಿ ಮಾರಾಟಗಾರರು ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.

ಹೂ ಬೆಲೆ ತುಸು ಏರಿಕೆ:

ಒಂದು ಕೆ.ಜಿ ಬಿಳಿ ಸೇವಂತಿಗೆ ಬೆಲೆ 300-350ರೂ.

ಹಳದಿ ಸೇವಂತಿಗೆ ಒಂದು ಕೆಜಿಗೆ 280-300ರೂ.

ಕನಕಾಂಬರ ಕೆಜಿ 1 ಸಾವಿರ,‌ ಮೊಳ 50-80ರೂ.

ಮಲ್ಲಿಗೆ ಹೂ ಕೆಜಿ 2 ಸಾವಿರ, ಮೊಳ 100‌ ರೂ.

ಬಟನ್ಸ್ ಕೆ.ಜಿ 200 ರೂ.

ಚೆಂಡು ಹೂ ಕೆಜಿ 80-100 ರೂ.

ದಿನಸಿ ಖರೀದಿ

ಯುಗಾದಿ ಹಬ್ಬವನ್ನು ಹೊಸ ವರ್ಷ ಎಂದು ಆಚರಿಸುವುದರಿಂದ ಹಬ್ಬದ ಅಡುಗೆಯಲ್ಲಿ ಹೋಳಿಗೆ ವಿಶೇಷ. ಹಾಗಾಗಿ ಜನರು ಅಡುಗೆಗೆ ಅಗತ್ಯವಾದ ತೊಗರಿಬೇಳೆ, ಬೆಲ್ಲ, ಸಕ್ಕರೆ, ಎಣ್ಣೆ ಸೇರಿ ಇತರೆ ದಿನಸಿ ಖರೀದಿಯಲ್ಲಿ ನಿರತರಾಗಿದ್ದರು. ಇದಲ್ಲದೆ ಹಬ್ಬದ ನಂತರ ಮಂಗಳವಾರ ವರ್ಷತೊಡಕು ಇರುವುದರಿಂದ ಗ್ರಾಹಕರು ಈರುಳ್ಳಿ, ಬೆಳ್ಳುಳ್ಳಿ, ಶುಂಠಿ, ನಿಂಬೆಹಣ್ಣು, ಕೊತ್ತಂಬರಿ ಸೊಪುಪ, ಪುದೀನಾ, ಸೌತೆಕಾಯಿ, ತೆಂಗಿನಕಾಯಿ ಖರೀದಿ ಮಾಡುತ್ತಿದ್ದಾರೆ.

Ramesh Babu

Journalist

Recent Posts

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

1 hour ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

2 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

3 hours ago

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

5 hours ago

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

16 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

1 day ago