Categories: ಲೇಖನ

ಯುದ್ಧದ ನಡುವೆಯೂ ಶಾಂತಿಯ ಧ್ವನಿ ನಿರಂತರವಾಗಿ ಕೇಳುತ್ತಿರಲಿ

ಮೂಕ ಹಕ್ಕಿಯ ರೋಧನೆ…

ಮೂಕ ಹಕ್ಕಿಯು ಹಾಡುತಿದೆ…..
ಹಾಡುತಿದೆ……. ಹಾಡುತಿದೆ…….
ಭಾಷೆಗೂ ನಿಲುಕದ
ಭಾವ ಗೀತೆಯ
ಹಾರಿ ಹಾರಿ
ಹಾಡುತಿದೆ….
ಹಾಡುತಿದೆ…….
ಹಾಡುತಿದೇ……..

ಹಕ್ಕಿಯ ರೆಕ್ಕೆ ಮುರಿದು ಬೀಳುವವರೆಗೂ…..

ಒಂದು ಸಣ್ಣ ಕೆಮ್ಮಿಗೆ, ನೆಗಡಿಗೆ, ಗಂಟಲು ನೋವಿಗೆ, ಹೊಟ್ಟೆ ನೋವಿಗೆ, ಜ್ವರಕ್ಕೆ ಮನುಷ್ಯ ಭಯಪಡುತ್ತಾನೆ,

ಬಿಪಿ, ಶುಗರ್, ಕ್ಯಾನ್ಸರ್, ಅಲ್ಸರ್, ಹಾರ್ಟ್ ಅಟ್ಯಾಕ್ ಗೆ
ಪತರಗುಟ್ಟಿ ಹೋಗುತ್ತಾನೆ,

ಎಷ್ಟೋ ಜನರು ಸಣ್ಣ ಸೂಜಿಯ ಇಂಜೆಕ್ಷನ್ ತೆಗೆದುಕೊಳ್ಳಲೂ ಹೆದರುತ್ತಾರೆ,

ಬಹಳಷ್ಟು ಹೆಣ್ಣು ಮಕ್ಕಳು ಜಿರಳೆ ಕಂಡರೆ ಕಿರುಚಿಕೊಳ್ಳುತ್ತಾರೆ,

ಎಷ್ಟೋ ಯುವಕರು ಹಾವಿಗೆ ಅಂಜುತ್ತಾರೆ,

ಇನ್ನು ಹುಲಿ, ಚಿರತೆ, ಸಿಂಹಗಳನ್ನು ನೋಡಿದರೆ ಓಡಿ ಹೋಗುತ್ತಾರೆ,

ಎಲ್ಲಾದರೂ ಅನಿರೀಕ್ಷಿತವಾಗಿ ಡಂ ಎನ್ನುವ ದೊಡ್ಡ ಶಬ್ದ ಉಂಟಾದರೆ ಎದೆ ನಡುಗುತ್ತದೆ,

ಇನ್ನೆಲ್ಲೋ ಭೀಕರ ಅಪಘಾತ, ಕೊಲೆ, ಅತ್ಯಾಚಾರಗಳನ್ನು ಕೇಳಿದರೆ ಮನಸ್ಸು ದಿಗಿಲು ಹುಟ್ಟಿಸುತ್ತದೆ,

ಇಷ್ಟೊಂದು ಸೂಕ್ಷ್ಮ ಮನಸ್ಸಿನ ಮನುಷ್ಯರು ಕೊಲ್ಲುವ, ಸಾಯುವ ಆಟ ಯುದ್ಧಕ್ಕೆ
ಹಾತೊರೆಯುತ್ತಾರೆ,

ಎಷ್ಟೊಂದು ವಿಚಿತ್ರವಲ್ಲವೇ……

ಭಯೋತ್ಪಾದಕರು ಮನುಷ್ಯರಲ್ಲವೇ ಅಲ್ಲ, ಅವರು ರಾಕ್ಷಸರು. ತಮ್ಮ ವಿಚಾರಧಾರೆಗೆ, ತಮ್ಮ ಪ್ರದೇಶಕ್ಕೆ, ತಮ್ಮ ಹಿತಾಸಕ್ತಿಗೆ ಯಾವುದೇ ರೀತಿಯಲ್ಲಿ ಅಡ್ಡಿ ಮಾಡದ, ತೊಂದರೆ ಮಾಡದ, ಸಂಬಂಧವೇ ಇಲ್ಲದ, ಅಧಿಕಾರವೂ ಇಲ್ಲದ, ಅಮಾಯಕ, ಅಸಹಾಯಕ ಜನರನ್ನು ಗುಂಡಿಟ್ಟು ಕೊಲ್ಲುತ್ತಾರೆಂದರೆ ಅವರು ಮನುಷ್ಯರೇ ಅಲ್ಲ.

ಆದ್ದರಿಂದ ಆ ನರ ರಾಕ್ಷಸರ ಬಗ್ಗೆ ಹೆಚ್ಚಿಗೆ ಮಾತನಾಡುವ ಅವಶ್ಯಕತೆ ಇಲ್ಲ. ಅವರ ವಿನಾಶವನ್ನು ಸದಾ ಬಯಸಬೇಕು.

ಹಾಗೆಯೇ ಅವರನ್ನು ನಿಯಂತ್ರಿಸಲು ಪೊಲೀಸ್, ಸೈನಿಕರು ಮತ್ತು ಆಡಳಿತ ವ್ಯವಸ್ಥೆ ಇದೆ. ಅವರು ಎಷ್ಟು ಸಾಧ್ಯವೋ ಅಷ್ಟು ತಮ್ಮ ಮಿತಿಯಲ್ಲಿ ಆ ಕೆಲಸವನ್ನು ಮಾಡುತ್ತಿದ್ದಾರೆ ಅವರಿಗೂ ಅಭಿನಂದನೆಗಳು.

ಯುದ್ಧ ಕೊಲ್ಲುವ ಕಾಯುವ ಆಟ. ಇದರ ಮಧ್ಯೆ ಒಂದಷ್ಟು ಧರ್ಮ, ರಾಜಕೀಯ ಸೇರಿಕೊಂಡಿರುತ್ತದೆ. ಅವರು ಅದಕ್ಕೆ ತಕ್ಕಂತೆ ಒಂದಷ್ಟು ತಂತ್ರ, ಪ್ರತಿ ತಂತ್ರ, ಕುತಂತ್ರ ಮಾಡಿಕೊಂಡು ಅಧಿಕಾರ ಅನುಭವಿಸುತ್ತಾರೆ.

ಅಲ್ಲಿಯವರೆಗೂ ಒಂದು ಹಂತಕ್ಕೆ ಎಲ್ಲವೂ ಓಕೆ. ಆದರೆ ಮಾಧ್ಯಮಗಳು ಮತ್ತು ಸಾರ್ವಜನಿಕರಿಗೆ ಏನಾಗಿದೆ, ಇಷ್ಟೊಂದು ಯುದ್ಧೋತ್ಸಾಹ, ಯುದ್ಧೋನ್ಮಾದದ ಅವಶ್ಯಕತೆ ಇದೆಯೇ, ಇದು ಅತಿರೇಕವಲ್ಲವೇ….

ಯುದ್ದ ಎಂಬುದು ಗೆದ್ದವರಿಗೂ, ಸೋತವರಿಗೂ ಅಪಾರ ನಷ್ಟ ಮತ್ತು ಪ್ರಾಣಹಾನಿ ಉಂಟುಮಾಡುವುದಲ್ಲವೇ,
ಅದರಲ್ಲಿ ಸಂಭ್ರಮವೇಕೆ….

ಭಾರತದಲ್ಲಿ ಮತ್ತು ಪಾಕಿಸ್ತಾನದಲ್ಲಿ ಎಷ್ಟು ಜನರಿಗೆ ಪ್ರತಿನಿತ್ಯದ ಡಯಾಲಿಸಿಸ್ ಚಿಕಿತ್ಸೆ ಅವಶ್ಯಕತೆ ಇದೆ ಗೊತ್ತೇ, ಎಷ್ಟು ಹೆಣ್ಣು ಮಕ್ಕಳು ತುಂಬು ಗರ್ಭಿಣಿಯರಾಗಿದ್ದಾರೆ ಗೊತ್ತೇ,
ಎಷ್ಟು ತಾಯಂದಿರು ಬಾಣಂತಿ ಅವಧಿಯಲ್ಲಿದ್ದಾರೆ ಗೊತ್ತೇ,
ಎಷ್ಟು ಜನ ವೃದ್ಧರು ಇನ್ನೊಬ್ಬರ ಮೇಲೆ ಅವಲಂಬಿತರಾಗಿದ್ದಾರೆ ಗೊತ್ತೇ,
ಎಷ್ಟು ಜನ ಗಾಯಾಳುಗಳು ಇತರರ ನೆರವನ್ನು ಯಾಚಿಸುತ್ತಿದ್ದಾರೆ ಗೊತ್ತೇ,
ಅವರ ಮೇಲೆ ಯುದ್ದದ ಪರಿಣಾಮ ಹೇಗೆ ಬೀರುತ್ತದೆ ಒಮ್ಮೆ ಯೋಚಿಸಿ……

ಯಾರೋ ಕೆಲವು ಮತಾಂಧ, ಉನ್ಮಾದಿತ, ದುಷ್ಟರು ಮಾಡುವ ಅತ್ಯಂತ ದುಷ್ಟತನಕ್ಕೆ ಇಡೀ ಸಮೂಹವನ್ನು ಹೊಣೆ ಮಾಡುವುದು, ಕಷ್ಟಕ್ಕೆ ಸಿಲುಕಿಸುವುದು ಎಷ್ಟು ಸರಿ. ಅದರಲ್ಲೂ ಮೂಲ ಸಮಸ್ಯೆಯನ್ನು ಬಗೆಹರಿಸಿಕೊಳ್ಳದೆ ಆಗಾಗ ಈ ರೀತಿಯ ಸಾಯುವ ಕೊಲ್ಲುವ ಆಟದಲ್ಲಿ ಇನ್ನೆಷ್ಟು ವರ್ಷ ನಿರಂತರವಾಗಿ ತೊಡಗಿಸಿಕೊಳ್ಳುತ್ತೀರಿ, ಯುದ್ಧವಲ್ಲದೆ ಪರ್ಯಾಯಮಾರ್ಗ ಇಲ್ಲವೇ,

ಇತ್ತೀಚಿನ ದಿನಗಳ ಉದಾಹರಣೆ ತೆಗೆದುಕೊಳ್ಳುವುದಾದರೆ, ರಷ್ಯಾ ಉಕ್ರೇನ್ ಯುದ್ದದಲ್ಲಿ ಅಲ್ಲಿನ ಶಾಂತಿ ಪ್ರಿಯರು ದೊಡ್ಡ ಮಟ್ಟದ ಪ್ರತಿಭಟನೆ ಮಾಡಿದ್ದರೆ, ಆ ಯುದ್ಧದಿಂದ ಆಗಿರುವ ಸುಮಾರು ಎರಡು ಲಕ್ಷ ಜನರ ಪ್ರಾಣ ಹಾನಿ ನಿಲ್ಲಿಸಬಹುದಿತ್ತೇನೋ, ಇಸ್ರೇಲ್ ಪ್ಯಾಲಿಸ್ಟೇನ್ ಜನರು ಶಾಂತಿಯ ಪರವಾಗಿಯೇ ಚಳವಳಿ ಮಾಡಿದ್ದರೆ ಸುಮಾರು 60 ಸಾವಿರ ಜನರ ಜೀವ ಉಳಿಯಬಹುದಿತ್ತೇನೋ,

ಈಗ ಭಾರತ ಪಾಕಿಸ್ತಾನದ ಸಾಮಾನ್ಯ ಜನ ಶಾಂತಿಯ ಪರವಾಗಿ ಧ್ವನಿ ಎತ್ತಿದರೆ ಮುಂದೆ ಆಗಬಹುದಾದ ದೊಡ್ಡ ಸಾವು ನೋವು ತಪ್ಪಬಹುದೇನೋ ಎಂಬ ದೂರದ ಆಸೆ. ಕನಿಷ್ಠ ಶಾಂತಿಯ ಪರವಾಗಿ ಒಂದಷ್ಟು ಧ್ವನಿಗಳಾದರು ಮೊಳಗಲು ಎರಡು ದೇಶದ ಜನರು ಅವಕಾಶ ನೀಡಿ. ಯುದ್ಧದ ನಡುವೆಯೂ ಶಾಂತಿಯ ಧ್ವನಿ ಸದಾ ನಿರಂತರವಾಗಿ ಕೇಳುತ್ತಿರಲಿ. ಅದು ಮೂಕ ಹಕ್ಕಿಯ ರೋಧನೆಯಾದರು ಚಿಂತೆ ಇಲ್ಲ. ಆ ಧ್ವನಿ ಮಾತ್ರ ಮೊಳಗುತ್ತಲೇ ಇರಲಿ…….

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ, ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ, ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಅಕ್ರಮ ಸಂಬಂಧಕ್ಕೆ ಒಪ್ಪದ ಮಹಿಳೆಯ ಖಾಸಗಿ ಅಂಗ ತುಳಿದು ದೌರ್ಜನ್ಯ: ಚಿಕಿತ್ಸೆ ಫಲಕಾರಿಯಾಗದೇ ಮಹಿಳೆ ಸಾವು: ವ್ಯಕ್ತಿ ಬಂಧನ

ಅಕ್ರಮ ಸಂಬಂಧಕ್ಕೆ ಒಪ್ಪದ ಮಹಿಳೆಯ ಖಾಸಗಿ ಅಂಗವನ್ನು ತುಳಿದು ದೌರ್ಜನ್ಯ ನಡೆಸಿ ಮಹಿಳೆಯ ಸಾವಿಗೆ ಕಾರಣನಾದ ಕಾಮುಕನನ್ನು ಪೊಲೀಸರು ಬಂಧಿಸಿರುವ…

5 hours ago

ಮೇ.5ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಮೇ.5ರಂದು 66/11 ಕೆವಿ ಡಿ.ಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ DF17-ನಂದಿ ಮೋರಿ, DF18-ಬೀಡಿಕೆರೆ ಫೀಡರ್‌ಗಳಲ್ಲಿ ವಿದ್ಯುತ್…

11 hours ago

ಚುನಾವಣಾ ಫಲಿತಾಂಶದ ವಿಶ್ಲೇಷಣೆ…..

ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…

18 hours ago

ಕಾರ್ಮಿಕ ವರ್ಗದ ವೈದ್ಯಕೀಯ ಸೇವೆಗೆ ಇಎಸ್ಐಸಿ ಆಸ್ಪತ್ರೆ ವರದಾನ- ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ

ಶ್ರಮಿಕ ವರ್ಗದವರು ಹಾಗೂ ಅವರ ಅವಲಂಬಿತರಿಗೆ ಉಚಿತ ವೈದ್ಯಕೀಯ ಸೇವೆಗಳನ್ನು ಒದಗಿಸುವಲ್ಲಿ ಇಎಸ್ಐಸಿ ಆಸ್ಪತ್ರೆಯು ವರದಾನವಾಗಲಿದೆ. ಎಲ್ಲಾ ಕಾರ್ಮಿಕರು ವೈದ್ಯಕೀಯ…

1 day ago

ಕೊನಘಟ್ಟ ಪ್ರೀಮಿಯರ್ ಲೀಗ್(ಕೆಪಿಎಲ್ ಸೀಸನ್-1): ‘ಎ’ ತಂಡವನ್ನು ಮಣಿಸಿ ಕೊನಘಟ್ಟ ಪ್ರೀಮಿಯರ್ ಲೀಗ್ ಟ್ರೋಫಿ ಪಡೆದ ಕೊನಘಟ್ಟ ‘ಬಿ’ ತಂಡ: ಗಣ್ಯರಿಂದ ಅಭಿನಂದನೆ, ಪ್ರೋತ್ಸಾಹ

. ಕೊನಘಟ್ಟ ಪ್ರೀಮಿಯರ್ ಲೀಗ್(ಕೆಪಿಎಲ್ ಸೀಸನ್-1) ನ್ನು ಕೊನಘಟ್ಟ ಗ್ರಾಮದಲ್ಲಿ ಆಯೋಜನೆ ಮಾಡಲಾಗಿತ್ತು. ಅಂತಿಮ ಹಣಾಹಣಿಯಲ್ಲಿ 'ಎ' ತಂಡವನ್ನು ಮಣಿಸಿ…

1 day ago

ಕಾರಿನಲ್ಲಿ ಬೆಂಕಿ: ಮಹಿಳೆ ಅನುಮಾನಾಸ್ಪದ ಸಾವು ಪ್ರಕರಣ: ಮಹಿಳೆಯ ಜೊತೆ ಕಾರಿನಲ್ಲಿದ್ದ ವ್ಯಕ್ತಿ ಕೂಡ ರೈಲಿಗೆ ಸಿಲುಕಿ ಸಾವು

ದೊಡ್ಡಬಳ್ಳಾಪುರ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಮೇ.2ರ ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ…

1 day ago