Categories: ಲೇಖನ

‘ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ’…

ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ,
” War against war… ”

ಅಸಹಾಯಕರ ನೋವಿನ ಧ್ವನಿ,…

ದಯವಿಟ್ಟು ಬನ್ನಿ ಭಾಗವಹಿಸಿ……

ಯುದ್ಧದ ವಿರುದ್ಧವೇ ಯುದ್ಧ ಸಾರುವ ಅನಿವಾರ್ಯತೆಗೆ ವಿಶ್ವ ಸಮುದಾಯ ಬರಬೇಕಾಗಿದೆ. ಇಲ್ಲದಿದ್ದರೆ ವಿಶ್ವ ಎಂದಿನಂತೆ ಉಳಿಯುವುದು ಕಷ್ಟ….

ಯಾರೋ ಹೇಳಿದಂತೆ ಮುದುಕರು ಯುದ್ಧ ಘೋಷಿಸುತ್ತಾರೆ, ಯುವಕರ ಯುದ್ಧದಲ್ಲಿ ಸಾಯುತ್ತಾರೆ. ಯಾರೋ ತಾಯಿ ಹೆತ್ತ ಮಕ್ಕಳು ಇನ್ಯಾರದೋ ಹುಚ್ಚಾಟಕ್ಕೆ ಬಲಿಯಾಗುತ್ತಾರೆ….

ಸೈನಿಕರು……

ಯುದ್ಧದ ಈ ಭಯಂಕರ ಸನ್ನಿವೇಶದಲ್ಲಿ ಕಾಡುತ್ತಿರುವ ನನ್ನ ಸೈನಿಕ ಜೀವಗಳು ಮತ್ತು ಅವರ ಕುಟುಂಬ…….

ಸೈನಿಕರೆಂಬ ಅನಿವಾರ್ಯ ಬಲಿಪಶುಗಳು…..

ಹೌದು, ಇಡೀ ವಿಶ್ವದಲ್ಲಿ ಸುಮಾರು 200 ದೇಶಗಳಿವೆ ಮತ್ತು ಸುಮಾರು 700 ಕೋಟಿಗೂ ಹೆಚ್ಚು ಜನಸಂಖ್ಯೆ ಇದೆ. ನನ್ನ ಒಂದು ಸಣ್ಣ ಅಂದಾಜಿನ ಪ್ರಕಾರ ಸುಮಾರು 6/7 ಕೋಟಿಗೂ ಹೆಚ್ಚು ಸೈನಿಕರಿದ್ದಾರೆ.

ಮುಖ್ಯವಾಗಿ ತಮ್ಮ ದೇಶವನ್ನು ವಿದೇಶಿ ಆಕ್ರಮಣಕಾರರಿಂದ ರಕ್ಷಿಸಲು, ದೇಶದ ಆಂತರಿಕ ದುಷ್ಟ ಶಕ್ತಿಗಳನ್ನು ಅನಿವಾರ್ಯವಾದಾಗ ತಡೆಯಲು, ಪ್ರಾಕೃತಿಕ ವಿಕೋಪಗಳ ಸಮಯದಲ್ಲಿ ನಾಗರಿಕರಿಗೆ ಸಹಾಯ ಮಾಡಲು ಹೀಗೆ ಅತ್ಯಂತ ಉಪಯುಕ್ತ ಮತ್ತು ಮಹತ್ವದ ಸಂದರ್ಭದಲ್ಲಿ ಬಹುದೊಡ್ಡ ಕೆಲಸ ಮಾಡುವುದು ಸೈನಿಕ ವ್ಯವಸ್ಥೆಯ ಕಾಯಕ.

ಸೈನಿಕರ ದೈಹಿಕ ಶಕ್ತಿ, ಆಕಾರ, ಶಿಸ್ತು, ಶ್ರಮ, ಕ್ರಮಬದ್ಧತೆ, ಕರ್ತವ್ಯ ನಿಷ್ಠೆ, ದೇಶಭಕ್ತಿ ನೋಡುವುದೇ ಒಂದು ಸುಂದರ ಅನುಭವ.

ಆದರೆ ಅವರ ಇಡೀ ವೃತ್ತಿ ಸದಾ ತಮ್ಮ ಸಾವಿನ ನೆರಳಿನಲ್ಲಿ ಅಥವಾ ಇತರರನ್ನು ಕೊಲ್ಲುವ ಮನಸ್ಥಿತಿಯಲ್ಲಿಯೇ ಇರುತ್ತದೆ. ಯಾವುದೇ ಭಾವನೆ, ತೀರ್ಮಾನ, ಮಾನವೀಯತೆ, ಸರಿ ತಪ್ಪು ಯಾವುದಾದರ ಸ್ವಾತಂತ್ರ್ಯವೂ ಇಲ್ಲದೇ ಕೇವಲ ಸಾವಿನ ಆಟದಲ್ಲಿ ಆದೇಶ ಪಾಲಿಸುವುದು ಮಾತ್ರ ಅವರ ಕೆಲಸವಾಗಿರುತ್ತದೆ.

ಇತ್ತೀಚಿನ ನನ್ನ ಜಮ್ಮು, ಕಾಶ್ಮೀರ, ಲೇಹ್, ಲಡಾಖ್ ಪ್ರವಾಸದಲ್ಲಿ ಪಾಕಿಸ್ತಾನ ಮತ್ತು ಚೀನಾದ ಗಡಿ ಭಾಗಗಳಲ್ಲಿ ಭಾರತ ನಿಯೋಜಿಸಿರುವ ಸೈನಿಕ ಶಿಬಿರಗಳು, ಬಂಕರ್ ಗಳು, ಸದಾ ಶಸ್ತ್ರಸಜ್ಜಿತ ಯೋಧರು, ಆ ಯೋಧರ ಆರೋಗ್ಯಪೂರಿತ ಮತ್ತು ಬಲಿಷ್ಠ ದೇಹದಾಢ್ಯತೆಯನ್ನು ನೋಡಿದಾಗ ಅವರ ಸಾವಿನ ಬಗ್ಗೆ ಆತಂಕ ಮತ್ತು ಅವರ ಕೊಲ್ಲುವ ಮನಸ್ಥಿತಿಯ ಬಗ್ಗೆ ಬೇಸರ ಎರಡೂ ಉಂಟಾದವು.

ಎಲ್ಲಾ ದೇಶಗಳ ಸೈನಿಕರು ಬಹುತೇಕ ಹೊಟ್ಟೆ ಪಾಡಿನ ಉದ್ಯೋಗಿಗಳು. ಆಯಾ ದೇಶದ ಜನರ ಪಾಲಿಗೆ ಹೀರೋಗಳು ಮತ್ತು ಶತ್ರು ರಾಷ್ಟ್ರಗಳ ಪಾಲಿಗೆ ವಿಲನ್ ಗಳು.

ಯಾರಾದರೂ ನಮ್ಮನ್ನು ಆಕ್ರಮಿಸಬಹುದು ಎಂದು ಒಂದು ಅನುಮಾನದ ಕಾರಣಕ್ಕಾಗಿ ಇಡೀ ವಿಶ್ವ ತನ್ನ ಉತ್ಪಾದನೆಯ ಕಾಲು ಭಾಗಕ್ಕೂ ಹೆಚ್ಚು ಸಂಪನ್ಮೂಲಗಳನ್ನು ಸೈನಿಕ ವ್ಯವಸ್ಥೆಗಾಗಿ ಖರ್ಚು ಮಾಡುತ್ತದೆ ಮತ್ತು ಇದು ನಿರಂತರವಾಗಿ ಇರುತ್ತದೆ. ವರ್ಷ ವರ್ಷ ಇನ್ನೂ ಹೆಚ್ಚಾಗುತ್ತಿರುತ್ತದೆ.

ಅಮೆರಿಕಾದಂತ ದೇಶ ರಕ್ಷಣೆಗಾಗಿ ವಿಶ್ವದ ನಾಲ್ಕನೇ ದೊಡ್ಡ ಆರ್ಥಿಕ ಶಕ್ತಿ ಭಾರತದ ಒಟ್ಟು ಬಜೆಟ್ ನ ಗಾತ್ರಕ್ಕಿಂತ ಸುಮಾರು 4 ಪಟ್ಟು ಹೆಚ್ಚು. ಕೇವಲ ರಕ್ಷಣೆಗಾಗಿ ಖರ್ಚು ಮಾಡುತ್ತದೆ. ಅಂದರೆ ಸುಮಾರು ‌200 ಲಕ್ಷ ಕೋಟಿ ಅದರ ವಾರ್ಷಿಕ ರಕ್ಷಣಾ ಬಜೆಟ್.

ಪ್ರತಿ ದೇಶದ ದೊಡ್ಡ ಪ್ರಮಾಣದ ಹಣ ಸಾವಿನ ಆಟಕ್ಕಾಗಿ‌ ಖರ್ಚಾಗುತ್ತದೆ. ಹಾಗೆಯೇ ಮಾನವ ಸಂಪನ್ಮೂಲಗಳ ದೃಷ್ಟಿಯಿಂದ ನೋಡಿದರು ಅತಿ ಹೆಚ್ಚು ಆರೋಗ್ಯವಂತ ಮತ್ತು ಬಲಿಷ್ಠ ವ್ಯಕ್ತಿಗಳು ಸೈನಿಕರೇ ಆಗಿರುತ್ತಾರೆ.

ಜಗತ್ತಿನ ಬಹುತೇಕ ದೇಶಗಳ ಬಹಳಷ್ಟು ಜನರು ದೇವರನ್ನು ನಂಬುತ್ತಾರೆ. ಧರ್ಮವನ್ನು ಅನುಸರಿಸುತ್ತಾರೆ. ಆದರೆ ವಾಸ್ತವದಲ್ಲಿ ಅದಕ್ಕೆ ವಿರುದ್ಧ ನಿಲುವು ಹೊಂದಿರುತ್ತಾರೆ. ಅಂದರೆ ದೇವರು ಧರ್ಮ ಕೇವಲ ಭಾವನೆಗೆ ಸೀಮಿತಗೊಳಿಸಿ ತಮ್ಮ ರಕ್ಷಣೆಗಾಗಿ ಕೊಲ್ಲುವ ಪರಿಣಿತರಾದ ಸೈನಿಕರ ಮೇಲೆಯೇ ಅವಲಂಬಿಸಿರುತ್ತಾರೆ. ಇದು ಬಹುದೊಡ್ಡ ವೈರುಧ್ಯವಲ್ಲವೇ. ತನ್ನ ‌ದೇಶವನ್ನು ಕಾಯಲು ದೇವರಿಗಿಂತ ಸೈನಿಕರೇ ಮುಖ್ಯ ಎಂದಾಯಿತಲ್ಲವೇ…..

ಏನೇ ಆಗಲಿ ವಾಸ್ತವ‌ ದೃಷ್ಟಿಯಿಂದ ನೋಡಿದರೆ ‌ಸೈನಿಕರು ಅನಿವಾರ್ಯ ಬಲಿಪಶುಗಳು ಎಂದೆನಿಸುವುದಿಲ್ಲವೇ…..

ಸೈನಿಕರನ್ನು ನೋಡಿದಾಗ ಅವರ ಮೇಲೆ ಸರಿದಾಡುತ್ತಿರುವ ಸಾವಿನ ಛಾಯೆ ಮತ್ತು ಕೊಲ್ಲುವ ಕ್ರೌರ್ಯ ಒಟ್ಟಿಗೆ ಕಾಣುತ್ತಿತ್ತು. ಅವರನ್ನು ಅದರಿಂದ ಮುಕ್ತಗೊಳಿಸಿ ‌ಬದುಕಿನ ಸಹಜ ವಾತಾವರಣಕ್ಕೆ ಕರೆತಂದು ಉಪಯೋಗಕಾರಿ ಸಾಧನೆಯ ಸಂಪನ್ಮೂಲವಾಗಿ ಪರಿವರ್ತಿಸಲು ಸಾಧ್ಯವಿಲ್ಲವೇ ಎಂಬ ಪ್ರಶ್ನೆ ಕಾಡಿದಾಗ ಬಹುಶಃ ಅದು‌ ಅಸಾಧ್ಯ ಎಂಬ ಉತ್ತರವೇ ಕಾಣುತ್ತಿದೆ.

ಆದರೂ ವಿಶ್ವದ ಎಲ್ಲಾ ಸೈನಿಕರಿಗೂ ತಮ್ಮ ಕರ್ತವ್ಯ ನಿಷ್ಠೆಗಾಗಿ ಒಂದು ಸಲಾಂ‌ ಹೇಳುತ್ತಾ……

ನಾವು ವಿಶ್ವ ಮಾನವರು ಎಂಬ ಪರಿಕಲ್ಪನೆ ಕೇವಲ ಘೋಷಣೆ ಮಾತ್ರ. ವಾಸ್ತವದಲ್ಲಿ ಮನುಷ್ಯರು ಅತ್ಯಂತ ಅಲ್ಪ ಮಾನವರು ಮತ್ತು ಅನಾಗರಿಕರು ಹಾಗು ಸ್ವಾರ್ಥಿಗಳು. ಕೊಲ್ಲುವ ಆಟದಲ್ಲಿ ಪರಿಪೂರ್ಣತೆ ‌ಸಾಧಿಸಲು ಪ್ರಯತ್ನಿಸುತ್ತಾ ಜೀವಿಸುತ್ತಿರುವ ನರ ರಾಕ್ಷಸರು.

ಇದು ಕೇವಲ ಇತಿಹಾಸದಲ್ಲಿ ಮಾತ್ರವಲ್ಲ ವರ್ತಮಾನದ ರಷ್ಯಾ ಉಕ್ರೇನ್ ಯುದ್ದ, ಇಸ್ರೇಲ್, ಹಮಾಸ್, ಅಮೆರಿಕಾ, ಇರಾನ್ ಘರ್ಷಣೆ ನಡೆಯುತ್ತಿರುವ ಸಂದರ್ಭದಲ್ಲಿ ವಿಶ್ವದ ಎಲ್ಲಾ ದೇಶಗಳ ವರ್ತನೆಯನ್ನು ನೋಡಿದಾಗ ಮನುಷ್ಯರ ರಾಕ್ಷಸ ರೂಪ ಸ್ಪಷ್ಟವಾಗಿ ಕಾಣಬಹುದು………….

ಎಲ್ಲಾ ಜೀವರಾಶಿಗಳು ಬಹುತೇಕ ತಮ್ಮ ಮೂಲ ಗುಣ ಸ್ವಭಾವಗಳಲ್ಲಿ‌ ಸಹಜತೆ ಕಾಪಾಡಿಕೊಂಡಿವೆ. ಮನುಷ್ಯ ಪ್ರಾಣಿ ಮಾತ್ರ ಜಗತ್ತು ಮುಂದುವರೆದಂತೆ ತನ್ನ ಮೂಲ ಸ್ವರೂಪದಲ್ಲಿ ಅಸಹಜತೆ ತುಂಬಿಕೊಂಡು ವಿನಾಶದತ್ತ ಚಲಿಸುತ್ತಿರುವ ಲಕ್ಷಣಗಳು ಗೋಚರಿಸುತ್ತಿದೆ. ಮುಂದೆ……..

ಪ್ರಬುದ್ಧ ಮನಸ್ಸು ಪ್ರಬುದ್ಧ ‌ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ- ಕಾನೂನು ಬಾಹಿರ ಚಟುವಟಿಕೆ ಸಂಪೂರ್ಣವಾಗಿ ತ್ಯಜಿಸಬೇಕು- ಪೊಲೀಸ್ ಮೇಷ್ಟ್ರಿಂದ ರೌಡಿಗಳಿಗೆ ಕಾನೂನು ಪಾಠ: ಮಿಟ್ಟೆ ಗ್ಯಾಂಗ್ ಗೆ ವಿಶೇಷ ವಾರ್ನಿಂಗ್

ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ. ನೆಮ್ಮದಿ ಕಳೆದುಕೊಂಡು, ಕುಟಂಬದಿಂದ ದೂರಾವಾಗಿ ಭಯಭೀತಿಯಲ್ಲಿ ಜೀವನ ಮಾಡಬೇಕಷ್ಟೇ. ಹೀಗಾಗಿ ಅಕ್ರಮ, ಅನೈತಿಕ,…

10 minutes ago

ಮದುವೆ ಸಂಭ್ರಮದ ನಡುವೆ ಬೈಕ್ ಗೆ ಬೆಂಕಿ ಇಟ್ಟ ಕಿಡಿಗೇಡಿಗಳು

ಚಿಕ್ಕಬಳ್ಳಾಪುರ: ಜಿಲ್ಲೆಯ ತಾಲೂಕಿನ ಅರಸನಹಳ್ಳಿಯಲ್ಲಿ ತಡರಾತ್ರಿ ಭೀಕರ ಘಟನೆಯೊಂದು ನಡೆದಿದೆ. ಮದುವೆ ಕಾರ್ಯಕ್ರಮವಿದ್ದ ಮನೆಯ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಕಿಡಿಗೇಡಿಗಳು…

10 hours ago

ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಹಿನ್ನೆಲೆ: ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ

ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಒಂದೇ ದಿನ ಬಂದಿರುವ ಹಿನ್ನೆಲೆ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ…

10 hours ago

ಮೆಜೆಸ್ಟಿಕ್‌ನಿಂದ ಘಾಟಿ ಸುಬ್ರಮಣ್ಯಕ್ಕೆ ಬಿಎಂಟಿಸಿ ಹೊಸದಾಗಿ ನೇರ ಬಸ್‌ ಸೇವೆ ಆರಂಭ

ಬೆಂಗಳೂರು: ಬೆಂಗಳೂರು‌ ನಗರ ಹಾಗೂ ಗ್ರಾಮಾಂತರ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ(Bangalore Metropolitan Transport Corporation) ಮೇ 18ರಿಂದ…

21 hours ago

ಅರಣ್ಯದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಿ ಮಾನವೀಯತೆ ಮೆರೆದ ಇನ್ಸ್‌ಪೆಕ್ಟರ್ ಅಮರೇಶ್ ಗೌಡ

ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.…

22 hours ago

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ‌ ವಿಚಾರ: ಬೆಲೆ ಏರಿಕೆ ಹಿಂಪಡೆಯಲು ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಒತ್ತಾಯ

ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಲಿದ್ದು, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತೇವೆ ಎಂದು ಸಿಎಂ…

23 hours ago