Categories: ಲೇಖನ

ಯುದ್ಧ ನಿಲ್ಲಿಸಿ, ಭೂಮಿ ರಕ್ಷಿಸಿ, ಕದನ ವಿರಾಮ ಘೋಷಿಸಿ…

ವಿಶ್ವ ರಕ್ಷಣಾ ಆಂದೋಲನ…..

( GLOBAL PROTECTION MOVEMENT……)
***********************
ಬದುಕಿರುವ ಮತ್ತು ಈಗಲೂ ಚಟುವಟಿಕೆಯಂದಿರುವ,
ಶಾಂತಿಗಾಗಿ ನೊಬೆಲ್ ಪ್ರಶಸ್ತಿ ಪಡೆದಿರುವ ಎಲ್ಲರಿಗೂ ಒಂದು ಕಳಕಳಿಯ ಮನವಿ…

ಯುದ್ಧ ನಿಲ್ಲಿಸಿ,
ಭೂಮಿ ರಕ್ಷಿಸಿ,
ಕದನ ವಿರಾಮ ಘೋಷಿಸಿ…

ಅಮೆರಿಕಾದ ಮಾಜಿ ಅಧ್ಯಕ್ಷ ಬರಾಕ್ ಒಬಾಮ ನೇತೃತ್ವದಲ್ಲಿ ಯೂನಿಯನ್ ಆಫ್ ಅರ್ಥ್ ( Union of Earth ) ಅಥವಾ ಯೂನಿಯನ್ ಆಫ್ ವರ್ಲ್ಡ್ ( Union of world ) ಎಂಬ ಸಂಘಟನೆ ಸ್ಥಾಪಿಸಿ ತಕ್ಷಣ ಕಾರ್ಯೋನ್ಮುಖರಾಗಿ …..

ಈಗ ಅತ್ಯಂತ ತುರ್ತಾಗಿ ವಿಶ್ವಕ್ಕೆ ಮತ್ತೊಂದು ಪ್ರಬಲ ನಾಯಕತ್ವದ ಸಂಸ್ಥೆ ಬೇಕಾಗಿದೆ. ಮೊದಲ ವಿಶ್ವ ಮಹಾ ಯುದ್ಧದ ನಂತರ ರಾಷ್ಟ್ರಗಳ ಸಂಘ ( League of nation ) ಅಸ್ತಿತ್ವಕ್ಕೆ ಬಂದಿತು. ಆದರೂ ಎರಡನೆಯ ಮಹಾಯುದ್ಧ ತಡೆಯಲು ಸಾಧ್ಯವಾಗಲಿಲ್ಲ. ಭೀಕರ ಯುದ್ಧ ನಡೆದೇ ಹೋಯಿತು. ಆ ನಂತರ ವಿಶ್ವಸಂಸ್ಥೆ ( United Nations Organisation ) ಅಸ್ತಿತ್ವಕ್ಕೆ ಬಂದಿತು. ಹಾಗೂ ಹೀಗೂ ಸುಮಾರು 80 ವರ್ಷಗಳಿಂದ ಅಸ್ತಿತ್ವದಲ್ಲಿದ್ದ ವಿಶ್ವಸಂಸ್ಥೆ ಈಗ ಬಹುತೇಕ ನಿರ್ಜೀವವಾಗಿದೆ. ವಿಶ್ವ ಮೂರನೇ ಮಹಾ ಯುದ್ಧದ ಹೊಸ್ತಿಲಲ್ಲಿದೆ. ಸುಮಾರು 25 ದೇಶಗಳು ವಿವಿಧ ಭಾಗಗಳಲ್ಲಿ ನೇರ
ಯುದ್ಧದಲ್ಲಿ ತೊಡಗಿದ್ದರೆ, ಉಳಿದ ಎಲ್ಲಾ ದೇಶಗಳ ಮೇಲೆ, ಜನರ ಜೀವನದ ಮೇಲೆ ಯುದ್ಧ ಪರೋಕ್ಷ ಪರಿಣಾಮ ಬೀರಿ ಆತಂಕಕ್ಕೆ ದೂಡಿದೆ. ಭೂಮಿಯ ಒಟ್ಟು ವಾತಾವರಣ ತೀರಾ ಕಲುಷಿತವಾಗುತ್ತಿದೆ.

ಇದೀಗ ತೀರಾ ತುರ್ತಾಗಿ ಮತ್ತೊಂದು ಸಂಸ್ಥೆಯ ಅಗತ್ಯವಿದೆ. ಅದನ್ನು ಯೋಚಿಸುವ ಮೊದಲು ಕ್ಷಿಪ್ರವಾಗಿ ಯುದ್ಧದ ಕಾರ್ಮೋಡ ಹೋಗಲಾಡಿಸಲು ಎಲ್ಲಾ ದೇಶಗಳ ಪ್ರಮುಖ ಶಾಂತಿಪ್ರಿಯರ ಬಲವಾದ ಸಂಘಟನಾ ಪ್ರಯತ್ನ ಬೇಕಾಗಿದೆ.

ನನಗೆ ತುಂಬಾ ಆಶ್ಚರ್ಯವಾಗುತ್ತಿರುವುದು
ಎಲ್ಲಿಗೆ ಹೋದರು ಈಗಲೂ ಜೀವಂತವಿರುವ ನೊಬೆಲ್ ಶಾಂತಿ ಪುರಸ್ಕೃತರು. ಏಕೆಂದರೆ ಅವರಿಗೆ ನೊಬೆಲ್ ಪ್ರಶಸ್ತಿ ದೊರೆತಿರುವುದೇ ವಿಶ್ವದ ಶಾಂತಿಯ ಸ್ಥಾಪನೆಗಾಗಿ. ಅವರೇ ಈ ಸಂದರ್ಭದಲ್ಲಿ ಮೌನವಾದರೆ ಈ ಭೂಮಂಡಲವನ್ನು ಈ ಹುಚ್ಚರಿಂದ ಕಾಪಾಡುವವರು ಯಾರು ? ಮೊದಲಿಗೆ ವಿಶ್ವದ ಈಗ ಬದುಕಿರುವ ಎಲ್ಲಾ ನೊಬೆಲ್ ಶಾಂತಿ ವಿಜೇತರು ಒಂದು ಖಾಸಗಿ ವಿಮಾನವನ್ನು ಬಾಡಿಗೆಗೆ ಪಡೆದು ಯುದ್ಧದಲ್ಲಿ ನೇರವಾಗಿ ಭಾಗವಹಿಸಿರುವ ದೇಶಗಳ ಮುಖ್ಯಸ್ಥರನ್ನು ಭೇಟಿ ಮಾಡಬೇಕು, ಮಾತುಕತೆ ಆರಂಭಿಸಬೇಕು. ಕನಿಷ್ಠ ಆ ನಿಟ್ಟಿನಲ್ಲಿ ಪ್ರಯತ್ನಗಳಾದರು ಸಾಗಲಿ. ಅದರ ಯಶಸ್ಸು, ಅಪಯಶಸ್ಸು ನಂತರ ನಿರ್ಧರವಾಗಲಿ. ಆದರೆ ಶಾಂತಿಯ, ಕದನ ವಿರಾಮದ ಮಾತುಕತೆಗಳಂತೂ ಆಗಲೇ ಬೇಕಾಗಿದೆ.

ಹಾಗೆಯೇ ಬೌದ್ಧ ಗುರು ದಲೈಲಾಮ , ಕ್ರೈಸ್ತ ಗುರು ಪೋಪ್, ಇಸ್ಲಾಮಿನ ಪರಮೋಚ್ಚ ಧರ್ಮಗುರು, ಭಾರತ ಮತ್ತು ಏಷ್ಯಾದ ಪ್ರಬಲ ನಾಯಕರು, ಆಫ್ರಿಕಾ ಮತ್ತು ಆಸ್ಟ್ರೇಲಿಯಾದ ಪ್ರಮುಖರು ಮುಂತಾದವರು ಸಹ ತಮ್ಮೆಲ್ಲಾ ಇತರ ಕಾರ್ಯ ಚಟುವಟಿಕೆಗಳನ್ನು ನಿಲ್ಲಿಸಿ ಯುದ್ಧವನ್ನು ಕದನ ವಿರಾಮದವರೆಗೆ ತೆಗೆದುಕೊಂಡು ಹೋಗಲು ಪ್ರಯತ್ನಗಳನ್ನಾದರೂ ಪ್ರಾರಂಭಿಸಬೇಕು. ಅವರ ಮೇಲೆ ತೀವ್ರವಾಗಿ ಒತ್ತಡ ಹೇರಬೇಕಿದೆ.

ಈ ಕ್ರೂರಿ, ಮಾನಸಿಕ ಅಸ್ವಸ್ಥ, ಹುಚ್ಚರ ಸಂತೆಯಲ್ಲಿ ಶಾಂತಿ ಅಷ್ಟು ಸುಲಭವಲ್ಲ. ಎಲ್ಲರನ್ನೂ ಮೆಚ್ಚಿಸಲು ಸಾಧ್ಯವೂ ಇಲ್ಲ. ಆದರೆ ವಿಶ್ವಕ್ಕೊಂದು ಬಲಿಷ್ಠ ಸಂಘಟನೆಯೊಂದು ಬೇಕೇ ಬೇಕಾಗಿದೆ. ಅದು ವಿಶ್ವಸಂಸ್ಥೆಗೆ ಪರ್ಯಾಯವಾಗಬೇಕಿದೆ. ವಿಶ್ವದ ಎಲ್ಲಾ ದೇಶಗಳಲ್ಲಿಯೂ ಬಹುತೇಕ ಸುಪ್ರೀಂಕೋರ್ಟ್ ಮಾದರಿಯ ನ್ಯಾಯಾಲಯ ಅಸ್ತಿತ್ವದಲ್ಲಿದೆ. ಅದೇ ರೀತಿ ಇಡೀ ವಿಶ್ವವೇ ಒಪ್ಪುವ ಒಂದು ಬಲಿಷ್ಠ ನ್ಯಾಯಾಲಯವನ್ನು ಸ್ಥಾಪಿಸಬೇಕಾಗಿದೆ.

ಹೌದು, ಈಗಾಗಲೇ ಅಂತರಾಷ್ಟ್ರೀಯ ನ್ಯಾಯಾಲಯವಿದೆ. ಆದರೆ ಅದು ಸಹ ಸಂಪೂರ್ಣ ವಿಫಲವಾಗಿರುವುದರಿಂದ ಆ ಅನುಭವದ ಆಧಾರದ ಮೇಲೆ ಅದಕ್ಕೆ ಪರ್ಯಾಯವಾಗಿ ಮತ್ತೊಂದು ಬಲಿಷ್ಠ ಮತ್ತು ತಟಸ್ಥ ನ್ಯಾಯಾಧೀಶರ ನ್ಯಾಯಾಲಯವನ್ನು ಸ್ಥಾಪಿಸಬೇಕಾಗಿದೆ.

ಜೊತೆಗೆ ನ್ಯಾಟೋ ಕೂಟ, ವಾರ್ಸಾ ಒಪ್ಪಂದ, ಜಿ ಒಕ್ಕೂಟಗಳು, ವಿವಿಧ ಖಂಡಗಳ ಒಕ್ಕೂಟಗಳು ಸೇರಿ ಆದಷ್ಟು ಬೇಗ ಒಕ್ಕೂಟಗಳ ಒಕ್ಕೂಟ ರಚಿಸಿ ಸಮನ್ವಯ ಸಾಧಿಸಬೇಕಾಗಿದೆ.

ಇನ್ನೂ ಕೆಲವು ದಿನಗಳು ಹೀಗೆ ಪ್ರತಿಯೊಬ್ಬರು ಮೌನವಾಗಿದ್ದು ಯುದ್ಧದಾಹಿ ನಾಯಕರುಗಳ ಟ್ವೀಟ್ಗಳನ್ನು, ನೋಡುತ್ತಾ ಕುಳಿತರೆ ನಮ್ಮ ಬದುಕಿನ ಟ್ವೀಟ್ಗಳೇ ಇರುವುದಿಲ್ಲ.

80 ವರ್ಷಗಳಷ್ಟು ದೀರ್ಘಕಾಲ ವಿಶ್ವಸಂಸ್ಥೆ ಅಸ್ತಿತ್ವದಲ್ಲಿ ಇರುವುದರಿಂದ ಅದಕ್ಕೆ ಕೃತಜ್ಞತೆ ಸಲ್ಲಿಸಿ ವಿದಾಯ ಹೇಳುವ ಸಮಯ ಬಂದಿದೆ. ಏಕೆಂದರೆ ಅದೀಗ ಬಹುತೇಕ ನಿಸ್ತೇಜಿತವಾಗಿದೆ. ಯಾವುದೇ ಸಂಸ್ಥೆ ಪರಿಣಾಮಕಾರಿಯಾಗಿ ಕೆಲಸ ಮಾಡಲು ಕಾಲಕ್ಕೆ ತಕ್ಕಂತೆ ಬದಲಾವಣೆಗಳು ಆಗಬೇಕಾಗುತ್ತದೆ. ಆದರೆ ವಿಶ್ವಸಂಸ್ಥೆಯಲ್ಲಿ ಹೆಚ್ಚಿನ ಬದಲಾವಣೆಗಳಾಗದೆ ಕೆಲವೇ ಬಲಿಷ್ಠ ದೇಶಗಳು ಅದನ್ನು ರಚಿಸಿಕೊಂಡಿದ್ದವು. ವೀಟೋ ಎಂಬ ಸರ್ವಾಧಿಕಾರಿ ಅಧಿಕಾರ ಹೊಂದಿದ್ದವು. ಇದೀಗ ಕಾಲ ಬದಲಾಗಿದೆ, ಪರಿಸ್ಥಿತಿ ಬದಲಾಗಿದೆ, ಜಾಗತಿಕ ವಾತಾವರಣವು ಬದಲಾಗಿದೆ.

ಈಗ ಮತ್ತೊಂದು ಸಂಸ್ಥೆ ಬೇಕೇ ಬೇಕಾಗಿದೆ ಮತ್ತು ಹಿಂದಿನ ಅನುಭವಗಳ ಆಧಾರದ ಮೇಲೆ ಅದಕ್ಕೆ ಹೊಸ ಶಕ್ತಿ, ಹೊಸ ರೂಪ, ಹೊಸತನವನ್ನು ನೀಡಬೇಕಾಗುತ್ತದೆ. ವಿಶ್ವದ ಜನ ಈಗ ನಿಜಕ್ಕೂ ಧ್ವನಿ ಎತ್ತಬೇಕಾಗಿದೆ.

ಇದನ್ನು ಮರೆತು ಗ್ಯಾಸ್ ಸಿಲಿಂಡರ್ ಇಲ್ಲ, ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಆಗುತ್ತಿದೆ, ಹಣ್ಣು, ತರಕಾರಿ, ಆಹಾರ ಪದಾರ್ಥಗಳ ಬೆಲೆ ಏರಿಕೆಯಾಗುತ್ತಿದೆ ಎಂದು ಯೋಚಿಸುತ್ತಾ ಕುಳಿತು, ಅದಕ್ಕೆ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳುವ ನಿಟ್ಟಿನಲ್ಲಿ ನಾವು ಆಸಕ್ತರಾದರೆ ಕೊನೆಗೆ ನಮ್ಮ ಜೀವವೇ ಉಳಿಯುವುದಿಲ್ಲ. ಈ ಭೂಮಿಯೂ ಉಳಿಯುವುದಿಲ್ಲ. ಆದ್ದರಿಂದ ಇಡೀ ಜಗತ್ತಿನ ಜನ ಈ ನಿಟ್ಟಿನಲ್ಲಿ ಬೇಗ ಯೋಚಿಸಬೇಕಾಗಿದೆ.

ಅದಕ್ಕಾಗಿ ಈ ಸಂದೇಶವನ್ನು ವಿಶ್ವಸಂಸ್ಥೆ ನೋಬೆಲ್ ಪುರಸ್ಕಾರ ಸಮಿತಿ, ನೊಬೆಲ್ ಶಾಂತಿ ಪ್ರಶಸ್ತಿ ಪಡೆದ ಮಹನೀಯರು, ವಿಶ್ವದ ಎಲ್ಲಾ ದೇಶಗಳ ಮುಖ್ಯಸ್ಥರು ಮುಂತಾದವರಿಗೆ ಸಾಮಾಜಿಕ ಜಾಲತಾಣಗಳು, ಮಾಧ್ಯಮಗಳು ಮತ್ತು ಇ-ಮೇಲ್ ಮೂಲಕ ಕಳಿಸಿ ಕೊಡಬೇಕಾಗಿದೆ. ಈಗಲ್ಲದಿದ್ದರೆ ಮತ್ತೆಂದೂ ಸಾಧ್ಯವಿಲ್ಲ ಎಂಬ ಮನೋಭಾವದೊಂದಿಗೆ ಜಗತ್ತಿನ ಪ್ರತಿಯೊಬ್ಬರು ಈ ನಿಟ್ಟಿನಲ್ಲಿ ಕಾರ್ಯೋನ್ಮುಖರಾದರೆ ಮತ್ತೊಂದು ಮಹಾ ಯುದ್ಧವನ್ನು, ಅಣುಬಾಂಬುಗಳ ಹೊಡೆತವನ್ನು ತಡೆಯಬಹುದು. ಇಲ್ಲದಿದ್ದರೆ ವಿನಾಶಕ್ಕೆ ಅಣಿಯಾಗಬೇಕಾಗುತ್ತದೆ ಎಂದು ಎಚ್ಚರಿಕೆಯ ಮನವಿ ಮಾಡಿಕೊಳ್ಳುತ್ತಾ…….

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

2 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

3 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

6 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

21 hours ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

1 day ago

80ರ ಹೊಸ್ತಿಲಲ್ಲಿ ಭಾರತ…..

ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…

1 day ago