ಮಧ್ಯಪ್ರದೇಶದಲ್ಲಿ ದಲಿತ ಯುವಕನ ಮುಖದ ಮೇಲೆ ಮೂತ್ರ ವಿಸರ್ಜನೆಯ ಘಟನೆಯ ನಂತರ, ಈ ಘಟನೆ ಮಾಸುವ ಮೊದಲೇ ಉತ್ತರ ಪ್ರದೇಶದ ಸೋನಭದ್ರಾದಲ್ಲಿ ಜಿಲ್ಲೆಯಲ್ಲಿ ಮತ್ತೊಬ್ಬ ದಲಿತ ಯುವಕನನ್ನು ಅಮಾನವೀಯವಾಗಿ ನಡೆಸಿಕೊಂಡ ಘಟನೆಯ ವೀಡಿಯೊ ವೈರಲ್ ಆಗಿದೆ.
ದಲಿತ ಯುವಕನಿಂದ ತನ್ನ ಕಾಲು ನೆಕ್ಕಿಸಿಕೊಂಡ ಅಮಾನವೀಯ ಘಟನೆ ಉತ್ತರ ಪ್ರದೇಶದ ಸೋನಭದ್ರದಲ್ಲಿ ನಡೆದಿದೆ. ದಲಿತ ಯುವಕ ವಿದ್ಯುತ್ ಇಲಾಖೆಯಲ್ಲಿ ಲೈನ್ ಮ್ಯಾನ್ ಕೆಲಸ ಮಾಡುತ್ತಿದ್ದು, ಅಮಾನವೀಯವಾಗಿ ಕಾಲು ನೆಕ್ಕಿಸಿಕೊಂಡ ವ್ಯಕ್ತಿಯನ್ನು ತೇಜ್ ಬಾಲಿ ಸಿಂಗ್ ಎಂದು ಗುರುತಿಸಲಾಗಿದೆ.
ದಲಿತ ಯುವಕನಿಗೆ ಥಳಿಸಿ ಚಪ್ಪಲಿ ನೆಕ್ಕುವಂತೆ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಬಲಿಪಶುವಿನ ಕಿವಿಯನ್ನು ಹಿಡಿದು ಅವನನ್ನು ಕೂರಿಸುವುದು ಸಹ ಕಂಡುಬರುತ್ತದೆ. ವಿಡಿಯೋ ವೈರಲ್ ಆದ ನಂತರ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿ ತೇಜ್ ಬಾಲಿ ಸಿಂಗ್ ನನ್ನು ಬಂಧಿಸಿ ಮುಂದಿನ ಕ್ರಮ ಕೈಗೊಳ್ಳಲು ಆರಂಭಿಸಿದ್ದಾರೆ.
ಶಹಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯ ಬಲ್ದಿಹ್ ಗ್ರಾಮದ ವೀಡಿಯೊ ಎಂದು ಹೇಳಲಾಗುತ್ತಿದೆ. ಈ ವೈರಲ್ ವಿಡಿಯೋದಲ್ಲಿ ಗುತ್ತಿಗೆ ಲೈನ್ಮ್ಯಾನ್ ದಲಿತ ಯುವಕನಿಂದ ತೇಜ್ ಬಾಲಿ ಸಿಂಗ್ ಬಲವಂತವಾಗಿ ಚಪ್ಪಲಿಯನ್ನು ನೆಕ್ಕಿಸಿಕೊಳ್ಳುತ್ತಿರುವುದು ಸ್ಪಷ್ಟವಾಗಿ ಗೋಚರಿಸುತ್ತದೆ. ಈ ವೈರಲ್ ವಿಡಿಯೋವನ್ನು ಪೊಲೀಸರು ತನಿಖೆ ನಡೆಸಿದಾಗ, ಜುಲೈ 6 ರಂದು ಈ ಘಟನೆ ನಡೆದಿರುವುದು ಕಂಡುಬಂದಿದೆ.
ತನ್ನ ತಾಯಿಯ ಚಿಕ್ಕಪ್ಪನ ಮನೆಯಲ್ಲಿ ವಿದ್ಯುತ್ ಕೆಟ್ಟಿದ್ದರಿಂದ ಸಂಜೆ 4 ಗಂಟೆಗೆ ದೋಷವನ್ನು ನೋಡಿದೆ. ಅಷ್ಟರಲ್ಲಿ ಶಹಗಂಜ್ ಪವರ್ ಹೌಸ್ ನಲ್ಲಿ ನೇಮಕಗೊಂಡ ಗುತ್ತಿಗೆ ನೌಕರ ತೇಜ್ಬಾಲಿ ಸಿಂಗ್ ಬಂದು ನನ್ನನ್ನು ನಿಂದಿಸಿ ಥಳಿಸಿ ಜಾತಿ ಸೂಚಕ ಪದಗಳನ್ನು ಬಳಸಿ ಚಪ್ಪಲಿ ನೆಕ್ಕುವಂತೆ ಮಾಡಿದ್ದಾನೆ. ಅಷ್ಟೇ ಅಲ್ಲ ಕೊಲೆ ಬೆದರಿಕೆಯನ್ನೂ ಹಾಕಿದ್ದಾನೆ. ಸುತ್ತಮುತ್ತಲಿನವರು ರಕ್ಷಣೆಗೆ ಬಂದಾಗ ನನ್ನನ್ನು ಬಿಟ್ಟು ಓಡಿ ಹೋದ ಎಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರೋ ದಲಿತ ಯುವಕ
ಕೋಲಾರ: ಅಮೆಜಾನ್ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…
ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್ಸ್ಪೆಕ್ಟರ್ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…
ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್…
ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ…
ಹೈದರಾಬಾದ್: ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳಿಗೆ ಆಕೆಯ ಪ್ರಿಯಕರನೇ HIV ಪಾಸಿಟಿವ್ ಇಂಜಕ್ಷನ್ ಚುಚ್ಚಿದ ಆಘಾತಕಾರಿ ಘಟನೆ ಹೈದರಾಬಾದ್ನ ಮೆಡ್ಚಲ್ ಪ್ರದೇಶದಲ್ಲಿ…
ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…