ಯುಪಿಯ ಸೋನಭದ್ರಾದಲ್ಲಿ ದಲಿತ ವ್ಯಕ್ತಿಯ ಮೇಲೆ ಹಲ್ಲೆ: ಪಾದರಕ್ಷೆ ನೆಕ್ಕಿಸಿಕೊಂಡ ಆರೋಪಿ ಬಂಧನ

ಮಧ್ಯಪ್ರದೇಶದಲ್ಲಿ ದಲಿತ ಯುವಕನ ಮುಖದ ಮೇಲೆ ಮೂತ್ರ ವಿಸರ್ಜನೆಯ ಘಟನೆಯ ನಂತರ, ಈ ಘಟನೆ ಮಾಸುವ ಮೊದಲೇ ಉತ್ತರ ಪ್ರದೇಶದ ಸೋನಭದ್ರಾದಲ್ಲಿ ಜಿಲ್ಲೆಯಲ್ಲಿ ಮತ್ತೊಬ್ಬ ದಲಿತ ಯುವಕನನ್ನು ಅಮಾನವೀಯವಾಗಿ ನಡೆಸಿಕೊಂಡ ಘಟನೆಯ ವೀಡಿಯೊ ವೈರಲ್ ಆಗಿದೆ.

ದಲಿತ ಯುವಕನಿಂದ ತನ್ನ ಕಾಲು ನೆಕ್ಕಿಸಿಕೊಂಡ ಅಮಾನವೀಯ ಘಟನೆ ಉತ್ತರ ಪ್ರದೇಶದ ಸೋನಭದ್ರದಲ್ಲಿ ನಡೆದಿದೆ. ದಲಿತ ಯುವಕ ವಿದ್ಯುತ್ ಇಲಾಖೆಯಲ್ಲಿ ಲೈನ್‌ ಮ್ಯಾನ್ ಕೆಲಸ ಮಾಡುತ್ತಿದ್ದು, ಅಮಾನವೀಯವಾಗಿ ಕಾಲು ನೆಕ್ಕಿಸಿಕೊಂಡ ವ್ಯಕ್ತಿಯನ್ನು ತೇಜ್ ಬಾಲಿ ಸಿಂಗ್ ಎಂದು ಗುರುತಿಸಲಾಗಿದೆ.

ದಲಿತ ಯುವಕನಿಗೆ ಥಳಿಸಿ ಚಪ್ಪಲಿ ನೆಕ್ಕುವಂತೆ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಬಲಿಪಶುವಿನ ಕಿವಿಯನ್ನು ಹಿಡಿದು ಅವನನ್ನು ಕೂರಿಸುವುದು ಸಹ ಕಂಡುಬರುತ್ತದೆ. ವಿಡಿಯೋ ವೈರಲ್ ಆದ ನಂತರ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿ ತೇಜ್ ಬಾಲಿ ಸಿಂಗ್ ನನ್ನು ಬಂಧಿಸಿ ಮುಂದಿನ ಕ್ರಮ ಕೈಗೊಳ್ಳಲು ಆರಂಭಿಸಿದ್ದಾರೆ.

ಶಹಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯ ಬಲ್ದಿಹ್ ಗ್ರಾಮದ ವೀಡಿಯೊ ಎಂದು ಹೇಳಲಾಗುತ್ತಿದೆ. ಈ ವೈರಲ್ ವಿಡಿಯೋದಲ್ಲಿ ಗುತ್ತಿಗೆ ಲೈನ್‌ಮ್ಯಾನ್ ದಲಿತ ಯುವಕನಿಂದ ತೇಜ್ ಬಾಲಿ ಸಿಂಗ್ ಬಲವಂತವಾಗಿ ಚಪ್ಪಲಿಯನ್ನು ನೆಕ್ಕಿಸಿಕೊಳ್ಳುತ್ತಿರುವುದು ಸ್ಪಷ್ಟವಾಗಿ ಗೋಚರಿಸುತ್ತದೆ. ಈ ವೈರಲ್ ವಿಡಿಯೋವನ್ನು ಪೊಲೀಸರು ತನಿಖೆ ನಡೆಸಿದಾಗ, ಜುಲೈ 6 ರಂದು ಈ ಘಟನೆ ನಡೆದಿರುವುದು ಕಂಡುಬಂದಿದೆ.

ತನ್ನ ತಾಯಿಯ ಚಿಕ್ಕಪ್ಪನ ಮನೆಯಲ್ಲಿ ವಿದ್ಯುತ್ ಕೆಟ್ಟಿದ್ದರಿಂದ ಸಂಜೆ 4 ಗಂಟೆಗೆ ದೋಷವನ್ನು ನೋಡಿದೆ. ಅಷ್ಟರಲ್ಲಿ ಶಹಗಂಜ್ ಪವರ್ ಹೌಸ್ ನಲ್ಲಿ ನೇಮಕಗೊಂಡ ಗುತ್ತಿಗೆ ನೌಕರ ತೇಜ್ಬಾಲಿ ಸಿಂಗ್ ಬಂದು ನನ್ನನ್ನು ನಿಂದಿಸಿ ಥಳಿಸಿ ಜಾತಿ ಸೂಚಕ ಪದಗಳನ್ನು ಬಳಸಿ ಚಪ್ಪಲಿ ನೆಕ್ಕುವಂತೆ ಮಾಡಿದ್ದಾನೆ. ಅಷ್ಟೇ ಅಲ್ಲ ಕೊಲೆ ಬೆದರಿಕೆಯನ್ನೂ ಹಾಕಿದ್ದಾನೆ. ಸುತ್ತಮುತ್ತಲಿನವರು ರಕ್ಷಣೆಗೆ ಬಂದಾಗ ನನ್ನನ್ನು ಬಿಟ್ಟು ಓಡಿ ಹೋದ ಎಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರೋ ದಲಿತ ಯುವಕ

Ramesh Babu

Journalist

Recent Posts

ಇಬ್ಬರು ಏರೋಸ್ಪೇಸ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಾಲೇಜಲ್ಲಿ ಶೋಕಿ ಮಾಡೋ ಖಯಾಲಿ: ಆದ್ರೆ ಜೇಬಲ್ಲಿ ಕಾಂಚಾಣ ಇಲ್ಲ: ಕಾಸಿಗಾಗಿ ಏನು ಮಾಡಿದ್ರು ಗೊತ್ತಾ……

ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…

3 hours ago

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹೀಲಿನ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ

ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…

4 hours ago

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

9 hours ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

11 hours ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

13 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

14 hours ago