ಮಧ್ಯಪ್ರದೇಶದಲ್ಲಿ ದಲಿತ ಯುವಕನ ಮುಖದ ಮೇಲೆ ಮೂತ್ರ ವಿಸರ್ಜನೆಯ ಘಟನೆಯ ನಂತರ, ಈ ಘಟನೆ ಮಾಸುವ ಮೊದಲೇ ಉತ್ತರ ಪ್ರದೇಶದ ಸೋನಭದ್ರಾದಲ್ಲಿ ಜಿಲ್ಲೆಯಲ್ಲಿ ಮತ್ತೊಬ್ಬ ದಲಿತ ಯುವಕನನ್ನು ಅಮಾನವೀಯವಾಗಿ ನಡೆಸಿಕೊಂಡ ಘಟನೆಯ ವೀಡಿಯೊ ವೈರಲ್ ಆಗಿದೆ.
ದಲಿತ ಯುವಕನಿಂದ ತನ್ನ ಕಾಲು ನೆಕ್ಕಿಸಿಕೊಂಡ ಅಮಾನವೀಯ ಘಟನೆ ಉತ್ತರ ಪ್ರದೇಶದ ಸೋನಭದ್ರದಲ್ಲಿ ನಡೆದಿದೆ. ದಲಿತ ಯುವಕ ವಿದ್ಯುತ್ ಇಲಾಖೆಯಲ್ಲಿ ಲೈನ್ ಮ್ಯಾನ್ ಕೆಲಸ ಮಾಡುತ್ತಿದ್ದು, ಅಮಾನವೀಯವಾಗಿ ಕಾಲು ನೆಕ್ಕಿಸಿಕೊಂಡ ವ್ಯಕ್ತಿಯನ್ನು ತೇಜ್ ಬಾಲಿ ಸಿಂಗ್ ಎಂದು ಗುರುತಿಸಲಾಗಿದೆ.
ದಲಿತ ಯುವಕನಿಗೆ ಥಳಿಸಿ ಚಪ್ಪಲಿ ನೆಕ್ಕುವಂತೆ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಬಲಿಪಶುವಿನ ಕಿವಿಯನ್ನು ಹಿಡಿದು ಅವನನ್ನು ಕೂರಿಸುವುದು ಸಹ ಕಂಡುಬರುತ್ತದೆ. ವಿಡಿಯೋ ವೈರಲ್ ಆದ ನಂತರ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿ ತೇಜ್ ಬಾಲಿ ಸಿಂಗ್ ನನ್ನು ಬಂಧಿಸಿ ಮುಂದಿನ ಕ್ರಮ ಕೈಗೊಳ್ಳಲು ಆರಂಭಿಸಿದ್ದಾರೆ.
ಶಹಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯ ಬಲ್ದಿಹ್ ಗ್ರಾಮದ ವೀಡಿಯೊ ಎಂದು ಹೇಳಲಾಗುತ್ತಿದೆ. ಈ ವೈರಲ್ ವಿಡಿಯೋದಲ್ಲಿ ಗುತ್ತಿಗೆ ಲೈನ್ಮ್ಯಾನ್ ದಲಿತ ಯುವಕನಿಂದ ತೇಜ್ ಬಾಲಿ ಸಿಂಗ್ ಬಲವಂತವಾಗಿ ಚಪ್ಪಲಿಯನ್ನು ನೆಕ್ಕಿಸಿಕೊಳ್ಳುತ್ತಿರುವುದು ಸ್ಪಷ್ಟವಾಗಿ ಗೋಚರಿಸುತ್ತದೆ. ಈ ವೈರಲ್ ವಿಡಿಯೋವನ್ನು ಪೊಲೀಸರು ತನಿಖೆ ನಡೆಸಿದಾಗ, ಜುಲೈ 6 ರಂದು ಈ ಘಟನೆ ನಡೆದಿರುವುದು ಕಂಡುಬಂದಿದೆ.
ತನ್ನ ತಾಯಿಯ ಚಿಕ್ಕಪ್ಪನ ಮನೆಯಲ್ಲಿ ವಿದ್ಯುತ್ ಕೆಟ್ಟಿದ್ದರಿಂದ ಸಂಜೆ 4 ಗಂಟೆಗೆ ದೋಷವನ್ನು ನೋಡಿದೆ. ಅಷ್ಟರಲ್ಲಿ ಶಹಗಂಜ್ ಪವರ್ ಹೌಸ್ ನಲ್ಲಿ ನೇಮಕಗೊಂಡ ಗುತ್ತಿಗೆ ನೌಕರ ತೇಜ್ಬಾಲಿ ಸಿಂಗ್ ಬಂದು ನನ್ನನ್ನು ನಿಂದಿಸಿ ಥಳಿಸಿ ಜಾತಿ ಸೂಚಕ ಪದಗಳನ್ನು ಬಳಸಿ ಚಪ್ಪಲಿ ನೆಕ್ಕುವಂತೆ ಮಾಡಿದ್ದಾನೆ. ಅಷ್ಟೇ ಅಲ್ಲ ಕೊಲೆ ಬೆದರಿಕೆಯನ್ನೂ ಹಾಕಿದ್ದಾನೆ. ಸುತ್ತಮುತ್ತಲಿನವರು ರಕ್ಷಣೆಗೆ ಬಂದಾಗ ನನ್ನನ್ನು ಬಿಟ್ಟು ಓಡಿ ಹೋದ ಎಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರೋ ದಲಿತ ಯುವಕ
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…