ಮಧ್ಯಪ್ರದೇಶದಲ್ಲಿ ದಲಿತ ಯುವಕನ ಮುಖದ ಮೇಲೆ ಮೂತ್ರ ವಿಸರ್ಜನೆಯ ಘಟನೆಯ ನಂತರ, ಈ ಘಟನೆ ಮಾಸುವ ಮೊದಲೇ ಉತ್ತರ ಪ್ರದೇಶದ ಸೋನಭದ್ರಾದಲ್ಲಿ ಜಿಲ್ಲೆಯಲ್ಲಿ ಮತ್ತೊಬ್ಬ ದಲಿತ ಯುವಕನನ್ನು ಅಮಾನವೀಯವಾಗಿ ನಡೆಸಿಕೊಂಡ ಘಟನೆಯ ವೀಡಿಯೊ ವೈರಲ್ ಆಗಿದೆ.
ದಲಿತ ಯುವಕನಿಂದ ತನ್ನ ಕಾಲು ನೆಕ್ಕಿಸಿಕೊಂಡ ಅಮಾನವೀಯ ಘಟನೆ ಉತ್ತರ ಪ್ರದೇಶದ ಸೋನಭದ್ರದಲ್ಲಿ ನಡೆದಿದೆ. ದಲಿತ ಯುವಕ ವಿದ್ಯುತ್ ಇಲಾಖೆಯಲ್ಲಿ ಲೈನ್ ಮ್ಯಾನ್ ಕೆಲಸ ಮಾಡುತ್ತಿದ್ದು, ಅಮಾನವೀಯವಾಗಿ ಕಾಲು ನೆಕ್ಕಿಸಿಕೊಂಡ ವ್ಯಕ್ತಿಯನ್ನು ತೇಜ್ ಬಾಲಿ ಸಿಂಗ್ ಎಂದು ಗುರುತಿಸಲಾಗಿದೆ.
ದಲಿತ ಯುವಕನಿಗೆ ಥಳಿಸಿ ಚಪ್ಪಲಿ ನೆಕ್ಕುವಂತೆ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಬಲಿಪಶುವಿನ ಕಿವಿಯನ್ನು ಹಿಡಿದು ಅವನನ್ನು ಕೂರಿಸುವುದು ಸಹ ಕಂಡುಬರುತ್ತದೆ. ವಿಡಿಯೋ ವೈರಲ್ ಆದ ನಂತರ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿ ತೇಜ್ ಬಾಲಿ ಸಿಂಗ್ ನನ್ನು ಬಂಧಿಸಿ ಮುಂದಿನ ಕ್ರಮ ಕೈಗೊಳ್ಳಲು ಆರಂಭಿಸಿದ್ದಾರೆ.
ಶಹಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯ ಬಲ್ದಿಹ್ ಗ್ರಾಮದ ವೀಡಿಯೊ ಎಂದು ಹೇಳಲಾಗುತ್ತಿದೆ. ಈ ವೈರಲ್ ವಿಡಿಯೋದಲ್ಲಿ ಗುತ್ತಿಗೆ ಲೈನ್ಮ್ಯಾನ್ ದಲಿತ ಯುವಕನಿಂದ ತೇಜ್ ಬಾಲಿ ಸಿಂಗ್ ಬಲವಂತವಾಗಿ ಚಪ್ಪಲಿಯನ್ನು ನೆಕ್ಕಿಸಿಕೊಳ್ಳುತ್ತಿರುವುದು ಸ್ಪಷ್ಟವಾಗಿ ಗೋಚರಿಸುತ್ತದೆ. ಈ ವೈರಲ್ ವಿಡಿಯೋವನ್ನು ಪೊಲೀಸರು ತನಿಖೆ ನಡೆಸಿದಾಗ, ಜುಲೈ 6 ರಂದು ಈ ಘಟನೆ ನಡೆದಿರುವುದು ಕಂಡುಬಂದಿದೆ.
ತನ್ನ ತಾಯಿಯ ಚಿಕ್ಕಪ್ಪನ ಮನೆಯಲ್ಲಿ ವಿದ್ಯುತ್ ಕೆಟ್ಟಿದ್ದರಿಂದ ಸಂಜೆ 4 ಗಂಟೆಗೆ ದೋಷವನ್ನು ನೋಡಿದೆ. ಅಷ್ಟರಲ್ಲಿ ಶಹಗಂಜ್ ಪವರ್ ಹೌಸ್ ನಲ್ಲಿ ನೇಮಕಗೊಂಡ ಗುತ್ತಿಗೆ ನೌಕರ ತೇಜ್ಬಾಲಿ ಸಿಂಗ್ ಬಂದು ನನ್ನನ್ನು ನಿಂದಿಸಿ ಥಳಿಸಿ ಜಾತಿ ಸೂಚಕ ಪದಗಳನ್ನು ಬಳಸಿ ಚಪ್ಪಲಿ ನೆಕ್ಕುವಂತೆ ಮಾಡಿದ್ದಾನೆ. ಅಷ್ಟೇ ಅಲ್ಲ ಕೊಲೆ ಬೆದರಿಕೆಯನ್ನೂ ಹಾಕಿದ್ದಾನೆ. ಸುತ್ತಮುತ್ತಲಿನವರು ರಕ್ಷಣೆಗೆ ಬಂದಾಗ ನನ್ನನ್ನು ಬಿಟ್ಟು ಓಡಿ ಹೋದ ಎಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರೋ ದಲಿತ ಯುವಕ
ರಾತ್ರಿ 8 - 30 ರ ಸಮಯ....... ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನಿನ್ನೆ ರಾತ್ರಿ 8.30 ರ…
ಬೆಂಗಳೂರು ಗ್ರಾಮಾಂತರ ಜಿ.ಪಂ ನೂತನ ಸಿ.ಇ.ಒ ಆಗಿ ಡಾ.ವಸಂತಿ ಅಮರ್ ಬಿ.ವಿ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ.
ದೊಡ್ಡಬಳ್ಳಾಪುರ ನಗರದಲ್ಲಿ ಏ.19 ರಂದು 66/11ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರಹೊಮ್ಮುವ F02-Raghunathapura, F07-Locall, F14-Scoutcamp & F21-KVN…
ಏಪ್ರಿಲ್ 20 ರಂದು ಬಸವ ಜಯಂತಿ ಮತ್ತು ಅಕ್ಷಯ ತೃತೀಯ ಹಿನ್ನೆಲೆಯಲ್ಲಿ ಬಾಲ್ಯವಿವಾಹಗಳು ಆಗುವ ಸಾಧ್ಯತೆ ಇದ್ದು, ಬಾಲ್ಯ ವಿವಾಹಗಳನ್ನು…
ಬಿಲ್ ಕಲೆಕ್ಟರ್ ಲೋಕಾ ಬಲೆಗೆ ಬಿದ್ದಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.. ಲೋಕಾ ಬಲೆಗೆ ಬಿದ್ದ ಬಿಲ್ ಕಲೆಕ್ಟರ್ 'ಇ' ಖಾತೆ…
ಟ್ರ್ಯಾಕ್ಟರ್ ಗೆ ಹಿಂಬದಿಯಿಂದ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್ ಚಾಲಕ ಸಾವನ್ನಪ್ಪಿರುವ ಘಟನೆ ದಾಬಸ್ ಪೇಟೆ - ಹೊಸಕೋಟೆ…