ಮಧ್ಯಪ್ರದೇಶದಲ್ಲಿ ದಲಿತ ಯುವಕನ ಮುಖದ ಮೇಲೆ ಮೂತ್ರ ವಿಸರ್ಜನೆಯ ಘಟನೆಯ ನಂತರ, ಈ ಘಟನೆ ಮಾಸುವ ಮೊದಲೇ ಉತ್ತರ ಪ್ರದೇಶದ ಸೋನಭದ್ರಾದಲ್ಲಿ ಜಿಲ್ಲೆಯಲ್ಲಿ ಮತ್ತೊಬ್ಬ ದಲಿತ ಯುವಕನನ್ನು ಅಮಾನವೀಯವಾಗಿ ನಡೆಸಿಕೊಂಡ ಘಟನೆಯ ವೀಡಿಯೊ ವೈರಲ್ ಆಗಿದೆ.
ದಲಿತ ಯುವಕನಿಂದ ತನ್ನ ಕಾಲು ನೆಕ್ಕಿಸಿಕೊಂಡ ಅಮಾನವೀಯ ಘಟನೆ ಉತ್ತರ ಪ್ರದೇಶದ ಸೋನಭದ್ರದಲ್ಲಿ ನಡೆದಿದೆ. ದಲಿತ ಯುವಕ ವಿದ್ಯುತ್ ಇಲಾಖೆಯಲ್ಲಿ ಲೈನ್ ಮ್ಯಾನ್ ಕೆಲಸ ಮಾಡುತ್ತಿದ್ದು, ಅಮಾನವೀಯವಾಗಿ ಕಾಲು ನೆಕ್ಕಿಸಿಕೊಂಡ ವ್ಯಕ್ತಿಯನ್ನು ತೇಜ್ ಬಾಲಿ ಸಿಂಗ್ ಎಂದು ಗುರುತಿಸಲಾಗಿದೆ.
ದಲಿತ ಯುವಕನಿಗೆ ಥಳಿಸಿ ಚಪ್ಪಲಿ ನೆಕ್ಕುವಂತೆ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಬಲಿಪಶುವಿನ ಕಿವಿಯನ್ನು ಹಿಡಿದು ಅವನನ್ನು ಕೂರಿಸುವುದು ಸಹ ಕಂಡುಬರುತ್ತದೆ. ವಿಡಿಯೋ ವೈರಲ್ ಆದ ನಂತರ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿ ತೇಜ್ ಬಾಲಿ ಸಿಂಗ್ ನನ್ನು ಬಂಧಿಸಿ ಮುಂದಿನ ಕ್ರಮ ಕೈಗೊಳ್ಳಲು ಆರಂಭಿಸಿದ್ದಾರೆ.
ಶಹಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯ ಬಲ್ದಿಹ್ ಗ್ರಾಮದ ವೀಡಿಯೊ ಎಂದು ಹೇಳಲಾಗುತ್ತಿದೆ. ಈ ವೈರಲ್ ವಿಡಿಯೋದಲ್ಲಿ ಗುತ್ತಿಗೆ ಲೈನ್ಮ್ಯಾನ್ ದಲಿತ ಯುವಕನಿಂದ ತೇಜ್ ಬಾಲಿ ಸಿಂಗ್ ಬಲವಂತವಾಗಿ ಚಪ್ಪಲಿಯನ್ನು ನೆಕ್ಕಿಸಿಕೊಳ್ಳುತ್ತಿರುವುದು ಸ್ಪಷ್ಟವಾಗಿ ಗೋಚರಿಸುತ್ತದೆ. ಈ ವೈರಲ್ ವಿಡಿಯೋವನ್ನು ಪೊಲೀಸರು ತನಿಖೆ ನಡೆಸಿದಾಗ, ಜುಲೈ 6 ರಂದು ಈ ಘಟನೆ ನಡೆದಿರುವುದು ಕಂಡುಬಂದಿದೆ.
ತನ್ನ ತಾಯಿಯ ಚಿಕ್ಕಪ್ಪನ ಮನೆಯಲ್ಲಿ ವಿದ್ಯುತ್ ಕೆಟ್ಟಿದ್ದರಿಂದ ಸಂಜೆ 4 ಗಂಟೆಗೆ ದೋಷವನ್ನು ನೋಡಿದೆ. ಅಷ್ಟರಲ್ಲಿ ಶಹಗಂಜ್ ಪವರ್ ಹೌಸ್ ನಲ್ಲಿ ನೇಮಕಗೊಂಡ ಗುತ್ತಿಗೆ ನೌಕರ ತೇಜ್ಬಾಲಿ ಸಿಂಗ್ ಬಂದು ನನ್ನನ್ನು ನಿಂದಿಸಿ ಥಳಿಸಿ ಜಾತಿ ಸೂಚಕ ಪದಗಳನ್ನು ಬಳಸಿ ಚಪ್ಪಲಿ ನೆಕ್ಕುವಂತೆ ಮಾಡಿದ್ದಾನೆ. ಅಷ್ಟೇ ಅಲ್ಲ ಕೊಲೆ ಬೆದರಿಕೆಯನ್ನೂ ಹಾಕಿದ್ದಾನೆ. ಸುತ್ತಮುತ್ತಲಿನವರು ರಕ್ಷಣೆಗೆ ಬಂದಾಗ ನನ್ನನ್ನು ಬಿಟ್ಟು ಓಡಿ ಹೋದ ಎಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರೋ ದಲಿತ ಯುವಕ
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…