ಬೆಂಗಳೂರು, ವೈಟ್ಫೀಲ್ಡ್: ಬೈಕ್ ಅಪಘಾತದಲ್ಲಿ ಭಾರೀ ಗಾಯಗೊಂಡು, ಕೈ ಹಾಗೂ ಭುಜ ಭಾಗ ಸಂಪೂರ್ಣವಾಗಿ ಸ್ವಾಧೀನ ಕಳೆದುಕೊಂಡ ಸ್ಥಿತಿಗೆ ತಲುಪಿದ್ದ 23 ವರ್ಷದ ದೇಬ್ ರಂಜನ್ ಎಂಬ ಯುವಕನಿಗೆ, ಮೆಡಿಕವರ್ ಆಸ್ಪತ್ರೆಯಲ್ಲಿ ನಡೆದ ಅಪರೂಪದ ಹಾಗೂ ಯಶಸ್ವಿ ಶಸ್ತ್ರಚಿಕಿತ್ಸೆಯು ನವಜೀವನ ನೀಡಿದೆ.
ಕೊಲ್ಕತ್ತ ಮೂಲದ ದೇಬ್ ರಂಜನ್ ಬೈಕ್ನಿಂದ ಬಿದ್ದು ಭುಜ ಮತ್ತು ಕತ್ತಿನ ನರಗಳು ಸಂಪೂರ್ಣವಾಗಿ ತೀವ್ರವಾಗಿ ಕೆಲಸ ಮಾಡೋಕೆ ಆಗದ ಸ್ಥಿತಿಯಲ್ಲಿತ್ತು. ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರೂ ಫಲಿತಾಂಶ ಇಲ್ಲದ ಕಾರಣ, ಅವರು ಬೆಂಗಳೂರಿನ ಮೆಡಿಕವರ್ ಆಸ್ಪತ್ರೆಯ ಪ್ಲಾಸ್ಟಿಕ್ ಸರ್ಜನ್ ಡಾ. ಸುರೇಶ್ ಕೆ ಅವರನ್ನು ಸಂಪರ್ಕಿಸಿದರು.
ಸಂದರ್ಶನ ಮತ್ತು ಸ್ಕ್ಯಾನ್ ಪರೀಕ್ಷೆಗಳಿಂದ ಭುಜದ ಹಾಗೂ ಕತ್ತಿನ ಬ್ರಾಚಿಯಲ್ ಪ್ಲೆಕ್ಸಸ್ ನರಗಳು ಸಂಪೂರ್ಣವಾಗಿ ಕಟ್ ಆಗಿರುವುದು ಪತ್ತೆಯಾಯಿತು. ತಕ್ಷಣವೇ ಡಾ. ಸುರೇಶ್ ಅವರು ಸೂಪರ್ ಮೈಕ್ರೋ ಶಸ್ತ್ರಚಿಕಿತ್ಸೆ ನಡೆಸಿದರು. ಈ ಶಸ್ತ್ರಚಿಕಿತ್ಸೆ ಅತ್ಯಂತ ಸೂಕ್ಷ್ಮವಾದ ಕಾರ್ಯವಿಧಾನವಾಗಿದ್ದು, ಭುಜದ ನಡು ನರಗಳನ್ನು ಪುನರ್ಜೋಡಿಸುವಲ್ಲಿ ಯಶಸ್ವಿಯಾಯಿತು.
ಇದಕ್ಕು ಮೇಲೆ ಅರ್ಥೋಪೆಡಿಕ್ ಸರ್ಜನ್ ಡಾ. ಕೃಷ್ಣಕುಮಾರ್ ಅವರ ಸಹಕಾರದಿಂದ ಭುಜದ ಕೊಲ್ಲೇಬೋನು ಮುರಿತಕ್ಕೂ ಶಸ್ತ್ರಚಿಕಿತ್ಸೆ ನಡೆಯಿತು.
ಇಂದು, ದೇಬ್ ರಂಜನ್ ಸಂಪೂರ್ಣವಾಗಿ ಆರೋಗ್ಯ ಲಾಭಿಸಿ, ಯಾವ ಸಮಸ್ಯೆಯೂ ಇಲ್ಲದೆ ದೈನಂದಿನ ಜೀವನಕ್ಕೆ ಮರಳಿದ್ದಾರೆ. “ರೋಗಿಯ ಆರೋಗ್ಯದಲ್ಲಿ ಬಂದ ಸುಧಾರಣೆಯಿಂದ ನಾವು ಸಂತೋಷಪಡುವೆವು. ಇಂತಹ ಯಶಸ್ಸುಗಳು ನಮ್ಮ ತಂಡದ ಕಾರ್ಯಪಟುತ್ವದ ಪ್ರತಿಬಿಂಬವಾಗಿವೆ ಎಂದು ಡಾ. ಸುರೇಶ್ ಕೆ ಹೇಳಿದರು.
ಬಾಂಗ್ಲಾ......... ಒಂದು ಎಚ್ಚರಿಕೆಯ ಪಾಠ......... ಬಾಂಗ್ಲಾದೇಶದ ಅಮಾನವೀಯವಾದ ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸುತ್ತಾ, ನಮ್ಮ ಜವಾಬ್ದಾರಿ ನೆನಪಿಸುತ್ತಾ...... ಬಾಂಗ್ಲಾದೇಶದಲ್ಲಿ…
ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಹಲವರಿಗೆ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿ ಗೇಟ್ ಬಳಿ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…
ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…
ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…
ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…