ಬೆಂಗಳೂರು, ವೈಟ್ಫೀಲ್ಡ್: ಬೈಕ್ ಅಪಘಾತದಲ್ಲಿ ಭಾರೀ ಗಾಯಗೊಂಡು, ಕೈ ಹಾಗೂ ಭುಜ ಭಾಗ ಸಂಪೂರ್ಣವಾಗಿ ಸ್ವಾಧೀನ ಕಳೆದುಕೊಂಡ ಸ್ಥಿತಿಗೆ ತಲುಪಿದ್ದ 23 ವರ್ಷದ ದೇಬ್ ರಂಜನ್ ಎಂಬ ಯುವಕನಿಗೆ, ಮೆಡಿಕವರ್ ಆಸ್ಪತ್ರೆಯಲ್ಲಿ ನಡೆದ ಅಪರೂಪದ ಹಾಗೂ ಯಶಸ್ವಿ ಶಸ್ತ್ರಚಿಕಿತ್ಸೆಯು ನವಜೀವನ ನೀಡಿದೆ.
ಕೊಲ್ಕತ್ತ ಮೂಲದ ದೇಬ್ ರಂಜನ್ ಬೈಕ್ನಿಂದ ಬಿದ್ದು ಭುಜ ಮತ್ತು ಕತ್ತಿನ ನರಗಳು ಸಂಪೂರ್ಣವಾಗಿ ತೀವ್ರವಾಗಿ ಕೆಲಸ ಮಾಡೋಕೆ ಆಗದ ಸ್ಥಿತಿಯಲ್ಲಿತ್ತು. ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರೂ ಫಲಿತಾಂಶ ಇಲ್ಲದ ಕಾರಣ, ಅವರು ಬೆಂಗಳೂರಿನ ಮೆಡಿಕವರ್ ಆಸ್ಪತ್ರೆಯ ಪ್ಲಾಸ್ಟಿಕ್ ಸರ್ಜನ್ ಡಾ. ಸುರೇಶ್ ಕೆ ಅವರನ್ನು ಸಂಪರ್ಕಿಸಿದರು.
ಸಂದರ್ಶನ ಮತ್ತು ಸ್ಕ್ಯಾನ್ ಪರೀಕ್ಷೆಗಳಿಂದ ಭುಜದ ಹಾಗೂ ಕತ್ತಿನ ಬ್ರಾಚಿಯಲ್ ಪ್ಲೆಕ್ಸಸ್ ನರಗಳು ಸಂಪೂರ್ಣವಾಗಿ ಕಟ್ ಆಗಿರುವುದು ಪತ್ತೆಯಾಯಿತು. ತಕ್ಷಣವೇ ಡಾ. ಸುರೇಶ್ ಅವರು ಸೂಪರ್ ಮೈಕ್ರೋ ಶಸ್ತ್ರಚಿಕಿತ್ಸೆ ನಡೆಸಿದರು. ಈ ಶಸ್ತ್ರಚಿಕಿತ್ಸೆ ಅತ್ಯಂತ ಸೂಕ್ಷ್ಮವಾದ ಕಾರ್ಯವಿಧಾನವಾಗಿದ್ದು, ಭುಜದ ನಡು ನರಗಳನ್ನು ಪುನರ್ಜೋಡಿಸುವಲ್ಲಿ ಯಶಸ್ವಿಯಾಯಿತು.
ಇದಕ್ಕು ಮೇಲೆ ಅರ್ಥೋಪೆಡಿಕ್ ಸರ್ಜನ್ ಡಾ. ಕೃಷ್ಣಕುಮಾರ್ ಅವರ ಸಹಕಾರದಿಂದ ಭುಜದ ಕೊಲ್ಲೇಬೋನು ಮುರಿತಕ್ಕೂ ಶಸ್ತ್ರಚಿಕಿತ್ಸೆ ನಡೆಯಿತು.
ಇಂದು, ದೇಬ್ ರಂಜನ್ ಸಂಪೂರ್ಣವಾಗಿ ಆರೋಗ್ಯ ಲಾಭಿಸಿ, ಯಾವ ಸಮಸ್ಯೆಯೂ ಇಲ್ಲದೆ ದೈನಂದಿನ ಜೀವನಕ್ಕೆ ಮರಳಿದ್ದಾರೆ. “ರೋಗಿಯ ಆರೋಗ್ಯದಲ್ಲಿ ಬಂದ ಸುಧಾರಣೆಯಿಂದ ನಾವು ಸಂತೋಷಪಡುವೆವು. ಇಂತಹ ಯಶಸ್ಸುಗಳು ನಮ್ಮ ತಂಡದ ಕಾರ್ಯಪಟುತ್ವದ ಪ್ರತಿಬಿಂಬವಾಗಿವೆ ಎಂದು ಡಾ. ಸುರೇಶ್ ಕೆ ಹೇಳಿದರು.
ಜೀವನ ಕೆಲವೊಮ್ಮೆ ಕ್ಷಣಾರ್ಧದಲ್ಲಿ ಬದಲಾಗುತ್ತದೆ. ಒಂದು ಕ್ಷಣದಲ್ಲಿ ಎಲ್ಲವೂ ಸಹಜವಾಗಿರುತ್ತದೆ, ಮುಂದಿನ ಕ್ಷಣದಲ್ಲಿ ಅನಿಶ್ಚಿತತೆ ಆವರಿಸುತ್ತದೆ. ಅಪಘಾತಗಳು ಯಾವುದೇ ಮುನ್ನೆಚ್ಚರಿಕೆ…
ಇಂದು ಮಧ್ಯಾಹ್ನ 12ಕ್ಕೆ 2026 SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ ಮಾಡಲಾಗಿದೆ. 7 ಲಕ್ಷದ 24 ಸಾವಿರದ 794 ವಿದ್ಯಾರ್ಥಿಗಳು…
ಇಲ್ಲೋರ್ವ ಪಾಪಿ ತಾಯಿ ನವಜಾತ ಶಿಶುವನ್ನು ಕತ್ತು ಕೊಯ್ದು ಟಾಯ್ಲೆಟ್ ಗೆ ಎಸೆದು ಅಮಾನವೀಯತೆ ಮೆರೆದಿರುವ ಘಟನೆ ದೇವನಹಳ್ಳಿ ತಾಲ್ಲೂಕಿನ…
Blackjack is one of the most prominent gambling enterprise video games on the planet. It's…
Ставки на спорт UA: советы и стратегии для успеха Ставки на спорт в Украине: основы…
ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿಯಾಗಿದ್ದ ಎನ್ ದುರ್ಗಶ್ರೀ ಅವರನ್ನು ಇಂದು ವರ್ಗಾವಣೆ ಮಾಡಲಾಗಿತ್ತು. ಇವರ ಜಾಗಕ್ಕೆ ಮಂಜುನಾಥ್ ಟಿ.ಆರ್ ಅವರನ್ನು ನೇಮಕ ಮಾಡಿ…