ಯುವಕನಿಗೆ ಅಪಘಾತ, ಗಂಭೀರ ಗಾಯ: ಮೆಡಿಕವರ್ ಆಸ್ಪತ್ರೆಯ ಸೂಪರ್ ಮೈಕ್ರೋ ಶಸ್ತ್ರಚಿಕಿತ್ಸೆ

ಬೆಂಗಳೂರು, ವೈಟ್‌ಫೀಲ್ಡ್‌: ಬೈಕ್ ಅಪಘಾತದಲ್ಲಿ ಭಾರೀ ಗಾಯಗೊಂಡು, ಕೈ ಹಾಗೂ ಭುಜ ಭಾಗ ಸಂಪೂರ್ಣವಾಗಿ ಸ್ವಾಧೀನ ಕಳೆದುಕೊಂಡ ಸ್ಥಿತಿಗೆ ತಲುಪಿದ್ದ 23 ವರ್ಷದ ದೇಬ್‌ ರಂಜನ್‌ ಎಂಬ ಯುವಕನಿಗೆ, ಮೆಡಿಕವರ್ ಆಸ್ಪತ್ರೆಯಲ್ಲಿ ನಡೆದ ಅಪರೂಪದ ಹಾಗೂ ಯಶಸ್ವಿ ಶಸ್ತ್ರಚಿಕಿತ್ಸೆಯು ನವಜೀವನ ನೀಡಿದೆ.

ಕೊಲ್ಕತ್ತ ಮೂಲದ ದೇಬ್‌ ರಂಜನ್‌ ಬೈಕ್‌ನಿಂದ ಬಿದ್ದು ಭುಜ ಮತ್ತು ಕತ್ತಿನ ನರಗಳು ಸಂಪೂರ್ಣವಾಗಿ ತೀವ್ರವಾಗಿ ಕೆಲಸ ಮಾಡೋಕೆ ಆಗದ ಸ್ಥಿತಿಯಲ್ಲಿತ್ತು. ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರೂ ಫಲಿತಾಂಶ ಇಲ್ಲದ ಕಾರಣ, ಅವರು ಬೆಂಗಳೂರಿನ ಮೆಡಿಕವರ್ ಆಸ್ಪತ್ರೆಯ ಪ್ಲಾಸ್ಟಿಕ್ ಸರ್ಜನ್ ಡಾ. ಸುರೇಶ್ ಕೆ ಅವರನ್ನು ಸಂಪರ್ಕಿಸಿದರು.

ಸಂದರ್ಶನ ಮತ್ತು ಸ್ಕ್ಯಾನ್ ಪರೀಕ್ಷೆಗಳಿಂದ ಭುಜದ ಹಾಗೂ ಕತ್ತಿನ ಬ್ರಾಚಿಯಲ್ ಪ್ಲೆಕ್ಸಸ್ ನರಗಳು ಸಂಪೂರ್ಣವಾಗಿ ಕಟ್ ಆಗಿರುವುದು ಪತ್ತೆಯಾಯಿತು. ತಕ್ಷಣವೇ ಡಾ. ಸುರೇಶ್ ಅವರು ಸೂಪರ್ ಮೈಕ್ರೋ ಶಸ್ತ್ರಚಿಕಿತ್ಸೆ ನಡೆಸಿದರು. ಈ ಶಸ್ತ್ರಚಿಕಿತ್ಸೆ ಅತ್ಯಂತ ಸೂಕ್ಷ್ಮವಾದ ಕಾರ್ಯವಿಧಾನವಾಗಿದ್ದು, ಭುಜದ ನಡು ನರಗಳನ್ನು ಪುನರ್‌ಜೋಡಿಸುವಲ್ಲಿ ಯಶಸ್ವಿಯಾಯಿತು.

ಇದಕ್ಕು ಮೇಲೆ ಅರ್ಥೋಪೆಡಿಕ್ ಸರ್ಜನ್ ಡಾ. ಕೃಷ್ಣಕುಮಾರ್ ಅವರ ಸಹಕಾರದಿಂದ ಭುಜದ ಕೊಲ್ಲೇಬೋನು ಮುರಿತಕ್ಕೂ ಶಸ್ತ್ರಚಿಕಿತ್ಸೆ ನಡೆಯಿತು.

ಇಂದು, ದೇಬ್‌ ರಂಜನ್ ಸಂಪೂರ್ಣವಾಗಿ ಆರೋಗ್ಯ ಲಾಭಿಸಿ, ಯಾವ ಸಮಸ್ಯೆಯೂ ಇಲ್ಲದೆ ದೈನಂದಿನ ಜೀವನಕ್ಕೆ ಮರಳಿದ್ದಾರೆ. “ರೋಗಿಯ ಆರೋಗ್ಯದಲ್ಲಿ ಬಂದ ಸುಧಾರಣೆಯಿಂದ ನಾವು ಸಂತೋಷಪಡುವೆವು. ಇಂತಹ ಯಶಸ್ಸುಗಳು ನಮ್ಮ ತಂಡದ ಕಾರ್ಯಪಟುತ್ವದ ಪ್ರತಿಬಿಂಬವಾಗಿವೆ ಎಂದು ಡಾ. ಸುರೇಶ್ ಕೆ ಹೇಳಿದರು.

Ramesh Babu

Journalist

Recent Posts

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

4 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

2 days ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

2 days ago