ಮುಂಬೈನ ವಸಾಯಿಯ ಚಿಂಚ್ಪಾಡಾದಲ್ಲಿ ವ್ಯಕ್ತಿಯೊಬ್ಬ ತನ್ನ ಗೆಳತಿಯನ್ನು ಹಾಡಹಗಲೇ ನಡು ರಸ್ತೆಯಲ್ಲಿ ಕಬ್ಬಿಣದ ಸಲಾಕೆ (ವ್ರೆಂಚ್)ಯಿಂದ ತಲೆಗೆ 15 ಬಾರಿ ಹೊಡೆದು ಬರ್ಬರವಾಗಿ ಹತ್ಯೆಗೈದಿದ್ದಾನೆ.
ಕಬ್ಬಿಣದ ಸಲಾಕೆಯಿಂದ ಪ್ರೇಯಸಿಗೆ 15 ಬಾರಿ ಹೊಡೆದು ಹತ್ಯೆ ಮಾಡಿರುವ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ವೀಡಿಯೋದಲ್ಲಿರುವ ವ್ಯಕ್ತಿ ಸ್ಪ್ಯಾನರ್ನಿಂದ ಆಕೆಯ ತಲೆಗೆ ಹೊಡೆಯುವುದನ್ನು ಮುಂದುವರಿಸಿದಾಗ, “ಕ್ಯುನ್ ಕಿಯಾ ಐಸಾ ಮೇರೆ ಸಾಥ್ (ನನಗೆ ಯಾಕೆ ಹೀಗೆ ಮಾಡಿದ್ದೀರಿ)” ಎಂದು ಹೇಳುವುದು ಕೇಳಿಸಿತು.
ಆಕೆ ಪ್ರಜ್ಞೆ ಇಲ್ಲದೆ ಅಲ್ಲೇ ಬಿದ್ದಿದ್ದಳು, ಇಬ್ಬರ ಗುರುತು ಇನ್ನೂ ಸಿಕ್ಕಿ ಪತ್ತೆಯಾಗಿಲ್ಲ. ಈ ಘಟನೆಯನ್ನು ರಸ್ತೆಯಲ್ಲಿ ಹೋಗುವವವರು ವಿಡಿಯೋ ಮಾಡಿದ್ದಾರೆ.
ಯಾರೂ ಕೂಡ ಭಯದಿಂದ ಆಕೆಯ ರಕ್ಷಣೆಗೆ ಬರಲಿಲ್ಲ, ರಕ್ತದ ಮಡುವಿನಲ್ಲಿ ಆಕೆ ನಿತ್ರಾಣಳಾಗಿ ಬಿದ್ದು, ಸ್ಥಳದಲ್ಲೇ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ರೋಹಿತ್ ಯಾದವ್ ಮತ್ತು ಆರತಿ ಕೆಲವು ದಿನಗಳ ಹಿಂದೆ ದೂರವಾಗಿದ್ದರು. ಆರತಿ ಬೇರೊಬ್ಬನನ್ನು ನೋಡಲಾರಂಭಿಸಿದ್ದಾಳೆ ಎಂದು ಶಂಕಿಸಿದ ರೋಹಿತ್ ಕೋಪದ ಭರದಲ್ಲಿ ಆಕೆಯನ್ನು ಕೊಂದಿದ್ದಾನೆ ಎನ್ನಲಾಗಿದೆ.
ವಲೀವ್ ಪೊಲೀಸರು ಕೊಲೆ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ, ಆರೋಪಿಯನ್ನು ಬಂಧಿಸಿದ್ದಾರೆ ಮತ್ತು ಪ್ರಸ್ತುತ ಘಟನೆಯ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…
ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…
ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ಸ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಅದ್ಭುತವಾದ…
ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಎಲ್ಲಾ ಬಜೆಟ್ ಗಳ ಪೈಕಿ 2026-27ರ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ. ಈ ಬಜೆಟ್ ನಲ್ಲಿ ಹೊಸ…
ಬಳ್ಳಾರಿ ನಗರದ "ಗುರುಕುಲ ವಸತಿ ಶಾಲೆ"ಯಲ್ಲಿ ಶನಿವಾರ ರಾತ್ರಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್, ಚಾಕುವಿನಿಂದ…
ನಟಿ ತ್ರಿಷಾ ಜತೆ ಅಫೇರ್ ಆರೋಪ, ಹೆಂಡ್ತಿ ಡಿವೋರ್ಸ್ ಗೆ ಅರ್ಜಿ ವಿಚಾರ, ವಿಪಕ್ಷಗಳ ಟೀಕಾ ಪ್ರಹಾರ, ಸೋಷಿಯಲ್ ಮೀಡಿಯಾದಲ್ಲಿ…