ಮುಂಬೈನ ವಸಾಯಿಯ ಚಿಂಚ್ಪಾಡಾದಲ್ಲಿ ವ್ಯಕ್ತಿಯೊಬ್ಬ ತನ್ನ ಗೆಳತಿಯನ್ನು ಹಾಡಹಗಲೇ ನಡು ರಸ್ತೆಯಲ್ಲಿ ಕಬ್ಬಿಣದ ಸಲಾಕೆ (ವ್ರೆಂಚ್)ಯಿಂದ ತಲೆಗೆ 15 ಬಾರಿ ಹೊಡೆದು ಬರ್ಬರವಾಗಿ ಹತ್ಯೆಗೈದಿದ್ದಾನೆ.
ಕಬ್ಬಿಣದ ಸಲಾಕೆಯಿಂದ ಪ್ರೇಯಸಿಗೆ 15 ಬಾರಿ ಹೊಡೆದು ಹತ್ಯೆ ಮಾಡಿರುವ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ವೀಡಿಯೋದಲ್ಲಿರುವ ವ್ಯಕ್ತಿ ಸ್ಪ್ಯಾನರ್ನಿಂದ ಆಕೆಯ ತಲೆಗೆ ಹೊಡೆಯುವುದನ್ನು ಮುಂದುವರಿಸಿದಾಗ, “ಕ್ಯುನ್ ಕಿಯಾ ಐಸಾ ಮೇರೆ ಸಾಥ್ (ನನಗೆ ಯಾಕೆ ಹೀಗೆ ಮಾಡಿದ್ದೀರಿ)” ಎಂದು ಹೇಳುವುದು ಕೇಳಿಸಿತು.
ಆಕೆ ಪ್ರಜ್ಞೆ ಇಲ್ಲದೆ ಅಲ್ಲೇ ಬಿದ್ದಿದ್ದಳು, ಇಬ್ಬರ ಗುರುತು ಇನ್ನೂ ಸಿಕ್ಕಿ ಪತ್ತೆಯಾಗಿಲ್ಲ. ಈ ಘಟನೆಯನ್ನು ರಸ್ತೆಯಲ್ಲಿ ಹೋಗುವವವರು ವಿಡಿಯೋ ಮಾಡಿದ್ದಾರೆ.
ಯಾರೂ ಕೂಡ ಭಯದಿಂದ ಆಕೆಯ ರಕ್ಷಣೆಗೆ ಬರಲಿಲ್ಲ, ರಕ್ತದ ಮಡುವಿನಲ್ಲಿ ಆಕೆ ನಿತ್ರಾಣಳಾಗಿ ಬಿದ್ದು, ಸ್ಥಳದಲ್ಲೇ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ರೋಹಿತ್ ಯಾದವ್ ಮತ್ತು ಆರತಿ ಕೆಲವು ದಿನಗಳ ಹಿಂದೆ ದೂರವಾಗಿದ್ದರು. ಆರತಿ ಬೇರೊಬ್ಬನನ್ನು ನೋಡಲಾರಂಭಿಸಿದ್ದಾಳೆ ಎಂದು ಶಂಕಿಸಿದ ರೋಹಿತ್ ಕೋಪದ ಭರದಲ್ಲಿ ಆಕೆಯನ್ನು ಕೊಂದಿದ್ದಾನೆ ಎನ್ನಲಾಗಿದೆ.
ವಲೀವ್ ಪೊಲೀಸರು ಕೊಲೆ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ, ಆರೋಪಿಯನ್ನು ಬಂಧಿಸಿದ್ದಾರೆ ಮತ್ತು ಪ್ರಸ್ತುತ ಘಟನೆಯ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ರಾತ್ರಿ 8 - 30 ರ ಸಮಯ....... ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನಿನ್ನೆ ರಾತ್ರಿ 8.30 ರ…
ಬೆಂಗಳೂರು ಗ್ರಾಮಾಂತರ ಜಿ.ಪಂ ನೂತನ ಸಿ.ಇ.ಒ ಆಗಿ ಡಾ.ವಸಂತಿ ಅಮರ್ ಬಿ.ವಿ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ.
ದೊಡ್ಡಬಳ್ಳಾಪುರ ನಗರದಲ್ಲಿ ಏ.19 ರಂದು 66/11ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರಹೊಮ್ಮುವ F02-Raghunathapura, F07-Locall, F14-Scoutcamp & F21-KVN…
ಏಪ್ರಿಲ್ 20 ರಂದು ಬಸವ ಜಯಂತಿ ಮತ್ತು ಅಕ್ಷಯ ತೃತೀಯ ಹಿನ್ನೆಲೆಯಲ್ಲಿ ಬಾಲ್ಯವಿವಾಹಗಳು ಆಗುವ ಸಾಧ್ಯತೆ ಇದ್ದು, ಬಾಲ್ಯ ವಿವಾಹಗಳನ್ನು…
ಬಿಲ್ ಕಲೆಕ್ಟರ್ ಲೋಕಾ ಬಲೆಗೆ ಬಿದ್ದಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.. ಲೋಕಾ ಬಲೆಗೆ ಬಿದ್ದ ಬಿಲ್ ಕಲೆಕ್ಟರ್ 'ಇ' ಖಾತೆ…
ಟ್ರ್ಯಾಕ್ಟರ್ ಗೆ ಹಿಂಬದಿಯಿಂದ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್ ಚಾಲಕ ಸಾವನ್ನಪ್ಪಿರುವ ಘಟನೆ ದಾಬಸ್ ಪೇಟೆ - ಹೊಸಕೋಟೆ…