ಮುಂಬೈನ ವಸಾಯಿಯ ಚಿಂಚ್ಪಾಡಾದಲ್ಲಿ ವ್ಯಕ್ತಿಯೊಬ್ಬ ತನ್ನ ಗೆಳತಿಯನ್ನು ಹಾಡಹಗಲೇ ನಡು ರಸ್ತೆಯಲ್ಲಿ ಕಬ್ಬಿಣದ ಸಲಾಕೆ (ವ್ರೆಂಚ್)ಯಿಂದ ತಲೆಗೆ 15 ಬಾರಿ ಹೊಡೆದು ಬರ್ಬರವಾಗಿ ಹತ್ಯೆಗೈದಿದ್ದಾನೆ.
ಕಬ್ಬಿಣದ ಸಲಾಕೆಯಿಂದ ಪ್ರೇಯಸಿಗೆ 15 ಬಾರಿ ಹೊಡೆದು ಹತ್ಯೆ ಮಾಡಿರುವ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ವೀಡಿಯೋದಲ್ಲಿರುವ ವ್ಯಕ್ತಿ ಸ್ಪ್ಯಾನರ್ನಿಂದ ಆಕೆಯ ತಲೆಗೆ ಹೊಡೆಯುವುದನ್ನು ಮುಂದುವರಿಸಿದಾಗ, “ಕ್ಯುನ್ ಕಿಯಾ ಐಸಾ ಮೇರೆ ಸಾಥ್ (ನನಗೆ ಯಾಕೆ ಹೀಗೆ ಮಾಡಿದ್ದೀರಿ)” ಎಂದು ಹೇಳುವುದು ಕೇಳಿಸಿತು.
ಆಕೆ ಪ್ರಜ್ಞೆ ಇಲ್ಲದೆ ಅಲ್ಲೇ ಬಿದ್ದಿದ್ದಳು, ಇಬ್ಬರ ಗುರುತು ಇನ್ನೂ ಸಿಕ್ಕಿ ಪತ್ತೆಯಾಗಿಲ್ಲ. ಈ ಘಟನೆಯನ್ನು ರಸ್ತೆಯಲ್ಲಿ ಹೋಗುವವವರು ವಿಡಿಯೋ ಮಾಡಿದ್ದಾರೆ.
ಯಾರೂ ಕೂಡ ಭಯದಿಂದ ಆಕೆಯ ರಕ್ಷಣೆಗೆ ಬರಲಿಲ್ಲ, ರಕ್ತದ ಮಡುವಿನಲ್ಲಿ ಆಕೆ ನಿತ್ರಾಣಳಾಗಿ ಬಿದ್ದು, ಸ್ಥಳದಲ್ಲೇ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ರೋಹಿತ್ ಯಾದವ್ ಮತ್ತು ಆರತಿ ಕೆಲವು ದಿನಗಳ ಹಿಂದೆ ದೂರವಾಗಿದ್ದರು. ಆರತಿ ಬೇರೊಬ್ಬನನ್ನು ನೋಡಲಾರಂಭಿಸಿದ್ದಾಳೆ ಎಂದು ಶಂಕಿಸಿದ ರೋಹಿತ್ ಕೋಪದ ಭರದಲ್ಲಿ ಆಕೆಯನ್ನು ಕೊಂದಿದ್ದಾನೆ ಎನ್ನಲಾಗಿದೆ.
ವಲೀವ್ ಪೊಲೀಸರು ಕೊಲೆ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ, ಆರೋಪಿಯನ್ನು ಬಂಧಿಸಿದ್ದಾರೆ ಮತ್ತು ಪ್ರಸ್ತುತ ಘಟನೆಯ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…