ಮುಂಬೈನ ವಸಾಯಿಯ ಚಿಂಚ್ಪಾಡಾದಲ್ಲಿ ವ್ಯಕ್ತಿಯೊಬ್ಬ ತನ್ನ ಗೆಳತಿಯನ್ನು ಹಾಡಹಗಲೇ ನಡು ರಸ್ತೆಯಲ್ಲಿ ಕಬ್ಬಿಣದ ಸಲಾಕೆ (ವ್ರೆಂಚ್)ಯಿಂದ ತಲೆಗೆ 15 ಬಾರಿ ಹೊಡೆದು ಬರ್ಬರವಾಗಿ ಹತ್ಯೆಗೈದಿದ್ದಾನೆ.
ಕಬ್ಬಿಣದ ಸಲಾಕೆಯಿಂದ ಪ್ರೇಯಸಿಗೆ 15 ಬಾರಿ ಹೊಡೆದು ಹತ್ಯೆ ಮಾಡಿರುವ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ವೀಡಿಯೋದಲ್ಲಿರುವ ವ್ಯಕ್ತಿ ಸ್ಪ್ಯಾನರ್ನಿಂದ ಆಕೆಯ ತಲೆಗೆ ಹೊಡೆಯುವುದನ್ನು ಮುಂದುವರಿಸಿದಾಗ, “ಕ್ಯುನ್ ಕಿಯಾ ಐಸಾ ಮೇರೆ ಸಾಥ್ (ನನಗೆ ಯಾಕೆ ಹೀಗೆ ಮಾಡಿದ್ದೀರಿ)” ಎಂದು ಹೇಳುವುದು ಕೇಳಿಸಿತು.
ಆಕೆ ಪ್ರಜ್ಞೆ ಇಲ್ಲದೆ ಅಲ್ಲೇ ಬಿದ್ದಿದ್ದಳು, ಇಬ್ಬರ ಗುರುತು ಇನ್ನೂ ಸಿಕ್ಕಿ ಪತ್ತೆಯಾಗಿಲ್ಲ. ಈ ಘಟನೆಯನ್ನು ರಸ್ತೆಯಲ್ಲಿ ಹೋಗುವವವರು ವಿಡಿಯೋ ಮಾಡಿದ್ದಾರೆ.
ಯಾರೂ ಕೂಡ ಭಯದಿಂದ ಆಕೆಯ ರಕ್ಷಣೆಗೆ ಬರಲಿಲ್ಲ, ರಕ್ತದ ಮಡುವಿನಲ್ಲಿ ಆಕೆ ನಿತ್ರಾಣಳಾಗಿ ಬಿದ್ದು, ಸ್ಥಳದಲ್ಲೇ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ರೋಹಿತ್ ಯಾದವ್ ಮತ್ತು ಆರತಿ ಕೆಲವು ದಿನಗಳ ಹಿಂದೆ ದೂರವಾಗಿದ್ದರು. ಆರತಿ ಬೇರೊಬ್ಬನನ್ನು ನೋಡಲಾರಂಭಿಸಿದ್ದಾಳೆ ಎಂದು ಶಂಕಿಸಿದ ರೋಹಿತ್ ಕೋಪದ ಭರದಲ್ಲಿ ಆಕೆಯನ್ನು ಕೊಂದಿದ್ದಾನೆ ಎನ್ನಲಾಗಿದೆ.
ವಲೀವ್ ಪೊಲೀಸರು ಕೊಲೆ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ, ಆರೋಪಿಯನ್ನು ಬಂಧಿಸಿದ್ದಾರೆ ಮತ್ತು ಪ್ರಸ್ತುತ ಘಟನೆಯ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…