Categories: ಹಾಸನ

ಯುವಕನ ಮೇಲೆ ಫೆನ್ಸಿಂಗ್ ಕಲ್ಲು ಎತ್ತಾಕಿ ಹತ್ಯೆ: ಹತ್ಯೆ ಬಳಿಕ ಹಂತಕರು ಶವ ಮುಂದೆ ಸೆಲ್ಫಿ ವಿಡಿಯೋ ಮಾಡಿ ವಿಕೃತಿ

ಗಾಂಜಾ ಅಮಲಿನಲ್ಲಿ ಯುವಕನೋರ್ವನ ತಲೆ ಮೇಲೆ ಕೂಚ ಕಲ್ಲು ಎತ್ತು ಹಾಕಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹಾಸನ ಹೊರವಲಯದ ಬಿಟ್ಟಗೌಡನಹಳ್ಳಿ ಬಳಿ ನಡೆದಿದೆ..

ಹಾಸನ ತಾಲೂಕಿನ ಹೂವಿನಹಳ್ಳಿ ಕಾವಲು ಗ್ರಾಮದ ನಿವಾಸಿ ಮೆಕ್ಯಾನಿಕ್ ಕೀರ್ತಿ(22) ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಲಾಗಿದೆ. ಹತ್ಯೆ ಬಳಿಕ ಹಂತಕರು ಶವ ಮುಂದೆ ಸೆಲ್ಫಿ ವಿಡಿಯೋ ಮಾಡಿ ವಿಕೃತಿ ಮೆರೆದಿದ್ದಾರೆ.

ನಾವೇ ಇವನನ್ನು ಹೊಡೆದು ಕೊಂದಿದ್ದೇವೆಂದು ಶವದೊಂದಿಗೆ ಸೆಲ್ಫಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಈ ವಿಡಿಯೋ ಫುಲ್ ವೈರಲ್ ಆಗಿದೆ…

ಸದ್ಯ ವೈರಲ್ ಆದ ವಿಡಿಯೋವನ್ನು ಆಧರಿಸಿ ಸ್ಥಳಕ್ಕೆ ಶ್ವಾನದಳ, ಎ‌ಎಸ್‌ಪಿ ಭೇಟಿ ಪರಿಶೀಲನೆ ನಡೆಸಿದ್ದು, ಹಂತಕರ ಬಂಧನಕ್ಕೆ ಬಲೆ ಬೀಸಿದ್ದಾರೆ.

ಆತ ವೃತ್ತಿಯಲ್ಲಿ ವ್ಯಕ್ಯಾನಿಕ್ ಆಗಿದ್ದ. ಕೆಲಸ ಮಾಡುತ್ತಾ ತನ್ನ ಪಾಡಿಗೆ ತಾನಿದ್ದವನು. ರೀಲ್ಸ್ ಮಾಡುತ್ತಾ ಸ್ನೇಹಿತರ ಜೊತೆ ಸುತ್ತಾಡ್ತಾ ಇದ್ದವನು ನಿನ್ನೆ (ಡಿಸೆಂಬರ್ 08) ಎಷ್ಟೊತ್ತಾದ್ರು ಮನೆಗೆ ಬಂದಿಲ್ಲ ಏನಾಯ್ತು ಎಂದು ಎಲ್ಲರೂ ಆತಂಕದಲ್ಲಿರುವಾಗ ಬೆಳಿಗ್ಗೆ ವೀಡಿಯೋ ವೊಂದು ವೈರಲ್ ಆಗಿದೆ. ಕ್ರೂರಿಯೊಬ್ಬ ಶವದ ಮುಂದೆ ಸೆಲ್ಪೀ ವೀಡಿಯೋ ಮಾಡಿ ನಾವು ಕೊಲೆ ಮಾಡಿದಿವಿ ಸಾಯಿಸಿದ್ದೇವೆ ಎಂದು ಹೇಳುತ್ತ ಕ್ರೌರ್ಯ ಮೆರೆದಿದ್ದಾನೆ.

ಈ ವೀಡಿಯೋ ಜಾಡು ಹಿಡಿದು ತನಿಖೆಗಿಳಿದ ಪೊಲೀಸರಿಗೆ ಕೊಲೆಯಾಗಿದ್ದು ಓರ್ವ ಮೆಕ್ಯಾನಿಕ್. ಕೊಲೆ ಮಾಡಿದ್ದು ಆಟೋ ಚಾಲಕ ಎನ್ನುವುದು ಗೊತ್ತಾಗಿದೆ. ಒಟ್ಟಿಗೆ ಹೋಗಿ ಪಾರ್ಟಿ ಮಾಡಿ ಹಲ್ಲೆ ಮಾಡಿ ಹತ್ಯೆಗೈದಿದ್ದಾರೆ.

ಕೊಲೆ ಮಾಡಿದ ಬಳಿಕ ಮನುಷ್ಯತ್ವ ಮರೆತ ಕ್ರೂರಿಯೊಬ್ಬ ನಾವು ಹೊಡೆದಿದ್ದೇವೆ. ನಾವು ಇವನನ್ನ ಸಾಯಿಸಿದ್ದೇವೆ ಎಂದು ವಿಕೃತ ಆನಂದಪಟ್ಟಿದ್ದಾರೆ. ಇನ್ನು ಮತ್ತೊಂದು ವೀಡಿಯೋದಲ್ಲಿ ಹೇಯ್ ನಿಂತ್ಕೊಳ್ರೋ ನಾವು ದೊಡ್ಡದಾಗಿ ಬೆಳೆದು, ನಾವೂ ದೊಡ್ಡವರಾದ್ವಿ ಎಂದು ಹೇಳುತ್ತಾ ಕೊಲೆಯನ್ನ ಸಂಭ್ರಮಿಸಿದ್ದಾರೆ. ಕೊಲೆ ಮಾಡಿ ನಾವು ದೊಡ್ಡವರಾದ್ವಿ ನಾವೂ ಬೆಳೆದ್ವಿ ಎಂದು ಹೇಳುತ್ತಾ ಅಟ್ಟಹಾಸ ಮೆರೆದಿದ್ದಾರೆ. ಗಾಂಜಾ ಅಮಲಿನಲ್ಲಿ ಪುಂಡರ ರಾಕ್ಷಸೀ ಕೃತ್ಯ ಎಸಗಿದ್ದಾರೆ. ಹೀಗಾಗಿ ಈ ಹತ್ಯೆ ವಿಡಿಯೋ ಹಾಸನದಾದ್ಯಂತ ವೈರಲ್ ಆಗಿದ್ದು, ಜನರನ್ನ ಬೆಚ್ಚಿಬೀಳೀಸಿದೆ.

ಅಷ್ಟಕ್ಕೂ ವೀಡಿಯೋ ಮಾಡಿರುವುದು ಉಲ್ಲಾಸ್ ಎಂದು ತಿಳಿದುಬಂದಿದೆ. ಆಟೋ ಚಾಲಕನಾಗಿರುವ ಈತ ಹಾಸನ ಜಿಲ್ಲೆ ಆಲೂರು ಮೂಲದವನು ಎನ್ನುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಉಲ್ಲಾಸ್ ಹಾಗು ಕೀರ್ತಿ ಎಲ್ಲರೂ ಪರಿಚಿತರಾಗಿದ್ದು, ನಿನ್ನೆ ಕೂಡ ಒಟ್ಟಿಗೆ ಇದ್ದವರು ಒಟ್ಟಿಗೆ ಪಾರ್ಟಿ ಮಾಡಿದ್ದಾರೆ. ಆದ್ರೆ ಬಳಿಕ ಏನಾಯ್ತೋ ಏನೋ ಜೊತೆಗೆ ಬಂಧವನನ್ನ ಬಡಿದು ಕೊಂದು ಶವದ ಎದುರು ವೀಡಿಯೋ ಮಾಡಿದ್ದಾರೆ. ಕೊಲೆ ಮಾಡಿ ವೀಡಿಯೋ ಮಾಡಿರುವ ಪಾತಕಿ ಉಲ್ಲಾಸ್ ಒಂದು ವೀಡಿಯೋದಲ್ಲಿ ತಾನೊಬ್ಬನೇ ಇದ್ದರೆ ಇನ್ನೊಂದು ವೀಡಿಯೋದಲ್ಲಿ ಮತ್ತಿಬ್ಬರು ಇರೋದನ್ನ ತೋರಿಸಿದ್ದಾನೆ. ಜೊತೆಗೇ ತೆರಳಿದ್ದ ಯುವಕರ ಗುಂಪಿನ ನಡುವೆ ಗಲಾಟೆ ನಡೆದು ಕೊಲೆ ಆಗಿರುವ ಶಂಕೆ ವ್ಯಕ್ತವಾಗಿದ್ದು, ಹಾಸನ ನಗರ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಕೊಲೆಯ ಸೆಲ್ಫಿ ವೀಡಿಯೋ ವೈರಲ್ ಆಗುತ್ತಲೆ ಅಲರ್ಟ್ ಆದ ಪೊಲೀಸರು ವೀಡಿಯೋ ಜಾಡು ಹಿಡಿದು ಪರಿಶೀಲನೆ ನಡಸಿದಾಗ ಶವ ಬಿಟ್ಟಗೌಡನಹಳ್ಳಿ ಬಳಿ ಇರುವುದು ಗೊತ್ತಾಗಿದೆ. ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ ಹಿರಿಯ ಪೊಲೀಸ್ ಅದಿಕಾರಿಗಳು, ಸ್ಥಳಕ್ಕೆ ಸೂಕೊ ಟೀಂ, ಶ್ವಾನದಳ, ಬೆರಳಚ್ಚು ತಜ್ಞರನ್ನ ಕರೆಸಿ ಪರಿಶೀಲನೆ ನಡೆಸಿದ್ದಾರೆ. ಇನ್ನೊಂದೆಡೆ ಹಾಸನ ನಗರ ಠಾಣೆ ಪೊಲೀಸರು ಉಲ್ಲಾಸ್​​ ಬಂಧನಕ್ಕೆ ಬಲೆ ಬೀಸಿದ್ದಾರೆ.

Ramesh Babu

Journalist

Recent Posts

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

49 minutes ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

2 hours ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

13 hours ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

13 hours ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

13 hours ago

ಪೆಟ್ರೋಲ್ ಟ್ಯಾಂಕರ್-ಹಾಲಿನ ಟ್ಯಾಂಕರ್ ನಡುವೆ ಅಪಘಾತ: ಬೆಂಕಿಗಾಹುತಿಯಾದ ಎರಡು ಟ್ಯಾಂಕರ್ ಗಳು

ದೊಡ್ಡಬಳ್ಳಾಪುರ: ತಾಲೂಕಿನ ಮಧುರೆ ಹೋಬಳಿಯ 11ನೇ ಮೈಲಿ (ಮಲ್ಲೋಹಳ್ಳಿ ಸಮೀಪ) ಪೆಟ್ರೋಲ್ ಟ್ಯಾಂಕರ್ ಹಾಗೂ ಹಾಲಿನ ಟ್ಯಾಂಕರ್ ನಡುವೆ ಸಂಭವಿಸಿದ…

22 hours ago