Categories: ಹಾಸನ

ಯುವಕನ ಮೇಲೆ ಫೆನ್ಸಿಂಗ್ ಕಲ್ಲು ಎತ್ತಾಕಿ ಹತ್ಯೆ: ಹತ್ಯೆ ಬಳಿಕ ಹಂತಕರು ಶವ ಮುಂದೆ ಸೆಲ್ಫಿ ವಿಡಿಯೋ ಮಾಡಿ ವಿಕೃತಿ

ಗಾಂಜಾ ಅಮಲಿನಲ್ಲಿ ಯುವಕನೋರ್ವನ ತಲೆ ಮೇಲೆ ಕೂಚ ಕಲ್ಲು ಎತ್ತು ಹಾಕಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹಾಸನ ಹೊರವಲಯದ ಬಿಟ್ಟಗೌಡನಹಳ್ಳಿ ಬಳಿ ನಡೆದಿದೆ..

ಹಾಸನ ತಾಲೂಕಿನ ಹೂವಿನಹಳ್ಳಿ ಕಾವಲು ಗ್ರಾಮದ ನಿವಾಸಿ ಮೆಕ್ಯಾನಿಕ್ ಕೀರ್ತಿ(22) ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಲಾಗಿದೆ. ಹತ್ಯೆ ಬಳಿಕ ಹಂತಕರು ಶವ ಮುಂದೆ ಸೆಲ್ಫಿ ವಿಡಿಯೋ ಮಾಡಿ ವಿಕೃತಿ ಮೆರೆದಿದ್ದಾರೆ.

ನಾವೇ ಇವನನ್ನು ಹೊಡೆದು ಕೊಂದಿದ್ದೇವೆಂದು ಶವದೊಂದಿಗೆ ಸೆಲ್ಫಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಈ ವಿಡಿಯೋ ಫುಲ್ ವೈರಲ್ ಆಗಿದೆ…

ಸದ್ಯ ವೈರಲ್ ಆದ ವಿಡಿಯೋವನ್ನು ಆಧರಿಸಿ ಸ್ಥಳಕ್ಕೆ ಶ್ವಾನದಳ, ಎ‌ಎಸ್‌ಪಿ ಭೇಟಿ ಪರಿಶೀಲನೆ ನಡೆಸಿದ್ದು, ಹಂತಕರ ಬಂಧನಕ್ಕೆ ಬಲೆ ಬೀಸಿದ್ದಾರೆ.

ಆತ ವೃತ್ತಿಯಲ್ಲಿ ವ್ಯಕ್ಯಾನಿಕ್ ಆಗಿದ್ದ. ಕೆಲಸ ಮಾಡುತ್ತಾ ತನ್ನ ಪಾಡಿಗೆ ತಾನಿದ್ದವನು. ರೀಲ್ಸ್ ಮಾಡುತ್ತಾ ಸ್ನೇಹಿತರ ಜೊತೆ ಸುತ್ತಾಡ್ತಾ ಇದ್ದವನು ನಿನ್ನೆ (ಡಿಸೆಂಬರ್ 08) ಎಷ್ಟೊತ್ತಾದ್ರು ಮನೆಗೆ ಬಂದಿಲ್ಲ ಏನಾಯ್ತು ಎಂದು ಎಲ್ಲರೂ ಆತಂಕದಲ್ಲಿರುವಾಗ ಬೆಳಿಗ್ಗೆ ವೀಡಿಯೋ ವೊಂದು ವೈರಲ್ ಆಗಿದೆ. ಕ್ರೂರಿಯೊಬ್ಬ ಶವದ ಮುಂದೆ ಸೆಲ್ಪೀ ವೀಡಿಯೋ ಮಾಡಿ ನಾವು ಕೊಲೆ ಮಾಡಿದಿವಿ ಸಾಯಿಸಿದ್ದೇವೆ ಎಂದು ಹೇಳುತ್ತ ಕ್ರೌರ್ಯ ಮೆರೆದಿದ್ದಾನೆ.

ಈ ವೀಡಿಯೋ ಜಾಡು ಹಿಡಿದು ತನಿಖೆಗಿಳಿದ ಪೊಲೀಸರಿಗೆ ಕೊಲೆಯಾಗಿದ್ದು ಓರ್ವ ಮೆಕ್ಯಾನಿಕ್. ಕೊಲೆ ಮಾಡಿದ್ದು ಆಟೋ ಚಾಲಕ ಎನ್ನುವುದು ಗೊತ್ತಾಗಿದೆ. ಒಟ್ಟಿಗೆ ಹೋಗಿ ಪಾರ್ಟಿ ಮಾಡಿ ಹಲ್ಲೆ ಮಾಡಿ ಹತ್ಯೆಗೈದಿದ್ದಾರೆ.

ಕೊಲೆ ಮಾಡಿದ ಬಳಿಕ ಮನುಷ್ಯತ್ವ ಮರೆತ ಕ್ರೂರಿಯೊಬ್ಬ ನಾವು ಹೊಡೆದಿದ್ದೇವೆ. ನಾವು ಇವನನ್ನ ಸಾಯಿಸಿದ್ದೇವೆ ಎಂದು ವಿಕೃತ ಆನಂದಪಟ್ಟಿದ್ದಾರೆ. ಇನ್ನು ಮತ್ತೊಂದು ವೀಡಿಯೋದಲ್ಲಿ ಹೇಯ್ ನಿಂತ್ಕೊಳ್ರೋ ನಾವು ದೊಡ್ಡದಾಗಿ ಬೆಳೆದು, ನಾವೂ ದೊಡ್ಡವರಾದ್ವಿ ಎಂದು ಹೇಳುತ್ತಾ ಕೊಲೆಯನ್ನ ಸಂಭ್ರಮಿಸಿದ್ದಾರೆ. ಕೊಲೆ ಮಾಡಿ ನಾವು ದೊಡ್ಡವರಾದ್ವಿ ನಾವೂ ಬೆಳೆದ್ವಿ ಎಂದು ಹೇಳುತ್ತಾ ಅಟ್ಟಹಾಸ ಮೆರೆದಿದ್ದಾರೆ. ಗಾಂಜಾ ಅಮಲಿನಲ್ಲಿ ಪುಂಡರ ರಾಕ್ಷಸೀ ಕೃತ್ಯ ಎಸಗಿದ್ದಾರೆ. ಹೀಗಾಗಿ ಈ ಹತ್ಯೆ ವಿಡಿಯೋ ಹಾಸನದಾದ್ಯಂತ ವೈರಲ್ ಆಗಿದ್ದು, ಜನರನ್ನ ಬೆಚ್ಚಿಬೀಳೀಸಿದೆ.

ಅಷ್ಟಕ್ಕೂ ವೀಡಿಯೋ ಮಾಡಿರುವುದು ಉಲ್ಲಾಸ್ ಎಂದು ತಿಳಿದುಬಂದಿದೆ. ಆಟೋ ಚಾಲಕನಾಗಿರುವ ಈತ ಹಾಸನ ಜಿಲ್ಲೆ ಆಲೂರು ಮೂಲದವನು ಎನ್ನುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಉಲ್ಲಾಸ್ ಹಾಗು ಕೀರ್ತಿ ಎಲ್ಲರೂ ಪರಿಚಿತರಾಗಿದ್ದು, ನಿನ್ನೆ ಕೂಡ ಒಟ್ಟಿಗೆ ಇದ್ದವರು ಒಟ್ಟಿಗೆ ಪಾರ್ಟಿ ಮಾಡಿದ್ದಾರೆ. ಆದ್ರೆ ಬಳಿಕ ಏನಾಯ್ತೋ ಏನೋ ಜೊತೆಗೆ ಬಂಧವನನ್ನ ಬಡಿದು ಕೊಂದು ಶವದ ಎದುರು ವೀಡಿಯೋ ಮಾಡಿದ್ದಾರೆ. ಕೊಲೆ ಮಾಡಿ ವೀಡಿಯೋ ಮಾಡಿರುವ ಪಾತಕಿ ಉಲ್ಲಾಸ್ ಒಂದು ವೀಡಿಯೋದಲ್ಲಿ ತಾನೊಬ್ಬನೇ ಇದ್ದರೆ ಇನ್ನೊಂದು ವೀಡಿಯೋದಲ್ಲಿ ಮತ್ತಿಬ್ಬರು ಇರೋದನ್ನ ತೋರಿಸಿದ್ದಾನೆ. ಜೊತೆಗೇ ತೆರಳಿದ್ದ ಯುವಕರ ಗುಂಪಿನ ನಡುವೆ ಗಲಾಟೆ ನಡೆದು ಕೊಲೆ ಆಗಿರುವ ಶಂಕೆ ವ್ಯಕ್ತವಾಗಿದ್ದು, ಹಾಸನ ನಗರ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಕೊಲೆಯ ಸೆಲ್ಫಿ ವೀಡಿಯೋ ವೈರಲ್ ಆಗುತ್ತಲೆ ಅಲರ್ಟ್ ಆದ ಪೊಲೀಸರು ವೀಡಿಯೋ ಜಾಡು ಹಿಡಿದು ಪರಿಶೀಲನೆ ನಡಸಿದಾಗ ಶವ ಬಿಟ್ಟಗೌಡನಹಳ್ಳಿ ಬಳಿ ಇರುವುದು ಗೊತ್ತಾಗಿದೆ. ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ ಹಿರಿಯ ಪೊಲೀಸ್ ಅದಿಕಾರಿಗಳು, ಸ್ಥಳಕ್ಕೆ ಸೂಕೊ ಟೀಂ, ಶ್ವಾನದಳ, ಬೆರಳಚ್ಚು ತಜ್ಞರನ್ನ ಕರೆಸಿ ಪರಿಶೀಲನೆ ನಡೆಸಿದ್ದಾರೆ. ಇನ್ನೊಂದೆಡೆ ಹಾಸನ ನಗರ ಠಾಣೆ ಪೊಲೀಸರು ಉಲ್ಲಾಸ್​​ ಬಂಧನಕ್ಕೆ ಬಲೆ ಬೀಸಿದ್ದಾರೆ.

Ramesh Babu

Journalist

Recent Posts

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

31 minutes ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

2 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

7 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

9 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

12 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

1 day ago