Categories: ಹಾಸನ

ಯುವಕನ ಮೇಲೆ ಫೆನ್ಸಿಂಗ್ ಕಲ್ಲು ಎತ್ತಾಕಿ ಹತ್ಯೆ: ಹತ್ಯೆ ಬಳಿಕ ಹಂತಕರು ಶವ ಮುಂದೆ ಸೆಲ್ಫಿ ವಿಡಿಯೋ ಮಾಡಿ ವಿಕೃತಿ

ಗಾಂಜಾ ಅಮಲಿನಲ್ಲಿ ಯುವಕನೋರ್ವನ ತಲೆ ಮೇಲೆ ಕೂಚ ಕಲ್ಲು ಎತ್ತು ಹಾಕಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹಾಸನ ಹೊರವಲಯದ ಬಿಟ್ಟಗೌಡನಹಳ್ಳಿ ಬಳಿ ನಡೆದಿದೆ..

ಹಾಸನ ತಾಲೂಕಿನ ಹೂವಿನಹಳ್ಳಿ ಕಾವಲು ಗ್ರಾಮದ ನಿವಾಸಿ ಮೆಕ್ಯಾನಿಕ್ ಕೀರ್ತಿ(22) ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಲಾಗಿದೆ. ಹತ್ಯೆ ಬಳಿಕ ಹಂತಕರು ಶವ ಮುಂದೆ ಸೆಲ್ಫಿ ವಿಡಿಯೋ ಮಾಡಿ ವಿಕೃತಿ ಮೆರೆದಿದ್ದಾರೆ.

ನಾವೇ ಇವನನ್ನು ಹೊಡೆದು ಕೊಂದಿದ್ದೇವೆಂದು ಶವದೊಂದಿಗೆ ಸೆಲ್ಫಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಈ ವಿಡಿಯೋ ಫುಲ್ ವೈರಲ್ ಆಗಿದೆ…

ಸದ್ಯ ವೈರಲ್ ಆದ ವಿಡಿಯೋವನ್ನು ಆಧರಿಸಿ ಸ್ಥಳಕ್ಕೆ ಶ್ವಾನದಳ, ಎ‌ಎಸ್‌ಪಿ ಭೇಟಿ ಪರಿಶೀಲನೆ ನಡೆಸಿದ್ದು, ಹಂತಕರ ಬಂಧನಕ್ಕೆ ಬಲೆ ಬೀಸಿದ್ದಾರೆ.

ಆತ ವೃತ್ತಿಯಲ್ಲಿ ವ್ಯಕ್ಯಾನಿಕ್ ಆಗಿದ್ದ. ಕೆಲಸ ಮಾಡುತ್ತಾ ತನ್ನ ಪಾಡಿಗೆ ತಾನಿದ್ದವನು. ರೀಲ್ಸ್ ಮಾಡುತ್ತಾ ಸ್ನೇಹಿತರ ಜೊತೆ ಸುತ್ತಾಡ್ತಾ ಇದ್ದವನು ನಿನ್ನೆ (ಡಿಸೆಂಬರ್ 08) ಎಷ್ಟೊತ್ತಾದ್ರು ಮನೆಗೆ ಬಂದಿಲ್ಲ ಏನಾಯ್ತು ಎಂದು ಎಲ್ಲರೂ ಆತಂಕದಲ್ಲಿರುವಾಗ ಬೆಳಿಗ್ಗೆ ವೀಡಿಯೋ ವೊಂದು ವೈರಲ್ ಆಗಿದೆ. ಕ್ರೂರಿಯೊಬ್ಬ ಶವದ ಮುಂದೆ ಸೆಲ್ಪೀ ವೀಡಿಯೋ ಮಾಡಿ ನಾವು ಕೊಲೆ ಮಾಡಿದಿವಿ ಸಾಯಿಸಿದ್ದೇವೆ ಎಂದು ಹೇಳುತ್ತ ಕ್ರೌರ್ಯ ಮೆರೆದಿದ್ದಾನೆ.

ಈ ವೀಡಿಯೋ ಜಾಡು ಹಿಡಿದು ತನಿಖೆಗಿಳಿದ ಪೊಲೀಸರಿಗೆ ಕೊಲೆಯಾಗಿದ್ದು ಓರ್ವ ಮೆಕ್ಯಾನಿಕ್. ಕೊಲೆ ಮಾಡಿದ್ದು ಆಟೋ ಚಾಲಕ ಎನ್ನುವುದು ಗೊತ್ತಾಗಿದೆ. ಒಟ್ಟಿಗೆ ಹೋಗಿ ಪಾರ್ಟಿ ಮಾಡಿ ಹಲ್ಲೆ ಮಾಡಿ ಹತ್ಯೆಗೈದಿದ್ದಾರೆ.

ಕೊಲೆ ಮಾಡಿದ ಬಳಿಕ ಮನುಷ್ಯತ್ವ ಮರೆತ ಕ್ರೂರಿಯೊಬ್ಬ ನಾವು ಹೊಡೆದಿದ್ದೇವೆ. ನಾವು ಇವನನ್ನ ಸಾಯಿಸಿದ್ದೇವೆ ಎಂದು ವಿಕೃತ ಆನಂದಪಟ್ಟಿದ್ದಾರೆ. ಇನ್ನು ಮತ್ತೊಂದು ವೀಡಿಯೋದಲ್ಲಿ ಹೇಯ್ ನಿಂತ್ಕೊಳ್ರೋ ನಾವು ದೊಡ್ಡದಾಗಿ ಬೆಳೆದು, ನಾವೂ ದೊಡ್ಡವರಾದ್ವಿ ಎಂದು ಹೇಳುತ್ತಾ ಕೊಲೆಯನ್ನ ಸಂಭ್ರಮಿಸಿದ್ದಾರೆ. ಕೊಲೆ ಮಾಡಿ ನಾವು ದೊಡ್ಡವರಾದ್ವಿ ನಾವೂ ಬೆಳೆದ್ವಿ ಎಂದು ಹೇಳುತ್ತಾ ಅಟ್ಟಹಾಸ ಮೆರೆದಿದ್ದಾರೆ. ಗಾಂಜಾ ಅಮಲಿನಲ್ಲಿ ಪುಂಡರ ರಾಕ್ಷಸೀ ಕೃತ್ಯ ಎಸಗಿದ್ದಾರೆ. ಹೀಗಾಗಿ ಈ ಹತ್ಯೆ ವಿಡಿಯೋ ಹಾಸನದಾದ್ಯಂತ ವೈರಲ್ ಆಗಿದ್ದು, ಜನರನ್ನ ಬೆಚ್ಚಿಬೀಳೀಸಿದೆ.

ಅಷ್ಟಕ್ಕೂ ವೀಡಿಯೋ ಮಾಡಿರುವುದು ಉಲ್ಲಾಸ್ ಎಂದು ತಿಳಿದುಬಂದಿದೆ. ಆಟೋ ಚಾಲಕನಾಗಿರುವ ಈತ ಹಾಸನ ಜಿಲ್ಲೆ ಆಲೂರು ಮೂಲದವನು ಎನ್ನುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಉಲ್ಲಾಸ್ ಹಾಗು ಕೀರ್ತಿ ಎಲ್ಲರೂ ಪರಿಚಿತರಾಗಿದ್ದು, ನಿನ್ನೆ ಕೂಡ ಒಟ್ಟಿಗೆ ಇದ್ದವರು ಒಟ್ಟಿಗೆ ಪಾರ್ಟಿ ಮಾಡಿದ್ದಾರೆ. ಆದ್ರೆ ಬಳಿಕ ಏನಾಯ್ತೋ ಏನೋ ಜೊತೆಗೆ ಬಂಧವನನ್ನ ಬಡಿದು ಕೊಂದು ಶವದ ಎದುರು ವೀಡಿಯೋ ಮಾಡಿದ್ದಾರೆ. ಕೊಲೆ ಮಾಡಿ ವೀಡಿಯೋ ಮಾಡಿರುವ ಪಾತಕಿ ಉಲ್ಲಾಸ್ ಒಂದು ವೀಡಿಯೋದಲ್ಲಿ ತಾನೊಬ್ಬನೇ ಇದ್ದರೆ ಇನ್ನೊಂದು ವೀಡಿಯೋದಲ್ಲಿ ಮತ್ತಿಬ್ಬರು ಇರೋದನ್ನ ತೋರಿಸಿದ್ದಾನೆ. ಜೊತೆಗೇ ತೆರಳಿದ್ದ ಯುವಕರ ಗುಂಪಿನ ನಡುವೆ ಗಲಾಟೆ ನಡೆದು ಕೊಲೆ ಆಗಿರುವ ಶಂಕೆ ವ್ಯಕ್ತವಾಗಿದ್ದು, ಹಾಸನ ನಗರ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಕೊಲೆಯ ಸೆಲ್ಫಿ ವೀಡಿಯೋ ವೈರಲ್ ಆಗುತ್ತಲೆ ಅಲರ್ಟ್ ಆದ ಪೊಲೀಸರು ವೀಡಿಯೋ ಜಾಡು ಹಿಡಿದು ಪರಿಶೀಲನೆ ನಡಸಿದಾಗ ಶವ ಬಿಟ್ಟಗೌಡನಹಳ್ಳಿ ಬಳಿ ಇರುವುದು ಗೊತ್ತಾಗಿದೆ. ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ ಹಿರಿಯ ಪೊಲೀಸ್ ಅದಿಕಾರಿಗಳು, ಸ್ಥಳಕ್ಕೆ ಸೂಕೊ ಟೀಂ, ಶ್ವಾನದಳ, ಬೆರಳಚ್ಚು ತಜ್ಞರನ್ನ ಕರೆಸಿ ಪರಿಶೀಲನೆ ನಡೆಸಿದ್ದಾರೆ. ಇನ್ನೊಂದೆಡೆ ಹಾಸನ ನಗರ ಠಾಣೆ ಪೊಲೀಸರು ಉಲ್ಲಾಸ್​​ ಬಂಧನಕ್ಕೆ ಬಲೆ ಬೀಸಿದ್ದಾರೆ.

Ramesh Babu

Journalist

Recent Posts

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

2 days ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

3 days ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

4 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

4 days ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

4 days ago