ಯುವಕರು ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಂಡು ಒಳ್ಳೆಯ ಜೀವನ ರೂಪಿಸಿಕೊಳ್ಳಬೇಕು- ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಅಮರೇಶ್ ಗೌಡ ಸೂಚನೆ

ಮಾದಕ ವಸ್ತುಗಳ ಸೇವನೆಯಿಂದ ಮಾನಸಿಕ, ದೈಹಿಕ ಹಾಗೂ ಸಾಮಾಜಿಕವಾಗಿ ವ್ಯಕ್ತಿಯ ಮೇಲೆ ದುಷ್ಪರಿಣಾಮಗಳು ಉಂಟಾಗುತ್ತವೆ. ಮದ್ಯ, ತಂಬಾಕು, ಬೀಡಿ, ಸಿಗರೇಟ್, ಗುಟ್ಟಾ, ಗಾಂಜಾ, ಅಫೀಮು, ನೋವು ನಿವಾರಕ ಹಾಗೂ ನಿದ್ರಾಜನಕ ಮಾತ್ರೆಗಳು ಸೇರಿದಂತೆ ಇತರೆ ಮಾದಕ ವಸ್ತುಗಳಾಗಿವೆ. ಯುವಕರು ಇಂತಹ ಚಟಗಳಿಂದ ದೂರವಿರಬೇಕು ಎಂದು‌ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಅಮರೇಶ್ ಗೌಡ ತಿಳಿಸಿದರು.

ಜೂನ್ 26 ಅಂತಾರಾಷ್ಟ್ರೀಯ ಮಾದಕವಸ್ತು ವ್ಯಸನ & ಅಕ್ರಮ ಕಳ್ಳಸಾಗಣೆಕೆ ವಿರೋಧಿ ದಿನದ ಅಂಗವಾಗಿ ಈ ದಿನ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಹಾಗೂ‌ ಮಹಿಳಾ‌ ಠಾಣಾ ಇನ್ಸ್ ಪೆಕ್ಟರ್ ಡಾ. ನವೀನ್ ಕುಮಾರ್ ಎಂ.ಬಿ  ನೇತೃತ್ವದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿ ಮಾತನಾಡಿದ ಅವರು, ಯುವಶಕ್ತಿ ಈ ದೇಶದ ಬಹು ದೊಡ್ಡ ಆಸ್ತಿ. ಆ ಅಸ್ತಿಯನ್ನು ಜೋಪಾನದಿಂದ ಕಾಪಾಡಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಯುವಕರು ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಂಡು ಒಳ್ಳೆಯ ಜೀವನ ರೂಪಿಸಿಕೊಳ್ಳಬೇಕು ಎಂದರು.

ನಂತರ ಮಹಿಳಾ‌ ಠಾಣಾ ಇನ್ಸ್ ಪೆಕ್ಟರ್ ಡಾ. ನವೀನ್ ಕುಮಾರ್ ಎಂ.ಬಿ ಮಾತನಾಡಿ, ಮಾದಕ ವಸ್ತುಗಳ ವ್ಯಸನ ಯುವಜನತೆ ಮೇಲೆ ಪರಿಣಾಮ ಬೀರುತ್ತಿದೆ. ಸಂತೋಷ, ಗೆಳೆಯರ ಒತ್ತಡ, ನೋವು ನಿವಾರಣೆ ನೆಪ, ಆಧುನಿಕ ಜೀವನ ಶೈಲಿ ಅನುಕರುಣೆ ಮಾಡಲು ವ್ಯಸನಕ್ಕೆ ತುತ್ತಾಗುತ್ತಾರೆ. ಇದರಿಂದ ಹಿಂಸಾತ್ಮಕ ನಡವಳಿಕೆ, ಉದ್ಯೋಗ ಮತ್ತು ಕೌಟುಂಬಿಕ ಸಮಸ್ಯೆಗಳು, ಆತ್ಮಹತ್ಯೆ, ಕಾನೂನು ಬಾಹಿರ ಕೃತ್ಯಗಳು, ದೈಹಿಕ, ಮಾನಸಿಕ ಕಾಯಿಲೆಗಳು, ಲೈಂಗಿಕ ರೋಗಗಳು, ಗರ್ಭಪಾತ, ರಸ್ತೆ ಅಪಘಾತಗಳು ಸಂಭವಿಸುತ್ತವೆ. ಹೀಗಾಗಿ ಯುವಕರು ಇಂಥ ವಸ್ತುಗಳಿಂದ ದೂರವಿರಬೇಕು ಎಂದು‌ ಸೂಚಿಸಿದರು.

ಈ ವೇಳೆ ಉಪನ್ಯಾಸಕರು, ಶಿಕ್ಷಕರು, ಸಿಬ್ಬಂದಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

” ಮೊಬೈಲ್ ಬಿಡಿ – ಪುಸ್ತಕ ಹಿಡಿ “……..

" ಮೊಬೈಲ್ ಬಿಡಿ - ಪುಸ್ತಕ ಹಿಡಿ "........ ಕರ್ನಾಟಕ ಸರ್ಕಾರದ ಶಿಕ್ಷಣ ಇಲಾಖೆ ಹೀಗೊಂದು ಅಭಿಯಾನ ಶುರು ಮಾಡಿದೆ.…

1 hour ago

ಬೈಕ್-ಟಿಪ್ಪರ್ ನಡುವೆ ಅಪಘಾತ: ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವು, ಮತ್ತೋರ್ವನಿಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು

ಬೈಕ್-ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ…

12 hours ago

ರೈತರು ಇ-ಕೆವೈಸಿ ಮಾಡಿಸಲು ಕೃಷಿ ಇಲಾಖೆ ಸೂಚನೆ

ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯು ಆಗ್ರಿಸ್ಟಾಕ್ ಘಟಕದಡಿಯಲ್ಲಿ ಕೇಂದ್ರ ಸರ್ಕಾರದ ಮಾನದಂಡಗಳನ್ನು ಅಳವಡಿಸಿ ಭೂಹಿಡುವಳಿಗಳನ್ನು ಹೊಂದಿರುವ ರಾಜ್ಯದ…

15 hours ago

ಮನರೇಗಾ ಉಳಿಸಲು ಗ್ರಾ.ಪಂ ಮಟ್ಟದಲ್ಲೂ ಹೋರಾಟ- ಜಿಲ್ಲಾ ಎಸ್.ಟಿ ಕಾಂಗ್ರೆಸ್ ಅಧ್ಯಕ್ಷ ಮುನಿಕೃಷ್ಣಪ್ಪ

ತಾಲ್ಲೂಕು ಕೇಂದ್ರದಲ್ಲಿ ಮಾತ್ರವಲ್ಲದೆ ಗ್ರಾ.ಪಂ ಮಟ್ಟದಲ್ಲಿ ಮನರೇಗಾ ಯೋಜನೆ ಉಳಿಸಲು ಹೋರಾಟ ನಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಎಸ್.ಟಿ ಘಟಕದ…

17 hours ago

ಉಚಿತ ಆರೋಗ್ಯ ತಪಾಸಣಾ ಶಿಬಿರ

ದೊಡ್ಡಬಳ್ಳಾಪುರ ನಗರ: ನವಚೇತನ ಆಸ್ಪತ್ರೆ ಉಷ್ಟ್ರತಿ ಎನ್‌ಜಿಓ, ಡಿ ಎಸ್ ಜಿ ಸ್ಪೋರ್ಟ್ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರಯನ್ನು…

17 hours ago

ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್-ಬಿಜೆಪಿ ಮಧ್ಯೆ ಘರ್ಷಣೆ ಜೋರು….ಮಾತು ತಪ್ಪಿದ ಶಾಸಕ ಎಂದ ಜೆಡಿಎಸ್ ನಾಯಕರು- ನಾನು ಮಾತು ತಪ್ಪಿಲ್ಲ, ಕೊಟ್ಟ ಮಾತಿನಂತೆ ನಡೆಯುತ್ತೇನೆ – ಶಾಸಕ ಧೀರಜ್ ಮುನಿರಾಜು

ರಾಜ್ಯ ರಾಜಕೀಯದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೇರಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಬಳಿ…

24 hours ago