ಯುವಕರು ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಂಡು ಒಳ್ಳೆಯ ಜೀವನ ರೂಪಿಸಿಕೊಳ್ಳಬೇಕು- ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಅಮರೇಶ್ ಗೌಡ ಸೂಚನೆ

ಮಾದಕ ವಸ್ತುಗಳ ಸೇವನೆಯಿಂದ ಮಾನಸಿಕ, ದೈಹಿಕ ಹಾಗೂ ಸಾಮಾಜಿಕವಾಗಿ ವ್ಯಕ್ತಿಯ ಮೇಲೆ ದುಷ್ಪರಿಣಾಮಗಳು ಉಂಟಾಗುತ್ತವೆ. ಮದ್ಯ, ತಂಬಾಕು, ಬೀಡಿ, ಸಿಗರೇಟ್, ಗುಟ್ಟಾ, ಗಾಂಜಾ, ಅಫೀಮು, ನೋವು ನಿವಾರಕ ಹಾಗೂ ನಿದ್ರಾಜನಕ ಮಾತ್ರೆಗಳು ಸೇರಿದಂತೆ ಇತರೆ ಮಾದಕ ವಸ್ತುಗಳಾಗಿವೆ. ಯುವಕರು ಇಂತಹ ಚಟಗಳಿಂದ ದೂರವಿರಬೇಕು ಎಂದು‌ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಅಮರೇಶ್ ಗೌಡ ತಿಳಿಸಿದರು.

ಜೂನ್ 26 ಅಂತಾರಾಷ್ಟ್ರೀಯ ಮಾದಕವಸ್ತು ವ್ಯಸನ & ಅಕ್ರಮ ಕಳ್ಳಸಾಗಣೆಕೆ ವಿರೋಧಿ ದಿನದ ಅಂಗವಾಗಿ ಈ ದಿನ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಹಾಗೂ‌ ಮಹಿಳಾ‌ ಠಾಣಾ ಇನ್ಸ್ ಪೆಕ್ಟರ್ ಡಾ. ನವೀನ್ ಕುಮಾರ್ ಎಂ.ಬಿ  ನೇತೃತ್ವದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿ ಮಾತನಾಡಿದ ಅವರು, ಯುವಶಕ್ತಿ ಈ ದೇಶದ ಬಹು ದೊಡ್ಡ ಆಸ್ತಿ. ಆ ಅಸ್ತಿಯನ್ನು ಜೋಪಾನದಿಂದ ಕಾಪಾಡಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಯುವಕರು ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಂಡು ಒಳ್ಳೆಯ ಜೀವನ ರೂಪಿಸಿಕೊಳ್ಳಬೇಕು ಎಂದರು.

ನಂತರ ಮಹಿಳಾ‌ ಠಾಣಾ ಇನ್ಸ್ ಪೆಕ್ಟರ್ ಡಾ. ನವೀನ್ ಕುಮಾರ್ ಎಂ.ಬಿ ಮಾತನಾಡಿ, ಮಾದಕ ವಸ್ತುಗಳ ವ್ಯಸನ ಯುವಜನತೆ ಮೇಲೆ ಪರಿಣಾಮ ಬೀರುತ್ತಿದೆ. ಸಂತೋಷ, ಗೆಳೆಯರ ಒತ್ತಡ, ನೋವು ನಿವಾರಣೆ ನೆಪ, ಆಧುನಿಕ ಜೀವನ ಶೈಲಿ ಅನುಕರುಣೆ ಮಾಡಲು ವ್ಯಸನಕ್ಕೆ ತುತ್ತಾಗುತ್ತಾರೆ. ಇದರಿಂದ ಹಿಂಸಾತ್ಮಕ ನಡವಳಿಕೆ, ಉದ್ಯೋಗ ಮತ್ತು ಕೌಟುಂಬಿಕ ಸಮಸ್ಯೆಗಳು, ಆತ್ಮಹತ್ಯೆ, ಕಾನೂನು ಬಾಹಿರ ಕೃತ್ಯಗಳು, ದೈಹಿಕ, ಮಾನಸಿಕ ಕಾಯಿಲೆಗಳು, ಲೈಂಗಿಕ ರೋಗಗಳು, ಗರ್ಭಪಾತ, ರಸ್ತೆ ಅಪಘಾತಗಳು ಸಂಭವಿಸುತ್ತವೆ. ಹೀಗಾಗಿ ಯುವಕರು ಇಂಥ ವಸ್ತುಗಳಿಂದ ದೂರವಿರಬೇಕು ಎಂದು‌ ಸೂಚಿಸಿದರು.

ಈ ವೇಳೆ ಉಪನ್ಯಾಸಕರು, ಶಿಕ್ಷಕರು, ಸಿಬ್ಬಂದಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

10 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

11 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

13 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

14 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

19 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

22 hours ago