ಯುವಕರು ನೈತಿಕ ಮೌಲ್ಯಗಳನ್ನು ರೂಢಿಸಿಕೊಳ್ಳಬೇಕು- ವಕೀಲ ಬಿ. ಸುರೇಶ್ ಗೌಡ

ಯುವಕರು ನೈತಿಕ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದು ವೈಯಕ್ತಿಕ ಬೆಳವಣಿಗೆಗೆ ಮಾತ್ರವಲ್ಲದೆ, ಆರೋಗ್ಯಕರ ಮತ್ತು ಸಮೃದ್ಧ ಸಮಾಜದ ನಿರ್ಮಾಣಕ್ಕೂ ಅತ್ಯಗತ್ಯವಾಗಿದೆ ಎಂದು ಹೈಕೋರ್ಟ್ ನ ವಕೀಲರಾದ ಬಿ. ಸುರೇಶ್ ಗೌಡ ಹೇಳಿದರು.

ಶ್ರೀ ದೇವರಾಜ್ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದ ಕನ್ನಡ ಭಾಷಾ ವಿಭಾಗ, ರಾಷ್ಟ್ರೀಯ ಸೇವಾ ಯೋಜನೆ ಮತ್ತು ರೆಡ್ ರಿಬ್ಬನ್ ಕ್ಲಬ್, ಸಹಯೋಗದಲ್ಲಿ “ಯುವಕರು ಮತ್ತು ನೈತಿಕ ಮೌಲ್ಯಗಳು” ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯುವ ಮನಸ್ಸುಗಳಲ್ಲಿ ನೈತಿಕ ಮೌಲ್ಯಗಳು ವ್ಯಕ್ತಿತ್ವವನ್ನು ರೂಪಿಸುವ ಅಡಿಪಾಯವಾಗಿದ್ದು, ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆ ತರಲು ಹಾಗೂ ಉತ್ತಮ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಹಾಯಕವಾಗುತ್ತವೆ, ಪೋಷಕರು ಮತ್ತು ಶಿಕ್ಷಕರು ಬಾಲ್ಯದಿಂದಲೇ ಮೌಲ್ಯಗಳನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರವಹಿಸುತ್ತಾರೆ, ಇದರಿಂದ ಯುವಕರು ಜವಾಬ್ದಾರಿಯುತ ನಾಗರೀಕರಾಗಿ ರೂಪುಗೊಳ್ಳುತ್ತಾರೆ ಎಂದು ಹೇಳಿದರು.

ರಾಷ್ಟ್ರೀಯ ಸೇವಾ ಯೋಜನಾ ಅಧಿಕಾರಿಯಾದ ಡಾ. ಎಂ. ಚಿಕ್ಕಣ್ಣ ಮಾತನಾಡಿ, ಪ್ರಾಮಾಣಿಕತೆ, ಸಹಾನುಭೂತಿ, ಗೌರವ ಮತ್ತು ನಿಸ್ವಾರ್ಥತೆಯಂತಹ ನೈತಿಕ ಮೌಲ್ಯಗಳು ಯುವಕರ ವ್ಯಕ್ತಿತ್ವವನ್ನು ರೂಪಿಸುತ್ತವೆ ಎಂದರು. ನೈತಿಕ ಪ್ರಜ್ಞೆ ಯುವಕರಿಗೆ ಸರಿ-ತಪ್ಪಿನ ನಡುವಿನ ವ್ಯತ್ಯಾಸವನ್ನು ತಿಳಿಯಲು ಹಾಗೂ ಕಷ್ಟಕರ ಸಂದರ್ಭಗಳಲ್ಲಿ ಸರಿಯಾದ ನಿರ್ಧಾರಗಳನ್ನು ತೆಗೆದುಕೊಳ್ಳಲು ಮಾರ್ಗದರ್ಶನ ನೀಡುತ್ತದೆ, ಇಂತಹ ಮೌಲ್ಯಗಳು ಯುವಕರಲ್ಲಿ ಜವಾಬ್ದಾರಿಯುತ ನಡವಳಿಕೆ, ಇತರರ ಬಗ್ಗೆ ಗೌರವ ಮತ್ತು ಸಮಾಜದ ಬಗ್ಗೆ ಕಾಳಜಿಯನ್ನು ಬೆಳೆಸುತ್ತವೆ ಎಂದು ಹೇಳಿದರು.

ಕಾಲೇಜಿನ ಪ್ರಾಂಶುಪಾಲರಾದ ಡಾ. ಎಂ. ಎಸ್. ಗೌರಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿ, ಉತ್ತಮ ನೈತಿಕ ಮೌಲ್ಯಗಳನ್ನು ಹೊಂದಿರುವ ಯುವಕರು ಆತ್ಮವಿಶ್ವಾಸದಿಂದ ವರ್ತಿಸುತ್ತಾರೆ. ಇದು ಅವರ ಶಿಕ್ಷಣ ಮತ್ತು ವೃತ್ತಿಜೀವನದಲ್ಲಿ ಯಶಸ್ಸು ಸಾಧಿಸಲು ನೆರವಾಗುತ್ತದೆ, ಕಥೆಗಳು, ಉಪನ್ಯಾಸಗಳು ಮತ್ತು ನೈತಿಕ ಕತೆಗಳ ಮೂಲಕ ಮೌಲ್ಯಗಳನ್ನು ಬೋಧಿಸುವುದು ಪರಿಣಾಮಕಾರಿಯಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಸಿ. ಪಿ. ಪ್ರಕಾಶ್, ನಿರ್ವಹಣಾ ವಿಭಾಗದ ಮುಖ್ಯಸ್ಥರಾದ ಚೈತ್ರ ಪಿ., ಪ್ರಾಧ್ಯಾಪಕರಾದ ಲಕ್ಷ್ಮೀಶ, ವೆಂಕಟೇಶ್, ದಿವ್ಯ, ಹಿಂದುಶ್ರೀ, ಬಾಬುಸಾಬಿ, ಶ್ರೀನಿವಾಸ್ ,ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

46 minutes ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

8 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

9 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

24 hours ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago