Categories: ಕೋಲಾರ

ಯುವಕರು ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಭಾಗವಹಿಸಲು ಮನವಿ

ಕೋಲಾರ: ರಾಜ್ಯದಲ್ಲಿ ನಡೆಯುತ್ತಿರುವ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಎನ್.ಎಸ್.ಯು.ಐ ಪದಾಧಿಕಾರಿಗಳು ಸದಸ್ಯರು ಮತ್ತು ಯುವಕರು ಸಕ್ರಿಯವಾಗಿ ಭಾಗವಹಿಸುವಂತೆ ಎನ್.ಎಸ್.ಯು ಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಿಹಾಲ್ ತರೀನ್ ಮನವಿ ಮಾಡಿದ್ದಾರೆ

ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು ಕಾಂಗ್ರೆಸ್ ಪಕ್ಷದ ಯುವ ನೇತಾರ ರಾಹುಲ್ ಗಾಂಧಿ ಯುವ ಕಾಂಗ್ರೆಸ್ ಅಧ್ಯಕ್ಷರ ಮತ್ತು ಪದಾಧಿಕಾರಿಗಳ ಚುನಾವಣೆಯನ್ನು ಪ್ರಜಾಪ್ರಭುತ್ವ ಮಾದರಿಯಲ್ಲಿ ಯುವ ಮತದಾರರೇ ಆಯ್ಕೆ ಮಾಡುವ ವ್ಯವಸ್ಥೆಯನ್ನು ತಂದಿದ್ದು ಇದರಿಂದ ಯುವ ಶಕ್ತಿ ಹೆಚ್ಚಾಗಿ ರಾಜಕೀಯಕ್ಕೆ ಬರಲು ಸಾಧ್ಯವಾಗಿದೆ ಯುವಕರು ಹೆಚ್ಚಿನ ರೀತಿಯಲ್ಲಿ ಭಾಗವಹಿಸಿ ಮತದಾನ ಮಾಡುವಂತೆ ಮನವಿ ಮಾಡಿದರು.

ದೇಶದಲ್ಲಿ ಮತ್ತು ರಾಜ್ಯದಲ್ಲಿ ಮುಂಚೂಣಿ ಘಟಕಗಳ ಪದಾಧಿಕಾರಿಗಳು ಹಾಗೂ ಮುಖಂಡರು ಯುವ ಕಾಂಗ್ರೆಸ್‌ನಿಂದ ಬೆಳೆದು ಬಂದಿದ್ದಾರೆ ಯುವ ಕಾಂಗ್ರೆಸ್ ಸದಸ್ಯರಾದವರು ರಾಜ್ಯಾಧ್ಯಕ್ಷ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ, ಜಿಲ್ಲಾಧ್ಯಕ್ಷ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಹಾಗೂ ಬ್ಲಾಕ್ ಅಧ್ಯಕ್ಷ ಸ್ಥಾನಗಳಿಗೆ ಒಟ್ಟು ಆರು ಮತವನ್ನು ಹಾಕಬಹುದು ನಮ್ಮ ಪಕ್ಷದೊಳಗೆ ನಡೆಯುವ ಅಂತರಿಕ ಚುನಾವಣೆಯಲ್ಲಿ ಎಲ್ಲರು ಸಕ್ರಿಯವಾಗಿ ಭಾಗವಹಿಸಿ ಕಾಂಗ್ರೆಸ್ ಪಕ್ಷವನ್ನು ಬಲಿಷ್ಟಗೊಳಿಸಬೇಕು ಎಂದು ನಿಹಾಲ್ ತರೀನ್ ಮನವಿ ಮಾಡಿದರು.

Ramesh Babu

Journalist

View Comments

Recent Posts

‘ಆಸರೆ’ ಯೋಜನೆ: ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ, ಆರೋಗ್ಯ ನೆರವು ಹಾಗೂ ಯೋಗಕ್ಷೇಮ ವಿಚಾರಣೆ

'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…

2 hours ago

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

4 hours ago

ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…

7 hours ago

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪ.ಪಂ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರಿಂದ ಹಲ್ಲೆ: ದೂರು ದಾಖಲು

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ‌ಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…

8 hours ago

ಬೆಂ.ಗ್ರಾ ನೂತನ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಆಗಿ ಎ.ವಿ ಲಕ್ಷ್ಮಿನಾರಾಯಣ ನೇಮಕ

ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…

10 hours ago

ಬೆಳಗಾವಿಯಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾ ದಾಳಿ: ದಾಳಿ ವೇಳೆ ಕೋಟಿ ಕೋಟಿ ಅಕ್ರಮ ಆಸ್ತಿ ಪತ್ತೆ

ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ  14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…

11 hours ago