ಕೋಲಾರ: ರಾಜ್ಯದಲ್ಲಿ ನಡೆಯುತ್ತಿರುವ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಎನ್.ಎಸ್.ಯು.ಐ ಪದಾಧಿಕಾರಿಗಳು ಸದಸ್ಯರು ಮತ್ತು ಯುವಕರು ಸಕ್ರಿಯವಾಗಿ ಭಾಗವಹಿಸುವಂತೆ ಎನ್.ಎಸ್.ಯು ಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಿಹಾಲ್ ತರೀನ್ ಮನವಿ ಮಾಡಿದ್ದಾರೆ
ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು ಕಾಂಗ್ರೆಸ್ ಪಕ್ಷದ ಯುವ ನೇತಾರ ರಾಹುಲ್ ಗಾಂಧಿ ಯುವ ಕಾಂಗ್ರೆಸ್ ಅಧ್ಯಕ್ಷರ ಮತ್ತು ಪದಾಧಿಕಾರಿಗಳ ಚುನಾವಣೆಯನ್ನು ಪ್ರಜಾಪ್ರಭುತ್ವ ಮಾದರಿಯಲ್ಲಿ ಯುವ ಮತದಾರರೇ ಆಯ್ಕೆ ಮಾಡುವ ವ್ಯವಸ್ಥೆಯನ್ನು ತಂದಿದ್ದು ಇದರಿಂದ ಯುವ ಶಕ್ತಿ ಹೆಚ್ಚಾಗಿ ರಾಜಕೀಯಕ್ಕೆ ಬರಲು ಸಾಧ್ಯವಾಗಿದೆ ಯುವಕರು ಹೆಚ್ಚಿನ ರೀತಿಯಲ್ಲಿ ಭಾಗವಹಿಸಿ ಮತದಾನ ಮಾಡುವಂತೆ ಮನವಿ ಮಾಡಿದರು.
ದೇಶದಲ್ಲಿ ಮತ್ತು ರಾಜ್ಯದಲ್ಲಿ ಮುಂಚೂಣಿ ಘಟಕಗಳ ಪದಾಧಿಕಾರಿಗಳು ಹಾಗೂ ಮುಖಂಡರು ಯುವ ಕಾಂಗ್ರೆಸ್ನಿಂದ ಬೆಳೆದು ಬಂದಿದ್ದಾರೆ ಯುವ ಕಾಂಗ್ರೆಸ್ ಸದಸ್ಯರಾದವರು ರಾಜ್ಯಾಧ್ಯಕ್ಷ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ, ಜಿಲ್ಲಾಧ್ಯಕ್ಷ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಹಾಗೂ ಬ್ಲಾಕ್ ಅಧ್ಯಕ್ಷ ಸ್ಥಾನಗಳಿಗೆ ಒಟ್ಟು ಆರು ಮತವನ್ನು ಹಾಕಬಹುದು ನಮ್ಮ ಪಕ್ಷದೊಳಗೆ ನಡೆಯುವ ಅಂತರಿಕ ಚುನಾವಣೆಯಲ್ಲಿ ಎಲ್ಲರು ಸಕ್ರಿಯವಾಗಿ ಭಾಗವಹಿಸಿ ಕಾಂಗ್ರೆಸ್ ಪಕ್ಷವನ್ನು ಬಲಿಷ್ಟಗೊಳಿಸಬೇಕು ಎಂದು ನಿಹಾಲ್ ತರೀನ್ ಮನವಿ ಮಾಡಿದರು.
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…
ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
View Comments
Proud of you bhai