Categories: ಕೋಲಾರ

ಯುವಕರು ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಭಾಗವಹಿಸಲು ಮನವಿ

ಕೋಲಾರ: ರಾಜ್ಯದಲ್ಲಿ ನಡೆಯುತ್ತಿರುವ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಎನ್.ಎಸ್.ಯು.ಐ ಪದಾಧಿಕಾರಿಗಳು ಸದಸ್ಯರು ಮತ್ತು ಯುವಕರು ಸಕ್ರಿಯವಾಗಿ ಭಾಗವಹಿಸುವಂತೆ ಎನ್.ಎಸ್.ಯು ಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಿಹಾಲ್ ತರೀನ್ ಮನವಿ ಮಾಡಿದ್ದಾರೆ

ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು ಕಾಂಗ್ರೆಸ್ ಪಕ್ಷದ ಯುವ ನೇತಾರ ರಾಹುಲ್ ಗಾಂಧಿ ಯುವ ಕಾಂಗ್ರೆಸ್ ಅಧ್ಯಕ್ಷರ ಮತ್ತು ಪದಾಧಿಕಾರಿಗಳ ಚುನಾವಣೆಯನ್ನು ಪ್ರಜಾಪ್ರಭುತ್ವ ಮಾದರಿಯಲ್ಲಿ ಯುವ ಮತದಾರರೇ ಆಯ್ಕೆ ಮಾಡುವ ವ್ಯವಸ್ಥೆಯನ್ನು ತಂದಿದ್ದು ಇದರಿಂದ ಯುವ ಶಕ್ತಿ ಹೆಚ್ಚಾಗಿ ರಾಜಕೀಯಕ್ಕೆ ಬರಲು ಸಾಧ್ಯವಾಗಿದೆ ಯುವಕರು ಹೆಚ್ಚಿನ ರೀತಿಯಲ್ಲಿ ಭಾಗವಹಿಸಿ ಮತದಾನ ಮಾಡುವಂತೆ ಮನವಿ ಮಾಡಿದರು.

ದೇಶದಲ್ಲಿ ಮತ್ತು ರಾಜ್ಯದಲ್ಲಿ ಮುಂಚೂಣಿ ಘಟಕಗಳ ಪದಾಧಿಕಾರಿಗಳು ಹಾಗೂ ಮುಖಂಡರು ಯುವ ಕಾಂಗ್ರೆಸ್‌ನಿಂದ ಬೆಳೆದು ಬಂದಿದ್ದಾರೆ ಯುವ ಕಾಂಗ್ರೆಸ್ ಸದಸ್ಯರಾದವರು ರಾಜ್ಯಾಧ್ಯಕ್ಷ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ, ಜಿಲ್ಲಾಧ್ಯಕ್ಷ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಹಾಗೂ ಬ್ಲಾಕ್ ಅಧ್ಯಕ್ಷ ಸ್ಥಾನಗಳಿಗೆ ಒಟ್ಟು ಆರು ಮತವನ್ನು ಹಾಕಬಹುದು ನಮ್ಮ ಪಕ್ಷದೊಳಗೆ ನಡೆಯುವ ಅಂತರಿಕ ಚುನಾವಣೆಯಲ್ಲಿ ಎಲ್ಲರು ಸಕ್ರಿಯವಾಗಿ ಭಾಗವಹಿಸಿ ಕಾಂಗ್ರೆಸ್ ಪಕ್ಷವನ್ನು ಬಲಿಷ್ಟಗೊಳಿಸಬೇಕು ಎಂದು ನಿಹಾಲ್ ತರೀನ್ ಮನವಿ ಮಾಡಿದರು.

Ramesh Babu

Journalist

View Comments

Recent Posts

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

4 hours ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

5 hours ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

18 hours ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

1 day ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

1 day ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

1 day ago