ಯುವತಿಯರ ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದವನ ಬಂಧನ- ಆರೋಪಿಯು ತನ್ನ ಮೊಬೈಲ್ ನಲ್ಲಿ ಸುಮಾರು 12 ಸಾವಿರ ಯುವತಿಯರು, ಮಹಿಳೆಯರ ಫೋಟೋಗಳ‌ ಸಂಗ್ರಹ

ವಾಟ್ಸ್‌ ಆಪ್, ಇನ್ಸ್ಟಾಗ್ರಾಮ್, ಸ್ನ್ಯಾಪ್‌ ಚಾಟ್ ಸೇರಿದಂತೆ‌ ಇತರೆ ಸಾಮಾಜಿಕ ಜಾಲತಾಣಗಳಿಂದ ಯುವತಿಯರನ್ನು ಪರಿಚಯಿಸಿಕೊಂಡು ಅವರ ಫೋಟೋಗಳನ್ನು ಡೌನ್ಲೋಡ್ ಮಾಡಿಕೊಂಡು ಹಾಗೂ ತಾನು ಕೆಲಸ ಮಾಡುವ ಕಂಪನಿಯ ಸಹೋದ್ಯೋಗಿ ಯುವತಿಯರ ಫೋಟೋ ಮಾರ್ಫ್ ಮಾಡುತ್ತಿದ್ದ ಕಾಲ್ಸೆಂಟರ್ ಉದ್ಯೋಗಿಯನ್ನು ಸಿಸಿಬಿ ಸೈಬರ್ ಕ್ರೈಂ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಸಹೋದ್ಯೋಗಿ ಹುಡುಗಿಯರ ಫೋಟೋ ಮಾರ್ಫ್ ಮಾಡುತ್ತಿರುವುದಾಗಿ ಬೆಂಗಳೂರಿನ ಪ್ರತಿಷ್ಠಿತ ಕಂಪನಿಯ ಲೀಗಲ್ ಹೆಡ್ ನೀಡಿದ ದೂರಿನ ಆಧಾರದ ಮೇಲೆ ಸೈಬರ್ ಕ್ರೈಂ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ತನಿಖೆ ವೇಳೆ ಆರೋಪಿಯು ತನ್ನ ಮೊಬೈಲ್ ನಲ್ಲಿ ಸುಮಾರು 12 ಸಾವಿರ ಯುವತಿಯರು, ಮಹಿಳೆಯರ ಫೋಟೋಗಳನ್ನು ಹೊಂದಿದ್ದು,  ವಾಟ್ಸ್‌ ಆಪ್, ಇನ್ಸ್ಟಾಗ್ರಾಮ್, ಸ್ನ್ಯಾಪ್‌ ಚಾಟ್ ಗಳಿಂದ ಫೋಟೋ ಡೌನ್ಲೋಡ್ ಮಾಡಿ, ಮಾರ್ಫ್ ಮಾಡಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದನೆಂದು ವಿಚಾರಣೆ ವೇಳೆ ಬೆಳಕಿಗೆ ಬಂದಿದೆ ಎಂದು ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ್ ಅವರು ತಿಳಿಸಿದ್ದಾರೆ.

ತಮ್ಮ ಸೋಶಿಯಲ್ ಮೀಡಿಯಾ ಖಾತೆಗಳನ್ನು ಖಾಸಗಿಯಾಗಿಟ್ಟುಕೊಳ್ಳುವಂತೆ ಮತ್ತು ತಮ್ಮ ಫೋಟೋಗಳು ಮತ್ತು ವೀಡಿಯೊಗಳನ್ನು ವೈಯಕ್ತಿಕವಾಗಿ ತಿಳಿದಿರುವವರೊಂದಿಗೆ ಮಾತ್ರ ಹಂಚಿಕೊಳ್ಳುವಂತೆ ಬೆಂಗಳೂರು ನಗರ ಪೊಲೀಸರು ನಾಗರಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಪ್ರತಿಷ್ಠಿತ ಇನ್‌ಶೂರೆನ್ಸ್ ಕಂಪನಿಗಳ ಹೆಸರಿನಲ್ಲಿ ಹಿರಿಯ ನಾಗರೀಕರಿಗೆ ವಂಚನೆ

ಅದೇರೀತಿ ಪ್ರತಿಷ್ಠಿತ ಇನ್‌ಶೂರೆನ್ಸ್ ಕಂಪನಿಗಳ ಹೆಸರಿನಲ್ಲಿ ಅವಧಿಪೂರ್ವ ಪಾಲಿಸಿಗಳನ್ನು ಹಿರಿಯ ನಾಗರೀಕರಿಗೆ ನೀಡುವುದಾಗಿ ವಂಚಿಸುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.

ಆರೋಪಿಯು ಪಾಲಿಸಿಯ ಹಣವನ್ನು ಪಡೆಯಲು ಮುಂಗಡವಾಗಿ ಹಣ ಪಾವತಿಸುವಂತೆ ಅಮಾಯಕ ಜನರಿಂದ ಸುಮಾರು 1 ಕೋಟಿ 80ಲಕ್ಷ ರೂ. ಗಳನ್ನು ಸಂಗ್ರಹಿಸಿದ್ದು, ಈ ಹಣದ ಪೈಕಿ 40 ಲಕ್ಷ ಹಣವನ್ನು ತನ್ನ ಸ್ವಂತ ಖಾತೆಗೆ ಜಮಾ ಮಾಡಿಕೊಂಡು ಹಿರಿಯ ನಾಗರೀಕರಿಗೆ ವಂಚನೆ ಮಾಡಿರುವ ಬಗ್ಗೆ ವಿಚಾರಣೆಯಿಂದ ಬೆಳಕಿಗೆ ಬಂದಿರುತ್ತವೆ.

ಅಲ್ಲದೆ ಇದೇ ರೀತಿ ಸೈಬರ್ ವಂಚನೆಯ ಹಲವು ಪ್ರಕರಣಗಳು ತನಿಖೆ ವೇಳೆ ಪತ್ತೆಯಾಗಿರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

Ramesh Babu

Journalist

Recent Posts

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

48 minutes ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

2 hours ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

8 hours ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

9 hours ago

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

14 hours ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

1 day ago