ಯುವತಿಯರ ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದವನ ಬಂಧನ- ಆರೋಪಿಯು ತನ್ನ ಮೊಬೈಲ್ ನಲ್ಲಿ ಸುಮಾರು 12 ಸಾವಿರ ಯುವತಿಯರು, ಮಹಿಳೆಯರ ಫೋಟೋಗಳ‌ ಸಂಗ್ರಹ

ವಾಟ್ಸ್‌ ಆಪ್, ಇನ್ಸ್ಟಾಗ್ರಾಮ್, ಸ್ನ್ಯಾಪ್‌ ಚಾಟ್ ಸೇರಿದಂತೆ‌ ಇತರೆ ಸಾಮಾಜಿಕ ಜಾಲತಾಣಗಳಿಂದ ಯುವತಿಯರನ್ನು ಪರಿಚಯಿಸಿಕೊಂಡು ಅವರ ಫೋಟೋಗಳನ್ನು ಡೌನ್ಲೋಡ್ ಮಾಡಿಕೊಂಡು ಹಾಗೂ ತಾನು ಕೆಲಸ ಮಾಡುವ ಕಂಪನಿಯ ಸಹೋದ್ಯೋಗಿ ಯುವತಿಯರ ಫೋಟೋ ಮಾರ್ಫ್ ಮಾಡುತ್ತಿದ್ದ ಕಾಲ್ಸೆಂಟರ್ ಉದ್ಯೋಗಿಯನ್ನು ಸಿಸಿಬಿ ಸೈಬರ್ ಕ್ರೈಂ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಸಹೋದ್ಯೋಗಿ ಹುಡುಗಿಯರ ಫೋಟೋ ಮಾರ್ಫ್ ಮಾಡುತ್ತಿರುವುದಾಗಿ ಬೆಂಗಳೂರಿನ ಪ್ರತಿಷ್ಠಿತ ಕಂಪನಿಯ ಲೀಗಲ್ ಹೆಡ್ ನೀಡಿದ ದೂರಿನ ಆಧಾರದ ಮೇಲೆ ಸೈಬರ್ ಕ್ರೈಂ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ತನಿಖೆ ವೇಳೆ ಆರೋಪಿಯು ತನ್ನ ಮೊಬೈಲ್ ನಲ್ಲಿ ಸುಮಾರು 12 ಸಾವಿರ ಯುವತಿಯರು, ಮಹಿಳೆಯರ ಫೋಟೋಗಳನ್ನು ಹೊಂದಿದ್ದು,  ವಾಟ್ಸ್‌ ಆಪ್, ಇನ್ಸ್ಟಾಗ್ರಾಮ್, ಸ್ನ್ಯಾಪ್‌ ಚಾಟ್ ಗಳಿಂದ ಫೋಟೋ ಡೌನ್ಲೋಡ್ ಮಾಡಿ, ಮಾರ್ಫ್ ಮಾಡಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದನೆಂದು ವಿಚಾರಣೆ ವೇಳೆ ಬೆಳಕಿಗೆ ಬಂದಿದೆ ಎಂದು ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ್ ಅವರು ತಿಳಿಸಿದ್ದಾರೆ.

ತಮ್ಮ ಸೋಶಿಯಲ್ ಮೀಡಿಯಾ ಖಾತೆಗಳನ್ನು ಖಾಸಗಿಯಾಗಿಟ್ಟುಕೊಳ್ಳುವಂತೆ ಮತ್ತು ತಮ್ಮ ಫೋಟೋಗಳು ಮತ್ತು ವೀಡಿಯೊಗಳನ್ನು ವೈಯಕ್ತಿಕವಾಗಿ ತಿಳಿದಿರುವವರೊಂದಿಗೆ ಮಾತ್ರ ಹಂಚಿಕೊಳ್ಳುವಂತೆ ಬೆಂಗಳೂರು ನಗರ ಪೊಲೀಸರು ನಾಗರಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಪ್ರತಿಷ್ಠಿತ ಇನ್‌ಶೂರೆನ್ಸ್ ಕಂಪನಿಗಳ ಹೆಸರಿನಲ್ಲಿ ಹಿರಿಯ ನಾಗರೀಕರಿಗೆ ವಂಚನೆ

ಅದೇರೀತಿ ಪ್ರತಿಷ್ಠಿತ ಇನ್‌ಶೂರೆನ್ಸ್ ಕಂಪನಿಗಳ ಹೆಸರಿನಲ್ಲಿ ಅವಧಿಪೂರ್ವ ಪಾಲಿಸಿಗಳನ್ನು ಹಿರಿಯ ನಾಗರೀಕರಿಗೆ ನೀಡುವುದಾಗಿ ವಂಚಿಸುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.

ಆರೋಪಿಯು ಪಾಲಿಸಿಯ ಹಣವನ್ನು ಪಡೆಯಲು ಮುಂಗಡವಾಗಿ ಹಣ ಪಾವತಿಸುವಂತೆ ಅಮಾಯಕ ಜನರಿಂದ ಸುಮಾರು 1 ಕೋಟಿ 80ಲಕ್ಷ ರೂ. ಗಳನ್ನು ಸಂಗ್ರಹಿಸಿದ್ದು, ಈ ಹಣದ ಪೈಕಿ 40 ಲಕ್ಷ ಹಣವನ್ನು ತನ್ನ ಸ್ವಂತ ಖಾತೆಗೆ ಜಮಾ ಮಾಡಿಕೊಂಡು ಹಿರಿಯ ನಾಗರೀಕರಿಗೆ ವಂಚನೆ ಮಾಡಿರುವ ಬಗ್ಗೆ ವಿಚಾರಣೆಯಿಂದ ಬೆಳಕಿಗೆ ಬಂದಿರುತ್ತವೆ.

ಅಲ್ಲದೆ ಇದೇ ರೀತಿ ಸೈಬರ್ ವಂಚನೆಯ ಹಲವು ಪ್ರಕರಣಗಳು ತನಿಖೆ ವೇಳೆ ಪತ್ತೆಯಾಗಿರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

11 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

15 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

15 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

18 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

2 days ago