Categories: Crime

ಯುವತಿಯಿಂದ ಮದ್ವೆಗೆ ನಿರಾಕರಣೆ: HIV ಇಂಜೆಕ್ಷನ್ ಚುಚ್ಚಿದ ಯುವಕ.!

ಹೈದರಾಬಾದ್: ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳಿಗೆ ಆಕೆಯ ಪ್ರಿಯಕರನೇ HIV ಪಾಸಿಟಿವ್ ಇಂಜಕ್ಷನ್ ಚುಚ್ಚಿದ ಆಘಾತಕಾರಿ ಘಟನೆ ಹೈದರಾಬಾದ್‌ನ ಮೆಡ್ಚಲ್ ಪ್ರದೇಶದಲ್ಲಿ ನಡೆದಿದೆ.

ಪ್ರೀತಿ ವಿಫಲವಾದ ಕೋಪದಲ್ಲಿ ಯುವಕನೊಬ್ಬ ಈ ಅಮಾನವೀಯ ಕೃತ್ಯ ಎಸಗಿದ್ದಾನೆ. ಘಟನೆ ಸಂಬಂಧ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದಾರೆ.

ಹೈದರಾಬಾದ್‌ನ ಮೆಡ್ಮಿಲ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮನೋಹರ್ ಎಂಬ ಯುವಕನೊಂದಿಗೆ ಯುವತಿಯ ಮದುವೆ ನಿಶ್ಚಯವಾಗಿತ್ತು. ಕುಟುಂಬಗಳ ಸಹಮತಿಯೊಂದಿಗೆ ಈ ಮದುವೆಯ ಮಾತುಕತೆ ನಡೆದಿತ್ತು. ಆದರೆ ನಂತರ ಯುವಕನಿಗೆ HIV ಪಾಸಿಟಿವ್ ಇರುವ ಮಾಹಿತಿ ಯುವತಿಗೆ ತಿಳಿದುಬಂದಿದೆ. ಈ ವಿಷಯ ತಿಳಿದ ನಂತರ ಯುವತಿ ಮದುವೆಗೆ ನಿರಾಕರಿಸಿದ್ದಾಳೆ.

ಯುವತಿಯ ಈ ನಿರ್ಧಾರ ಮನೋಹರ್‌ಗೆ ತೀವ್ರ ಕೋಪ ತಂದಿದೆ ಎಂದು ತಿಳಿದುಬಂದಿದೆ. ಹಲವು ಬಾರಿ ಯುವಕ ಯುವತಿಯನ್ನು ಸಂಪರ್ಕಿಸಿ ಮದುವೆಯಾಗಲೇಬೇಕು ಎಂದು ಒತ್ತಾಯಿಸಿದ್ದಾನೆ. ಆದರೆ ಯುವತಿ ತನ್ನ ನಿರ್ಧಾರದಲ್ಲಿ ಬದಲಾವಣೆ ಮಾಡದೇ ಮದುವೆಗೆ ನಿರಾಕರಿಸಿದ್ದಾಳೆ.

ಮಾರ್ಚ್ 11ರಂದು ಈ ಘಟನೆ ನಡೆದಿರುವುದಾಗಿ ವರದಿಯಾಗಿದೆ. ಆ ದಿನ ಮನೋಹರ್ ಯುವತಿಯನ್ನು ಭೇಟಿಯಾಗಲು ಕರೆಸಿಕೊಂಡಿದ್ದಾನೆ. ಈ ವೇಳೆ ಮತ್ತೊಮ್ಮೆ ಮದುವೆ ಬಗ್ಗೆ ಒತ್ತಾಯಿಸಿದ್ದಾನೆ. ಆದರೆ ಯುವತಿ ಮತ್ತೊಮ್ಮೆ ನಿರಾಕರಿಸಿದಾಗ ಕೋಪಗೊಂಡ ಮನೋಹರ್, ತನ್ನ ಬಳಿ ಇದ್ದ ಇಂಜಕ್ಷನ್ ಮೂಲಕ ಯುವತಿಗೆ ಚುಚ್ಚಿದ್ದಾನೆ.

ಈ ಇಂಜಕ್ಷನ್‌ನಲ್ಲಿ HIV ಸೋಂಕು ಇರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ಇಂಜಕ್ಷನ್ ನೀಡಿದ ಕೆಲವೇ ಗಂಟೆಗಳಲ್ಲಿ ಯುವತಿಗೆ ತೀವ್ರ ಜ್ವರ ಮತ್ತು ಅಸ್ವಸ್ಥತೆ ಕಾಣಿಸಿಕೊಂಡಿದೆ. ಇದರಿಂದ ಆತಂಕಗೊಂಡ ಯುವತಿ ತಕ್ಷಣವೇ ಆಸ್ಪತ್ರೆಗೆ ದಾಖಲಾಗಿದ್ದಾಳೆ. ವೈದ್ಯರು ಪ್ರಾಥಮಿಕ ಚಿಕಿತ್ಸೆ ನೀಡಿದ್ದು, ಅಗತ್ಯ ವೈದ್ಯಕೀಯ ಪರೀಕ್ಷೆಗಳು ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಯುವತಿ ನಡೆದ ಘಟನೆ ಬಗ್ಗೆ ತನ್ನ ಕುಟುಂಬದವರಿಗೆ ಮಾಹಿತಿ ನೀಡಿದ್ದಾಳೆ. ಈ ವಿಷಯ ತಿಳಿದ ಕುಟುಂಬದವರು ತಕ್ಷಣವೇ ಪೊಲೀಸರಿಗೆ ದೂರು ನೀಡಿದ್ದಾರೆ. ಯುವತಿಯ ದೂರಿನ ಆಧಾರದ ಮೇಲೆ ಪೊಲೀಸರು ತಕ್ಷಣವೇ ಕ್ರಮ ಕೈಗೊಂಡು ಆರೋಪಿ ಮನೋಹರ್ ಅನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಯು ಯುವತಿಗೆ ಮದುವೆಯಾಗಲು ಒತ್ತಾಯಿಸಿದ್ದ ವಿಚಾರ ಹೊರಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Ramesh Babu

Journalist

Recent Posts

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

2 hours ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

8 hours ago

ಹೃದಯ ವೈಶಾಲ್ಯತೆ ಮತ್ತು ಶುದ್ಧತೆ…

" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…

9 hours ago

ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ: ಪಿಡಿಒ ಗೌರಮ್ಮ

ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…

20 hours ago

ಅರ್ಹ ರೈತರು ಸೌಲಭ್ಯಗಳನ್ನು ಪಡೆದುಕೊಳ್ಳಿ : ಪಿಡಿಒ ರಂಜಿತ

ಚಿಕ್ಕನಾಯಕನಹಳ್ಳಿ ಸೆ.08: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…

20 hours ago

ಹೊರಗುತ್ತಿಗೆ ನೇಮಕಾತಿಯಲ್ಲೂ ಎಸ್‌ಸಿ, ಎಸ್‌ಟಿಗೆ ಮೀಸಲಾತಿ ಕಡ್ಡಾಯ- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಮೀಸಲಿಟ್ಟಿರುವ SCSP-TSP ಅನುದಾನವನ್ನು ಸಮರ್ಪಕವಾಗಿ ಬಳಸದ ಇಲಾಖೆಗಳ ಮುಂದಿನ ಹಣಕಾಸು…

20 hours ago