ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35) ಹತ್ಯೆ ಪ್ರಕರಣಕ್ಕೆ ತನಿಖೆಯ ವೇಳೆ ಹೊಸ ತಿರುವು ಸಿಕ್ಕಿದೆ.
ಯುವತಿಯೊಬ್ಬಳ ಕುರಿತು ಅಪಪ್ರಚಾರ ನಡೆಸಿ ಕುಟುಂಬದ ಗೌರವಕ್ಕೆ ಧಕ್ಕೆ ತಂದಿದ್ದ ವಿಚಾರವೇ ಈ ಕೊಲೆಗೆ ಪ್ರಮುಖ ಕಾರಣ ಎಂಬುದು ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಜೂನ್ 7ರಂದು ಸೂಲಿಬೆಲೆ ಗ್ರಾಮದಲ್ಲಿ ಖಲೀಮ್ನನ್ನು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಸೂಲಿಬೆಲೆ ಪೊಲೀಸರು, ಆರೋಪಿಗಳ ಪತ್ತೆಗೆ ವಿಶೇಷ ಕಾರ್ಯಾಚರಣೆ ನಡೆಸಿದ್ದರು.
ತನಿಖೆಯಲ್ಲಿ ಹೊರಬಂದ ಮಾಹಿತಿ ಪ್ರಕಾರ, ಆರೋಪಿಗಳಲ್ಲೊಬ್ಬನ ತಂಗಿಗೆ ಮದುವೆ ಸಂಬಂಧಗಳು ಬರುತ್ತಿದ್ದ ಸಂದರ್ಭಗಳಲ್ಲಿ ಖಲೀಮ್ ಉದ್ದೇಶಪೂರ್ವಕವಾಗಿ ಅಡ್ಡಿಪಡಿಸುತ್ತಿದ್ದ ಎನ್ನಲಾಗಿದೆ.
ಅಲ್ಲದೆ, ಆಕೆ ಬೇರೆ ಯುವಕನನ್ನು ಪ್ರೀತಿಸುತ್ತಿದ್ದಾಳೆ ಎಂದು ವಿವಿಧೆಡೆ ಅಪಪ್ರಚಾರ ಮಾಡುತ್ತಿದ್ದನಂತೆ. ಇದರಿಂದ ಮದುವೆ ಸಂಬಂಧಗಳು ಕೈ ತಪ್ಪುತ್ತಿದ್ದವು ಎಂಬ ಆರೋಪ ಕೇಳಿಬಂದಿದೆ.
ಇದರ ಜೊತೆಗೆ, ಯುವತಿಯ ಕುಟುಂಬದ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿದ್ದ ಹಾಗೂ ಸಾರ್ವಜನಿಕವಾಗಿ ಅಗೌರವ ತೋರಿಸುತ್ತಿದ್ದನೆಂದು ತನಿಖೆಯಲ್ಲಿ ತಿಳಿದುಬಂದಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ. ಈ ಬೆಳವಣಿಗೆಗಳಿಂದ ಆಕ್ರೋಶಗೊಂಡ ಆರೋಪಿಗಳು ಖಲೀಮ್ ವಿರುದ್ಧ ದ್ವೇಷ ಬೆಳೆಸಿಕೊಂಡು, ಪೂರ್ವಯೋಜಿತವಾಗಿ ತಂಡ ರಚಿಸಿ ಹತ್ಯೆ ನಡೆಸಿರುವ ಶಂಕೆ ವ್ಯಕ್ತವಾಗಿದೆ.
ಘಟನೆಯ ದಿನ ಖಲೀಮ್ ಮೇಲೆ ಮಾರಕಾಸ್ತ್ರಗಳಿಂದ ಸುಮಾರು 8ರಿಂದ 10 ಬಾರಿ ಚುಚ್ಚಿ ದಾಳಿ ನಡೆಸಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣದಲ್ಲಿ ಒಟ್ಟು ಏಳು ಮಂದಿ ಭಾಗಿಯಾಗಿದ್ದು, ಇದುವರೆಗೆ ಐವರು ಆರೋಪಿಗಳನ್ನು ಬಂಧಿಸಲಾಗಿದೆ.
ಬಂಧಿತರನ್ನು ಸಮೀರ್ ಬೇಗ್(31), ಆಯಾಜ್ ಪಾಷಾ(24), ಇಮ್ರಾನ್ ಬೇಗ್(28) ಅಲಿಯಾಸ್ ಅಡ್ಡು, ಅಬ್ದುಲ್ ಖಲೀಲ್(22) ಹಾಗೂ ಇಮ್ರಾನ್ ಬೇಗ್ (28) ಎಂದು ಗುರುತಿಸಲಾಗಿದೆ.
ಪ್ರಕರಣದ ಇನ್ನಿಬ್ಬರು ಆರೋಪಿಗಳಾದ ಸಂಶೀರ್ ಮತ್ತು ಸಾಖೀರ್ ತಲೆಮರೆಸಿಕೊಂಡಿದ್ದು, ಅವರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ಸೂಲಿಬೆಲೆ ಪೊಲೀಸರು ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿಸಿದ್ದು, ಹತ್ಯೆಗೆ ಸಂಬಂಧಿಸಿದ ಇತರೆ ಆಯಾಮಗಳನ್ನೂ ಪರಿಶೀಲಿಸಲಾಗುತ್ತಿದೆ.
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…