ಹುಬ್ಬಳ್ಳಿ : ಕಾಲೇಜು ಕ್ಯಾಂಪಸ್ನಲ್ಲೇ ವಿದ್ಯಾರ್ಥಿನಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಫಯಾಜ್, ಪೊಲೀಸರ ಮುಂದೆ ಕಾರಣ ಬಾಯ್ಬಿಟ್ಟಿದ್ದಾನೆ.
ಈ ಸಂಬಂಧ ಹುಬ್ಬಳ್ಳಿಯಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ಆರೋಪಿ ಪ್ರಕಾರ, ಬಿಸಿಎ ಓದುತ್ತಿರುವಾಗಿನಿಂದ ನೇಹಾ ಮತ್ತು ಫಯಾಜ್ ಲವ್ ಮಾಡುತ್ತಿದ್ದರು. ಇತ್ತೀಚೆಗೆ ಯುವತಿ ಆತನನ್ನು ಅವೈಡ್ ಮಾಡುತ್ತಿದ್ದಳಂತೆ. ಇದೇ ಕಾರಣಕ್ಕೆ ಕೊಲೆ ಮಾಡಿರುವುದಾಗಿ ತಿಳಿಸಿದ್ದಾನೆ ಎಂದರು.
ಸದ್ಯ ಪ್ರಕರಣ ಸಂಬಂಧ ತನಿಖೆ ನಡೆಯುತ್ತಿದೆ. ಎಲ್ಲಾ ಆಯಾಮಗಳಿಂದಲೂ ತನಿಖೆ ನಡೆಸುತ್ತೇವೆ. ಅಲ್ಲದೆ ಪ್ರಕರಣ ಸಂಬಂಧ ಸಾಕ್ಷ್ಯಗಳನ್ನು ಕೂಡ ಸಂಗ್ರಹಿಸುತ್ತೇವೆ ಎಂದು ಅವರು ತಿಳಿಸಿದರು.
ನಿನ್ನೆ ಸಂಜೆ 4.45ರ ಸುಮಾರಿಗೆ ನೇಹಾ ಕೊಲೆಯಾಗಿದೆ. ಆಕೆ ಕಾಲೇಜಿನಿಂದ ಹೊರಬರುತ್ತಿದ್ದಂತೆಯೇ ಆರೋಪಿ ಫಯಾಜ್ ಏಕಾಏಕಿ ಆಕೆಯ ಮೇಲೆ ನಾಲ್ಕೈದು ಬಾರಿ ಚಾಕುವಿನಿಂದ ಇರಿದು ಗಂಭೀರವಾಗಿ ಗಾಯಗೊಳಿಸಿದ್ದಾನೆ. ಕೂಡಲೇ ಕಾಲೇಜಿನ ಆಡಳಿತ ಮಂಡಳಿ ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಅದಾಗಲೇ ಆಕೆ ಸಾವನ್ನಪ್ಪಿದ್ದಾಳೆ ಎಂದರು.
ಇತ್ತ ಚಾಕು ಇರಿದ ಬಳಿಕ ಆರೋಪಿ ಆತನ ಊರಿನ ಕಡೆ ಪರಾರಿಯಾಗಲು ಯತ್ನಿಸಿದ್ದ. ಆದರೆ ಘಟನೆ ನಡೆದು 1 ಗಂಟೆಯಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ನಮ್ಮ ಪೊಲೀಸರ ತಂಡ ಯಶಸ್ವಿಯಾಗಿದೆ ಎಂದು ಹೇಳಿದರು.
ಘಟನೆ ಖಂಡಿಸಿ ಪ್ರತಿಭಟನೆ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಪ್ರತಿಭಟನೆ ಮಾಡಲಿ. ನಾವು ಎಲ್ಲದಕ್ಕೂ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದರು.
ನಾಳೆ (ಏ.23) ಮಧ್ಯಾಹ್ನ 12ಕ್ಕೆ 2026 SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ ಮಾಡಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು…
ಇತ್ತೀಚೆಗೆ ಮಹಾರಾಷ್ಟ್ರದ ನಾಸಿಕ್ ನಲ್ಲಿ ಉದ್ಯೋಗದ ನೆಪದಲ್ಲಿ ಹೆಣ್ಣುಮಕ್ಕಳನ್ನು ಬಲವಂತಾಗಿ ಮತಾಂತರ ಮಾಡುವ ವಿಚಾರ ದೊಡ್ಡ ದುರಂತ ಪ್ರಕರಣವಾಗಿದೆ. ಇದರ…
ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಎನ್ ದುರ್ಗಶ್ರೀ ಅವರನ್ನು ವರ್ಗಾವಣೆ ಮಾಡಲಾಗಿದೆ. ನೂತನ ಎಸಿಯಾಗಿ ಮಂಜುನಾಥ್ ಟಿ.ಆರ್ ಅವರನ್ನು ನೇಮಕ ಮಾಡಲಾಗಿದೆ...
ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಗೇಟ್ ಮುಂಭಾಗ ಸರಣಿ ಅಪಘಾತ ನಡೆದಿದೆ. ಘಟನೆಯಲ್ಲಿ ಬಸ್, ಕಾರುಗಳ ನಡುವೆ ಡಿಕ್ಕಿ ಸಂಭವಿಸಿದೆ. ಅಡ್ಡಬಂದ…
ಜಾತ್ರೆ ನಡೆದ ಮರು ದಿನವೇ ಲಕ್ಷ್ಮೀ ದೇವಾಲಯದಲ್ಲಿ ಕಳ್ಳತನ ನಡೆದಿರುವ ಘಟನೆ ದೊಡ್ಡಬಳ್ಳಾಪುರದ ಹಾದ್ರೀಪುರ ಗ್ರಾಮದಲ್ಲಿ ನಡೆದಿದೆ... ದೇವಾಲಯದ ಬಾಗಿಲು…
ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತನೆ ಮಾಡುವ ಪ್ರಕ್ರಿಯೆಯನ್ನು ಸರಳೀಕರಿಸುವ ಉದ್ದೇಶದಿಂದ ಅಫಿಡವಿಟ್ ಆಧಾರಿತ ಭೂಪರಿವರ್ತನೆ ಅರ್ಜಿಗಳನ್ನು ನಿಗದಿತ ಅವಧಿಯಲ್ಲಿ…