ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಚಾಲಕ ಯುವತಿ ಮೇಲೆ ಬಸ್ ಹತ್ತಿಸಲು ಯತ್ನಿಸಿರುವ ಘಟನೆ ಕಸ್ತೂರ್ಬಾ ರಸ್ತೆಯ ಕ್ಷೀನ್ಸ್ ಜಂಕ್ಷನ್ (ಎಂ.ಜಿ.ರಸ್ತೆ) ಬಳಿ ನಡೆದಿದೆ.
ಮೇ 23ರ ಸಂಜೆ 5.40ಕ್ಕೆ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಬಿಎಂಟಿಸಿ ಬಸ್ ಚಾಲಕ ಮತ್ತು ಯುವತಿ ನಡುವೆ ಗಲಾಟೆಯಾಗಿದೆ. ಈ ಹಿನ್ನೆಲೆ ಕ್ಷೀನ್ಸ್ ಜಂಕ್ಷನ್ನಲ್ಲಿ ಕಾರಿನಿಂದ ಇಳಿದ ಯುವತಿ ಬಿಎಂಟಿಸಿ ಬಸ್ ಚಾಲಕನನ್ನು ಪ್ರಶ್ನೆ ಮಾಡುತ್ತಿದ್ದರು. ಆದರೆ, ಚಾಲಕ ಯುವತಿಯ ಮೇಲೆ ಬಸ್ ನುಗ್ಗಿಸಿದ್ದಾನೆ.
ಯುವತಿ ಕೂದಲೆಳೆ ಅಂತರದಲ್ಲಿ ತಪ್ಪಿಸಿಕೊಂಡಿದ್ದು, ಸ್ವಲ್ಪ ಯಾಮಾರಿದ್ದರು ಯುವತಿಯ ಜೀವಕ್ಕೆ ಕುತ್ತು ಬರುತ್ತಿತ್ತು. ಚಾಲಕನ ಕೃತ್ಯ ಕಂಡು ಜನ ಬೆಚ್ಚಿಬಿದ್ದಿದ್ದಾರೆ.
ಇನ್ನು, ಯುವತಿಯ ಮೇಲೆ ಬಸ್ ಹತ್ತಿಸಲು ಯತ್ನಿಸಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಬಿಎಂಟಿಸಿ ಬಸ್ ಚಾಲಕ ಅಮಾನತು
ಯುವತಿ ಮೇಲೆ ಬಿಎಂಟಿಸಿ ಬಸ್ ಹತ್ತಿಸಲು ಮುಂದಾಗಿದ್ದ ಚಾಲಕ ಪ್ರಶಾಂತ್ ಅವರನ್ನು ಅಮಾನತುಗೊಳಿಸಲಾಗಿದೆ. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ ಮೇರೆಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಅಮಾನತುಗೊಳಿಸಿ ಆದೇಶ ಹೊರಡಿಸಿದೆ.
ಬೈಕ್-ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ…
ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯು ಆಗ್ರಿಸ್ಟಾಕ್ ಘಟಕದಡಿಯಲ್ಲಿ ಕೇಂದ್ರ ಸರ್ಕಾರದ ಮಾನದಂಡಗಳನ್ನು ಅಳವಡಿಸಿ ಭೂಹಿಡುವಳಿಗಳನ್ನು ಹೊಂದಿರುವ ರಾಜ್ಯದ…
ತಾಲ್ಲೂಕು ಕೇಂದ್ರದಲ್ಲಿ ಮಾತ್ರವಲ್ಲದೆ ಗ್ರಾ.ಪಂ ಮಟ್ಟದಲ್ಲಿ ಮನರೇಗಾ ಯೋಜನೆ ಉಳಿಸಲು ಹೋರಾಟ ನಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಎಸ್.ಟಿ ಘಟಕದ…
ದೊಡ್ಡಬಳ್ಳಾಪುರ ನಗರ: ನವಚೇತನ ಆಸ್ಪತ್ರೆ ಉಷ್ಟ್ರತಿ ಎನ್ಜಿಓ, ಡಿ ಎಸ್ ಜಿ ಸ್ಪೋರ್ಟ್ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರಯನ್ನು…
ರಾಜ್ಯ ರಾಜಕೀಯದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೇರಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಬಳಿ…
ನಮ್ಮ ನಾಯಕರು ಮತ್ತು ಉಗ್ರ ಧರ್ಮ ಹಾಗು ರಾಷ್ಟ್ರೀಯವಾದ..... ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು..... ತಾವೇ ಸೃಷ್ಟಿಸಿಕೊಂಡ, ನಾವೇ…