ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಚಾಲಕ ಯುವತಿ ಮೇಲೆ ಬಸ್ ಹತ್ತಿಸಲು ಯತ್ನಿಸಿರುವ ಘಟನೆ ಕಸ್ತೂರ್ಬಾ ರಸ್ತೆಯ ಕ್ಷೀನ್ಸ್ ಜಂಕ್ಷನ್ (ಎಂ.ಜಿ.ರಸ್ತೆ) ಬಳಿ ನಡೆದಿದೆ.
ಮೇ 23ರ ಸಂಜೆ 5.40ಕ್ಕೆ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಬಿಎಂಟಿಸಿ ಬಸ್ ಚಾಲಕ ಮತ್ತು ಯುವತಿ ನಡುವೆ ಗಲಾಟೆಯಾಗಿದೆ. ಈ ಹಿನ್ನೆಲೆ ಕ್ಷೀನ್ಸ್ ಜಂಕ್ಷನ್ನಲ್ಲಿ ಕಾರಿನಿಂದ ಇಳಿದ ಯುವತಿ ಬಿಎಂಟಿಸಿ ಬಸ್ ಚಾಲಕನನ್ನು ಪ್ರಶ್ನೆ ಮಾಡುತ್ತಿದ್ದರು. ಆದರೆ, ಚಾಲಕ ಯುವತಿಯ ಮೇಲೆ ಬಸ್ ನುಗ್ಗಿಸಿದ್ದಾನೆ.
ಯುವತಿ ಕೂದಲೆಳೆ ಅಂತರದಲ್ಲಿ ತಪ್ಪಿಸಿಕೊಂಡಿದ್ದು, ಸ್ವಲ್ಪ ಯಾಮಾರಿದ್ದರು ಯುವತಿಯ ಜೀವಕ್ಕೆ ಕುತ್ತು ಬರುತ್ತಿತ್ತು. ಚಾಲಕನ ಕೃತ್ಯ ಕಂಡು ಜನ ಬೆಚ್ಚಿಬಿದ್ದಿದ್ದಾರೆ.
ಇನ್ನು, ಯುವತಿಯ ಮೇಲೆ ಬಸ್ ಹತ್ತಿಸಲು ಯತ್ನಿಸಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಬಿಎಂಟಿಸಿ ಬಸ್ ಚಾಲಕ ಅಮಾನತು
ಯುವತಿ ಮೇಲೆ ಬಿಎಂಟಿಸಿ ಬಸ್ ಹತ್ತಿಸಲು ಮುಂದಾಗಿದ್ದ ಚಾಲಕ ಪ್ರಶಾಂತ್ ಅವರನ್ನು ಅಮಾನತುಗೊಳಿಸಲಾಗಿದೆ. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ ಮೇರೆಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಅಮಾನತುಗೊಳಿಸಿ ಆದೇಶ ಹೊರಡಿಸಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…
ಭಾರತ ಸಾಹಿತ್ಯದ ನೊಬೆಲ್ ಎಂದೇ ಹೆಸರಾದ ಜ್ಞಾನಪೀಠ ಪ್ರಶಸ್ತಿ ಸಾಹಿತ್ಯ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ಮಾತ್ರವಲ್ಲ, ಅದನ್ನು ಪಡೆದ ವ್ಯಕ್ತಿಗಳು…
ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…
ಕಳೆದ 13 ವರ್ಷಗಳಿಂದ ಕೋಮಾ ಸ್ಥಿತಿಯಲ್ಲಿ ಬದುಕುತ್ತಿದ್ದ 32 ವರ್ಷ ವಯಸ್ಸಿನ ಹರೀಶ್ ರಾಣಾ ಅವರಿಗೆ ಕುಟುಂಬಸ್ಥರು ಭಾವುಕ ವಿದಾಯ…
ರಾಜ್ಯದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…
ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…