ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಚಾಲಕ ಯುವತಿ ಮೇಲೆ ಬಸ್ ಹತ್ತಿಸಲು ಯತ್ನಿಸಿರುವ ಘಟನೆ ಕಸ್ತೂರ್ಬಾ ರಸ್ತೆಯ ಕ್ಷೀನ್ಸ್ ಜಂಕ್ಷನ್ (ಎಂ.ಜಿ.ರಸ್ತೆ) ಬಳಿ ನಡೆದಿದೆ.
ಮೇ 23ರ ಸಂಜೆ 5.40ಕ್ಕೆ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಬಿಎಂಟಿಸಿ ಬಸ್ ಚಾಲಕ ಮತ್ತು ಯುವತಿ ನಡುವೆ ಗಲಾಟೆಯಾಗಿದೆ. ಈ ಹಿನ್ನೆಲೆ ಕ್ಷೀನ್ಸ್ ಜಂಕ್ಷನ್ನಲ್ಲಿ ಕಾರಿನಿಂದ ಇಳಿದ ಯುವತಿ ಬಿಎಂಟಿಸಿ ಬಸ್ ಚಾಲಕನನ್ನು ಪ್ರಶ್ನೆ ಮಾಡುತ್ತಿದ್ದರು. ಆದರೆ, ಚಾಲಕ ಯುವತಿಯ ಮೇಲೆ ಬಸ್ ನುಗ್ಗಿಸಿದ್ದಾನೆ.
ಯುವತಿ ಕೂದಲೆಳೆ ಅಂತರದಲ್ಲಿ ತಪ್ಪಿಸಿಕೊಂಡಿದ್ದು, ಸ್ವಲ್ಪ ಯಾಮಾರಿದ್ದರು ಯುವತಿಯ ಜೀವಕ್ಕೆ ಕುತ್ತು ಬರುತ್ತಿತ್ತು. ಚಾಲಕನ ಕೃತ್ಯ ಕಂಡು ಜನ ಬೆಚ್ಚಿಬಿದ್ದಿದ್ದಾರೆ.
ಇನ್ನು, ಯುವತಿಯ ಮೇಲೆ ಬಸ್ ಹತ್ತಿಸಲು ಯತ್ನಿಸಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಬಿಎಂಟಿಸಿ ಬಸ್ ಚಾಲಕ ಅಮಾನತು
ಯುವತಿ ಮೇಲೆ ಬಿಎಂಟಿಸಿ ಬಸ್ ಹತ್ತಿಸಲು ಮುಂದಾಗಿದ್ದ ಚಾಲಕ ಪ್ರಶಾಂತ್ ಅವರನ್ನು ಅಮಾನತುಗೊಳಿಸಲಾಗಿದೆ. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ ಮೇರೆಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಅಮಾನತುಗೊಳಿಸಿ ಆದೇಶ ಹೊರಡಿಸಿದೆ.
ಶ್ರಮಿಕ ವರ್ಗದವರು ಹಾಗೂ ಅವರ ಅವಲಂಬಿತರಿಗೆ ಉಚಿತ ವೈದ್ಯಕೀಯ ಸೇವೆಗಳನ್ನು ಒದಗಿಸುವಲ್ಲಿ ಇಎಸ್ಐಸಿ ಆಸ್ಪತ್ರೆಯು ವರದಾನವಾಗಲಿದೆ. ಎಲ್ಲಾ ಕಾರ್ಮಿಕರು ವೈದ್ಯಕೀಯ…
. ಕೊನಘಟ್ಟ ಪ್ರೀಮಿಯರ್ ಲೀಗ್(ಕೆಪಿಎಲ್ ಸೀಸನ್-1) ನ್ನು ಕೊನಘಟ್ಟ ಗ್ರಾಮದಲ್ಲಿ ಆಯೋಜನೆ ಮಾಡಲಾಗಿತ್ತು. ಅಂತಿಮ ಹಣಾಹಣಿಯಲ್ಲಿ 'ಎ' ತಂಡವನ್ನು ಮಣಿಸಿ…
ದೊಡ್ಡಬಳ್ಳಾಪುರ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಮೇ.2ರ ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ…
ದೊಡ್ಡಬಳ್ಳಾಪುರ ನಗರದ ಕೊಂಗಾಡಿಯಪ್ಪ ಮುಖ್ಯರಸ್ತೆ ತ್ಯಾಗರಾಜ ನಗರ ಆನೆಬಯಲು ಡೌನಿನ ರಸ್ತೆಯಲ್ಲಿ ಕಳೆದ 15 ದಿನಗಳಿಂದ ಒಳಚರಂಡಿಯ ಮ್ಯಾನ್ ಹೋಲ್…
ಶಿಕ್ಷಣ ಕ್ಷೇತ್ರದ ಬಗ್ಗೆ ಪರೀಕ್ಷೆಗಳ ಫಲಿತಾಂಶಗಳು ಪ್ರಕಟವಾಗುತ್ತಿರುವ ಈ ಸಂದರ್ಭದಲ್ಲಿ....... ಶಿಕ್ಷಣ... ಜ್ಞಾನಾರ್ಜನೆಗಾಗಿಯೇ, ಉದ್ಯೋಗಕ್ಕಾಗಿಯೇ, ಬದುಕಿಗಾಗಿಯೇ, ಸಾಧನೆಗಾಗಿಯೇ, ಪೋಷಕರ ಒತ್ತಾಯಕ್ಕಾಗಿಯೇ,…
ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಇಂದು ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…