Categories: ಕೋಲಾರ

ಯುವನಿಧಿಗೆ ಅರ್ಜಿ ಸಲ್ಲಿಸಿ ಸದುಪಯೋಗ ಪಡಿಸಿಕೊಳ್ಳಲು ಮುನಿಯಪ್ಪ ಮನವಿ

ಕೋಲಾರ: ರಾಜ್ಯದ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವ ನಿಧಿ ಯೋಜನೆಯಡಿ ಪದವೀಧರ ನಿರುದ್ಯೋಗಿ ಯುವಕರಿಗೆ ಮಾಸಿಕ 3,000 ರೂ ನಿರುದ್ಯೋಗ ಭತ್ಯೆ ನೀಡಲಾಗುತ್ತಿದ್ದು ಹೆಚ್ಚು ಪ್ರಚಾರ ಮಾಡುವಂತೆ ತಾಲೂಕು ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ವಿ.ಎಂ ಮುನಿಯಪ್ಪ ತಿಳಿಸಿದರು

ನಗರದ ಹೊರವಲಯದ ಮಂಗಸಂದ್ರದ ಸ್ನಾತಕೋತ್ತರ ಕೇಂದ್ರದಲ್ಲಿ ತಾಲೂಕು ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಸಮಿತಿಯಿಂದ ವಿಧ್ಯಾರ್ಥಿಗಳಿಗೆ ಮಾಹಿತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ರಾಜ್ಯ ಸರಕಾರದ ಯುವನಿಧಿಗೆ ಹೆಚ್ಚೆಚ್ಚು ನಿರುದ್ಯೋಗಿ ಪದವೀಧರರನ್ನು ನೋಂದಾಯಿಸುವಂತೆ ಮಾಡಬೇಕು ಪ್ರತಿಯೊಂದು ಕಾಲೇಜುಗಳಲ್ಲಿ ನೋಂದಣಿಗೆ ಸಂಬಂಧಿಸಿದಂತೆ ಅಭಿಯಾನ ನಡೆಸಬೇಕು ವಿಧ್ಯಾರ್ಥಿಗಳು ಒಬ್ಬರಿಂದ ಇನ್ನೊಬ್ಬರಿಗೆ ಪ್ರಚಾರ ಮಾಡಿ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು

ಪದವೀಧರ, ಸ್ನಾತಕೋತ್ತರ ಪದವೀಧರರರಿಗೆ ತಿಂಗಳಿಗೆ 3 ಸಾವಿರ. ಹಾಗೂ ಡಿಪ್ಲೊಮಾ ಮಾಡಿದವರಿಗೆ 1,500 ರೂಪಾಯಿಗಳ ನಿರುದ್ಯೋಗ ಭತ್ತೆ ನೀಡಲಾಗುತ್ತಿದೆ ಉದ್ಯೋಗ ಮಾಡುತ್ತಿಲ್ಲ ರಾಜ್ಯದವರು ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ ತೇರ್ಗಡೆ ಹೊಂದಿದರು ಉದ್ಯೋಗ ಸಿಗದಿರುವ ಹಾಗೂ ಉನ್ನತ ವ್ಯಾಸಂಗಕ್ಕೆ ದಾಖಲಾಗದವರು ನೋಂದಣಿ ಮಾಡಬಹುದು ನೋಂದಾಯಿಸಲು ನೋಂದಣಿ ಸಹಾಯ ಕೇಂದ್ರಗಳನ್ನು ಕಾಲೇಜುಗಳಲ್ಲಿ ತೆಗೆಯಲಾಗುತ್ತದೆ ಎಂದರು

ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ವೈ ಶಿವಕುಮಾರ್ ಮಾತನಾಡಿ ಸರ್ಕಾರವು ನುಡಿದಂತೆ ನಡೆಯುತ್ತಿದೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ನೇರವಾಗಿ ಪಲಾನುಭವಿಗಳಿಗೆ ಸೌಲಭ್ಯಗಳನ್ನು ಒದಗಿಸುತ್ತಿದೆ ಇದರ ಸದುಪಯೋಗ ಪಡಿಸಿಕೊಂಡು ಆರ್ಥಿಕವಾಗಿ ಜೀವನ ಮಟ್ಟವನ್ನು ಸುಧಾರಿಸಿಕೊಳ್ಳಲು ಸಹಕಾರಿಯಾಗಿದೆ ಯೋಜನೆಗಳ ಅರ್ಜಿ ಸಲ್ಲಿಸಲು ಮನವಿ ಮಾಡಿದರು

ಈ ಸಂದರ್ಭದಲ್ಲಿ ಬೆಂಗಳೂರು ಉತ್ತರ ವಿವಿ ಸ್ನಾತಕೋತ್ತರ ಕೇಂದ್ರದ ಮುಖ್ಯಸ್ಥೆ ಕುಮದಾ, ತಾಪಂ ಇಒ ಮಂಜುನಾಥ್, ನೆಹರು ಯುವ ಕೇಂದ್ರದ ಶ್ರೀನಿವಾಸ್, ಪಿಡಿಒ ಮಂಜುನಾಥ್ ಪ್ರಸಾದ್ ಮುಂತಾದವರು ಇದ್ದರು

Ramesh Babu

Journalist

Recent Posts

ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಸಮಸ್ಯೆ ಉಂಟಾದಲ್ಲಿ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ- ಡಿಸಿ ಡಾ. ಕೆ.ಎನ್ ಅನುರಾಧ

ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…

11 hours ago

ಶೀಘ್ರದಲ್ಲೇ ಹೋಟೆಲ್ ಗಳಿಗೂ ಅಡಿಗೆ ಅನಿಲ ಪೂರೈಕೆ – ಆಹಾರ ಸಚಿವ ಕೆ ಎಚ್ ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…

16 hours ago

‘ಪ್ರಸಾದ್ 2.0’ (PRASHAD 2.0) ಯೋಜನೆಯಡಿ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಸಮಗ್ರ ಅಭಿವೃದ್ಧಿ ವಿಚಾರ: ಶ್ರೀ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್ ಸಂತಸ

ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…

16 hours ago

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…

24 hours ago

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

2 days ago