Categories: ಕೋಲಾರ

ಯುವನಿಧಿಗೆ ಅರ್ಜಿ ಸಲ್ಲಿಸಿ ಸದುಪಯೋಗ ಪಡಿಸಿಕೊಳ್ಳಲು ಮುನಿಯಪ್ಪ ಮನವಿ

ಕೋಲಾರ: ರಾಜ್ಯದ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವ ನಿಧಿ ಯೋಜನೆಯಡಿ ಪದವೀಧರ ನಿರುದ್ಯೋಗಿ ಯುವಕರಿಗೆ ಮಾಸಿಕ 3,000 ರೂ ನಿರುದ್ಯೋಗ ಭತ್ಯೆ ನೀಡಲಾಗುತ್ತಿದ್ದು ಹೆಚ್ಚು ಪ್ರಚಾರ ಮಾಡುವಂತೆ ತಾಲೂಕು ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ವಿ.ಎಂ ಮುನಿಯಪ್ಪ ತಿಳಿಸಿದರು

ನಗರದ ಹೊರವಲಯದ ಮಂಗಸಂದ್ರದ ಸ್ನಾತಕೋತ್ತರ ಕೇಂದ್ರದಲ್ಲಿ ತಾಲೂಕು ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಸಮಿತಿಯಿಂದ ವಿಧ್ಯಾರ್ಥಿಗಳಿಗೆ ಮಾಹಿತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ರಾಜ್ಯ ಸರಕಾರದ ಯುವನಿಧಿಗೆ ಹೆಚ್ಚೆಚ್ಚು ನಿರುದ್ಯೋಗಿ ಪದವೀಧರರನ್ನು ನೋಂದಾಯಿಸುವಂತೆ ಮಾಡಬೇಕು ಪ್ರತಿಯೊಂದು ಕಾಲೇಜುಗಳಲ್ಲಿ ನೋಂದಣಿಗೆ ಸಂಬಂಧಿಸಿದಂತೆ ಅಭಿಯಾನ ನಡೆಸಬೇಕು ವಿಧ್ಯಾರ್ಥಿಗಳು ಒಬ್ಬರಿಂದ ಇನ್ನೊಬ್ಬರಿಗೆ ಪ್ರಚಾರ ಮಾಡಿ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು

ಪದವೀಧರ, ಸ್ನಾತಕೋತ್ತರ ಪದವೀಧರರರಿಗೆ ತಿಂಗಳಿಗೆ 3 ಸಾವಿರ. ಹಾಗೂ ಡಿಪ್ಲೊಮಾ ಮಾಡಿದವರಿಗೆ 1,500 ರೂಪಾಯಿಗಳ ನಿರುದ್ಯೋಗ ಭತ್ತೆ ನೀಡಲಾಗುತ್ತಿದೆ ಉದ್ಯೋಗ ಮಾಡುತ್ತಿಲ್ಲ ರಾಜ್ಯದವರು ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ ತೇರ್ಗಡೆ ಹೊಂದಿದರು ಉದ್ಯೋಗ ಸಿಗದಿರುವ ಹಾಗೂ ಉನ್ನತ ವ್ಯಾಸಂಗಕ್ಕೆ ದಾಖಲಾಗದವರು ನೋಂದಣಿ ಮಾಡಬಹುದು ನೋಂದಾಯಿಸಲು ನೋಂದಣಿ ಸಹಾಯ ಕೇಂದ್ರಗಳನ್ನು ಕಾಲೇಜುಗಳಲ್ಲಿ ತೆಗೆಯಲಾಗುತ್ತದೆ ಎಂದರು

ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ವೈ ಶಿವಕುಮಾರ್ ಮಾತನಾಡಿ ಸರ್ಕಾರವು ನುಡಿದಂತೆ ನಡೆಯುತ್ತಿದೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ನೇರವಾಗಿ ಪಲಾನುಭವಿಗಳಿಗೆ ಸೌಲಭ್ಯಗಳನ್ನು ಒದಗಿಸುತ್ತಿದೆ ಇದರ ಸದುಪಯೋಗ ಪಡಿಸಿಕೊಂಡು ಆರ್ಥಿಕವಾಗಿ ಜೀವನ ಮಟ್ಟವನ್ನು ಸುಧಾರಿಸಿಕೊಳ್ಳಲು ಸಹಕಾರಿಯಾಗಿದೆ ಯೋಜನೆಗಳ ಅರ್ಜಿ ಸಲ್ಲಿಸಲು ಮನವಿ ಮಾಡಿದರು

ಈ ಸಂದರ್ಭದಲ್ಲಿ ಬೆಂಗಳೂರು ಉತ್ತರ ವಿವಿ ಸ್ನಾತಕೋತ್ತರ ಕೇಂದ್ರದ ಮುಖ್ಯಸ್ಥೆ ಕುಮದಾ, ತಾಪಂ ಇಒ ಮಂಜುನಾಥ್, ನೆಹರು ಯುವ ಕೇಂದ್ರದ ಶ್ರೀನಿವಾಸ್, ಪಿಡಿಒ ಮಂಜುನಾಥ್ ಪ್ರಸಾದ್ ಮುಂತಾದವರು ಇದ್ದರು

Ramesh Babu

Journalist

Recent Posts

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

9 minutes ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

4 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

5 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

6 hours ago

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

16 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

18 hours ago