Categories: ಕೋಲಾರ

ಯುವನಿಧಿಗೆ ಅರ್ಜಿ ಸಲ್ಲಿಸಿ ಸದುಪಯೋಗ ಪಡಿಸಿಕೊಳ್ಳಲು ಮುನಿಯಪ್ಪ ಮನವಿ

ಕೋಲಾರ: ರಾಜ್ಯದ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವ ನಿಧಿ ಯೋಜನೆಯಡಿ ಪದವೀಧರ ನಿರುದ್ಯೋಗಿ ಯುವಕರಿಗೆ ಮಾಸಿಕ 3,000 ರೂ ನಿರುದ್ಯೋಗ ಭತ್ಯೆ ನೀಡಲಾಗುತ್ತಿದ್ದು ಹೆಚ್ಚು ಪ್ರಚಾರ ಮಾಡುವಂತೆ ತಾಲೂಕು ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ವಿ.ಎಂ ಮುನಿಯಪ್ಪ ತಿಳಿಸಿದರು

ನಗರದ ಹೊರವಲಯದ ಮಂಗಸಂದ್ರದ ಸ್ನಾತಕೋತ್ತರ ಕೇಂದ್ರದಲ್ಲಿ ತಾಲೂಕು ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಸಮಿತಿಯಿಂದ ವಿಧ್ಯಾರ್ಥಿಗಳಿಗೆ ಮಾಹಿತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ರಾಜ್ಯ ಸರಕಾರದ ಯುವನಿಧಿಗೆ ಹೆಚ್ಚೆಚ್ಚು ನಿರುದ್ಯೋಗಿ ಪದವೀಧರರನ್ನು ನೋಂದಾಯಿಸುವಂತೆ ಮಾಡಬೇಕು ಪ್ರತಿಯೊಂದು ಕಾಲೇಜುಗಳಲ್ಲಿ ನೋಂದಣಿಗೆ ಸಂಬಂಧಿಸಿದಂತೆ ಅಭಿಯಾನ ನಡೆಸಬೇಕು ವಿಧ್ಯಾರ್ಥಿಗಳು ಒಬ್ಬರಿಂದ ಇನ್ನೊಬ್ಬರಿಗೆ ಪ್ರಚಾರ ಮಾಡಿ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು

ಪದವೀಧರ, ಸ್ನಾತಕೋತ್ತರ ಪದವೀಧರರರಿಗೆ ತಿಂಗಳಿಗೆ 3 ಸಾವಿರ. ಹಾಗೂ ಡಿಪ್ಲೊಮಾ ಮಾಡಿದವರಿಗೆ 1,500 ರೂಪಾಯಿಗಳ ನಿರುದ್ಯೋಗ ಭತ್ತೆ ನೀಡಲಾಗುತ್ತಿದೆ ಉದ್ಯೋಗ ಮಾಡುತ್ತಿಲ್ಲ ರಾಜ್ಯದವರು ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ ತೇರ್ಗಡೆ ಹೊಂದಿದರು ಉದ್ಯೋಗ ಸಿಗದಿರುವ ಹಾಗೂ ಉನ್ನತ ವ್ಯಾಸಂಗಕ್ಕೆ ದಾಖಲಾಗದವರು ನೋಂದಣಿ ಮಾಡಬಹುದು ನೋಂದಾಯಿಸಲು ನೋಂದಣಿ ಸಹಾಯ ಕೇಂದ್ರಗಳನ್ನು ಕಾಲೇಜುಗಳಲ್ಲಿ ತೆಗೆಯಲಾಗುತ್ತದೆ ಎಂದರು

ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ವೈ ಶಿವಕುಮಾರ್ ಮಾತನಾಡಿ ಸರ್ಕಾರವು ನುಡಿದಂತೆ ನಡೆಯುತ್ತಿದೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ನೇರವಾಗಿ ಪಲಾನುಭವಿಗಳಿಗೆ ಸೌಲಭ್ಯಗಳನ್ನು ಒದಗಿಸುತ್ತಿದೆ ಇದರ ಸದುಪಯೋಗ ಪಡಿಸಿಕೊಂಡು ಆರ್ಥಿಕವಾಗಿ ಜೀವನ ಮಟ್ಟವನ್ನು ಸುಧಾರಿಸಿಕೊಳ್ಳಲು ಸಹಕಾರಿಯಾಗಿದೆ ಯೋಜನೆಗಳ ಅರ್ಜಿ ಸಲ್ಲಿಸಲು ಮನವಿ ಮಾಡಿದರು

ಈ ಸಂದರ್ಭದಲ್ಲಿ ಬೆಂಗಳೂರು ಉತ್ತರ ವಿವಿ ಸ್ನಾತಕೋತ್ತರ ಕೇಂದ್ರದ ಮುಖ್ಯಸ್ಥೆ ಕುಮದಾ, ತಾಪಂ ಇಒ ಮಂಜುನಾಥ್, ನೆಹರು ಯುವ ಕೇಂದ್ರದ ಶ್ರೀನಿವಾಸ್, ಪಿಡಿಒ ಮಂಜುನಾಥ್ ಪ್ರಸಾದ್ ಮುಂತಾದವರು ಇದ್ದರು

Ramesh Babu

Journalist

Recent Posts

ಮಹತ್ವಾಕಾಂಕ್ಷಿ ಕ್ವಿನ್ ಸಿಟಿಗೆ ಮೊದಲ ಬೃಹತ್ ಹೂಡಿಕೆ ಒಪ್ಪಂದ

ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…

8 hours ago

108 ಅರೋಗ್ಯ ಕವಚ ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರ ಉದ್ಘಾಟನೆ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ…

8 hours ago

SIR ಜಾಗೃತಿ ಹಾಗೂ ಮತದಾರರ ಪಟ್ಟಿಯ ಸಂರಕ್ಷಣೆ ಕಾರ್ಯಕ್ಕೆ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…

19 hours ago

ಸಚಿವ ಸ್ಥಾನ ತ್ಯಾಗ ಮಾಡುವ ವಿಚಾರ “ಹೈಕಮಾಂಡ್ ತೀರ್ಮಾನಕ್ಕೆ ಬದ್ದ”- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…

19 hours ago

ಬಿಜೆಪಿ – ಕಾಂಗ್ರೆಸ್ ನಡುವೆ SIR ಫೈಟ್: ಕಾಂಗ್ರೆಸ್ ನಾಯಕರ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ಕಿಡಿ

ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…

22 hours ago

ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲೇಶ್ ರಾಜೀನಾಮೆ ನೀಡಿದ್ದು, ತೆರವಾದ ಸ್ಥಾನಕ್ಕೆ…

1 day ago