ನಿರುದ್ಯೋಗಿ ಯುವಕರಿಗೆ ‘ಯುವ ನಿಧಿ’ ಕೊಡುವ ಜತೆಗೆ, ಉದ್ಯೋಗ ಸೃಷ್ಟಿಸುವ ಮತ್ತು ಉದ್ಯೋಗ ಮಾಡಲು ಅಗತ್ಯವಾದ ತರಬೇತಿಗಳನ್ನೂ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಮೈದಾನದಲ್ಲಿ ನಡೆದ ‘ಯುವ ಸಮೃದ್ಧಿ ಸಮ್ಮೇಳನ ಮತ್ತು ಬೃಹತ್ ಉದ್ಯೋಗ ಮೇಳ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನಿರುದ್ಯೋಗ ದೇಶದ ಪ್ರಮುಖ ಸಮಸ್ಯೆಯಾಗಿದೆ. ಕಳೆದ 10 ವರ್ಷಗಳಲ್ಲಿ ನಿರುದ್ಯೋಗ ಪ್ರಮಾಣ ಬೃಹತ್ತಾಗಿ ಬೆಳೆದಿದೆ. 2014 ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇನೆ ಎಂದು ಭರವಸೆ ನೀಡಿ ಯುವ ಸಮೂಹದ ಮತ ಗಳಿಸಿದರು. ಈ 10 ವರ್ಷದಲ್ಲಿ 20 ಕೋಟಿ ಉದ್ಯೋಗ ಸೃಷ್ಟಿಸಬೇಕಿದ್ದ ಮೋದಿಯವರು, ಇರುವ ಉದ್ಯೋಗಗಳನ್ನೂ ಕಸಿದುಕೊಂಡಿದ್ದಾರೆ. ಹೀಗಾಗಿ ಪ್ರತೀ ವರ್ಷ ನಿರುದ್ಯೋಗ ಪ್ರಮಾಣ ಬೃಹತ್ತಾಗಿ ಬೆಳೆಯುತ್ತಾ 8.40% ಗೆ ಏರಿಕೆಯಾಗಿದೆ ಎಂದರು.
ಹೊಸ ಹೊಸ ಉದ್ಯೋಗ ಸೃಷ್ಟಿ ಮತ್ತು ತರಬೇತಿಗಾಗಿ ಈಗಿರುವ GTDC ಗಳ ಜತೆಗೆ ಹೊಸದಾಗಿ ಇನ್ನಷ್ಟು GTDC ಗಳನ್ನು ಸ್ಥಾಪನೆ ಮಾಡಲಾಗುವುದು ಎಂದು ತಿಳಿಸಿದರು.
ವೈದ್ಯಕೀಯ ಶಿಕ್ಷಣ ಸಚಿವರಾದ ಶರಣಪ್ರಕಾಶ್ ಪಾಟೀಲ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಕೌಶಲ್ಯಾಭಿವೃದ್ಧಿ ಇಲಾಖೆಯ ಉನ್ನತ ಅಧಿಕಾರಿಗಳು, ನೂರಾರು ಉದ್ಯಮಿಗಳು, ಸುಮಾರು 80 ಸಾವಿರಕ್ಕೂ ಅಧಿಕ ಉದ್ಯೋಗಾಕಾಂಕ್ಷಿ ಯುವ ಜನರು ಹಾಜರಿದ್ದರು.
ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್ಸ್ಪೆಕ್ಟರ್ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…
ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್…
ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ…
ಹೈದರಾಬಾದ್: ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳಿಗೆ ಆಕೆಯ ಪ್ರಿಯಕರನೇ HIV ಪಾಸಿಟಿವ್ ಇಂಜಕ್ಷನ್ ಚುಚ್ಚಿದ ಆಘಾತಕಾರಿ ಘಟನೆ ಹೈದರಾಬಾದ್ನ ಮೆಡ್ಚಲ್ ಪ್ರದೇಶದಲ್ಲಿ…
ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…
ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಆಡಳಿತಾಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ…